Webdunia - Bharat's app for daily news and videos

Install App

ಒಲಿಂಪಿಕ್ಸ್: ಕ್ವಾ.ಫೈನಲ್ ತಲುಪಿದ ನಾಲ್ವರಿಗೂ ಡಿಎಸ್‌ಪಿ ಹುದ್ದೆ

Webdunia
ಶನಿವಾರ, 23 ಆಗಸ್ಟ್ 2008 (09:34 IST)
ಒಲಿಂಪಿಕ್ಸ್‌ನಲ್ಲಿ ಕ್ವಾರ್ಟರ್ ಫೈನಲ್ ತಲುಪಿದ ಹರಿಯಾಣದ ಬಾಕ್ಸ್‌ರ್‌ಗಳಾದ ವಿಜಯೆಂದರ್ ಕುಮಾರ್, ಜಿತೆಂದರ್ ಕುಮಾರ್ ಮತ್ತು ಅಖಿಲ್ ಕುಮಾರ್ ಮತ್ತು ಕುಸ್ತಿಪಟು ಯೋಗೇಶ್ವರ್ ದತ್ ಅವರುಗಳನ್ನು ಡೆಪ್ಯೂಟಿ ಸೂಪರಿಡೆಂಟ್ ಅಫ್ ಪೊಲೀಸ್ ಆಗಿ ನಿಯೋಜಿಸಲಾಗುವುದು ಎಂದು ಹರಿಯಾಣ ಸರಕಾರ ಘೋಷಿಸಿದೆ.

ಅವರು ಒಲಿಂಪಿಕ್ಸ್‌ನಲ್ಲಿ ಮಾಡಿದ ಪ್ರಮುಖ ಸಾಧನೆಗಳನ್ನು ಗುರುತಿಸಿ ಪುರಸ್ಕರಿಸುವ ನಿಟ್ಟಿನಲ್ಲಿ ಮೂವರು ಬಾಕ್ಸ್‌ರ್‌ಗಳು ಮತ್ತು ಕುಸ್ತಿಪಟುವನ್ನು ಡಿಎಸ್‌ಪಿ ಆಗಿ ನಿಯೋಜಿಸುವ ನಿರ್ಣಯವನ್ನು ಕೈಗೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಭೂಪಿಂದರ್ ಹೂಡ ಹೇಳಿಕೆಯೊಂದರಲ್ಲಿ ತಿಳಿಸಿದ್ದಾರೆ.

ಬಾಕ್ಸಿಂಗ್ ಕೋಚ್ ಜಗದೀಶ್ ಸಿಂಗ್ ಅವರಿಗೆ ಸರಕಾರ 25ಲಕ್ಷ ನಗದು ಪುರಸ್ಕಾರ ಪ್ರಕಟಿಸಿದೆ. ಹರಿಯಾಣದ ಮೂವರು ಬಾಕ್ಸ್‌ರ್‌‌ಗಳಿಗೂ ಜಗದೀಶ್ ಸಿಂಗ್ ತರಬೇತುದಾರರಾಗಿ ಕಾರ್ಯ ನಿರ್ವಹಿಸಿದ್ದರು.

ಬಾಕ್ಸ್‌ರ್‌ಗಳು ಮತ್ತು ಕುಸ್ತುಪಟುವನ್ನು ಡಿಎಸ್‌ಪಿ ಆಗಿ ನಿಯೋಜಿಸುವ ನಿರ್ಣಯದ ಹೊರತಾಗಿ, ಶುಕ್ರವಾರ ಸೆಮಿಫೈನಲ್‌ನಲ್ಲಿ ಸೋಲು ಕಂಡ ವಿಜಯೆಂದರ್‌ಗೆ ಹರಿಯಾಣ ಸರಕಾರ ಈಗಾಗಲೇ 50ಲಕ್ಷ ಪುರಸ್ಕಾರವನ್ನು ಘೋಷಿಸಿದೆ ಮತ್ತು ಜಿತೆಂದರ್ ಕುಮಾರ್, ಅಖಿಲ್ ಕುಮಾರ್ ಮತ್ತು ಯೋಗೇಶ್ವರ್ ದತ್ ಅವರಿಗೆ ತಲಾ 25ಲಕ್ಷ ಪುರಸ್ಕಾರವನ್ನು ಪ್ರಕಟಿಸಲಾಗಿದೆ.

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

Show comments