Webdunia - Bharat's app for daily news and videos

Install App

ಕುಸ್ತಿಪಟುವಿನ ಕೊಲೆ ಪ್ರಕರಣದಲ್ಲಿ ಒಲಿಂಪಿಕ್ ಡಬಲ್‌ ಪದಕ ವಿಜೇತ ಸುಶೀಲ್ ಕುಮಾರ್‌ಗೆ ಬಿಗ್‌ ರಿಲೀಫ್‌

Sampriya
ಮಂಗಳವಾರ, 4 ಮಾರ್ಚ್ 2025 (14:32 IST)
Photo Courtesy X
ನವದೆಹಲಿ:  ಕೊಲೆ ಪ್ರಕರಣದಲ್ಲಿ ಒಲಿಂಪಿಕ್ ಪದಕ ವಿಜೇತ ಕುಸ್ತಿಪಟು ಸುಶೀಲ್ ಕುಮಾರ್ ಅವರಿಗೆ ದೆಹಲಿ ಹೈಕೋರ್ಟ್‌ನಿಂದ ಬಿಗ್‌ ರಿಲೀಫ್‌ ಸಿಕ್ಕಿದೆ.

ರಾಷ್ಟ್ರೀಯ ಜೂನಿಯರ್ ಕುಸ್ತಿ ಚಿನ್ನದ ಪದಕ ವಿಜೇತ ಸಾಗರ್ ಧಂಖರ್ ಅವರ ಕೊಲೆ ಆರೋಪದ ಮೇಲೆ ಜೈಲಿನಲ್ಲಿದ್ದ ಒಲಿಂಪಿಕ್ ಪದಕ ವಿಜೇತ ಕುಸ್ತಿಪಟು ಸುಶೀಲ್ ಕುಮಾರ್ ಅವರಿಗೆ ಹೈಕೋರ್ಟ್ ನಿಯಮಿತ ಜಾಮೀನು ಮಂಜೂರು ಮಾಡಿದೆ.

ಕೊಲೆ ಪ್ರಕರಣದಡಿ 2021ರ ಜೂನ್ 2ರಂದು  ಸುಶೀಲ್ ಕುಮಾರ್ ಅವರನ್ನು ಬಂಧಿಸಲಾಗಿತ್ತು. 2023ರ ಜುಲೈನಲ್ಲಿ ಮೊಣಕಾಲು ಶಸ್ತ್ರಚಿಕಿತ್ಸೆಗಾಗಿ ಅವರಿಗೆ 7 ದಿನಗಳ ಮಧ್ಯಂತರ ಜಾಮೀನು ನೀಡಲಾಗಿತ್ತು. ಇದಾದ ಬಳಿಕ ಮತ್ತೆ ಜೈಲು ಪಾಲಾಗಿದ್ದರು.

ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ 2021ರ ಮೇ 4ರಂದು ದೆಹಲಿಯ ಛತ್ರಸಾಲ್ ಕ್ರೀಡಾಂಗಣದ ಪಾರ್ಕಿಂಗ್ ಸ್ಥಳದಲ್ಲಿ ಸಾಗರ್ ಧಂಖರ್ ಮತ್ತು ಅವರ ಸ್ನೇಹಿತರಾದ ಜೈ ಭಗವಾನ್ ಮತ್ತು ಭಗತ್ ಮೇಲೆ ಸುಶೀಲ್ ಕುಮಾರ್ ಅವರು ಹಲ್ಲೆ ನಡೆಸಿದ್ದಾರೆಂಬ ಆರೋಪವಿದೆ. ಈ ದಾಳಿಯಲ್ಲಿ ಗಾಯಗೊಂಡಿದ್ದ ಸಾಗರ್ ಧಂಖರ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದರು.

ಸುಶೀಲ್ ಕುಮಾರ್ ಅವರು 2008 ರ ಬೀಜಿಂಗ್ ಒಲಿಂಪಿಕ್ಸ್‌ನಲ್ಲಿ ಕಂಚಿನ ಪದಕ ಗೆದಿದ್ದರು. 2012 ರ ಲಂಡನ್ ಒಲಿಂಪಿಕ್ಸ್‌ನಲ್ಲಿ ಬೆಳ್ಳಿ ಪದಕಕ್ಕೆ ಕೊರಳೊಡ್ಡಿದ್ದರು. ಹೀಗೆ ಸತತ ಎರಡು ಒಲಿಂಪಿಕ್ಸ್‌ನಲ್ಲಿ ಪದಕ ಗೆದ್ದ ಮೊದಲ ಭಾರತೀಯ ಎಂಬ ಹೆಗ್ಗಳಿಕೆಗೆ ಸುಶೀಲ್ ಕುಮಾರ್ ಪಾತ್ರರಾಗಿದ್ದರು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Bengaluru Stampede: ತಮ್ಮ ವಿರುದ್ಧದ ಎಫ್‌ಐಆರ್‌ಗಳನ್ನು ರದ್ದುಗೊಳಿಸುವಂತೆ ಕೋರ್ಟ್‌ ಮೆಟ್ಟಿಲೇರಿದ RCB

R Ashwin video: ಮಹಿಳಾ ಅಂಪಾಯರ್ ಮೇಲೆ ಆರ್ ಅಶ್ವಿನ್ ರೋಷಾವೇಷ

IPL 2026: ಟ್ರೋಫಿ ಗೆದ್ದ ಬೆನ್ನಲ್ಲೇ ಆರ್ ಸಿಬಿ ಐಪಿಎಲ್ ನಿಂದ ಬ್ಯಾನ್

ಕ್ರಿಕೆಟಿಗ ರಿಂಕು ಸಿಂಗ್‌ ನಿಶ್ಚಿತಾರ್ಥ: ಕೈ ಹಿಡಿಯಲಿರುವ ಯುವತಿ ಹಿನ್ನೆಲೆ ಕೇಳಿದ್ರೆ ಶಾಕ್ ಆಗ್ತೀರಾ

French Open: ಯಾನಿಕ್‌ ಸಿನ್ನರ್‌- ಕಾರ್ಲೋಸ್‌ ಅಲ್ಕರಾಜ್‌ ಪೈಪೋಟಿಯಲ್ಲಿ ಯಾರಿಗೆ ಒಲಿಯಲಿದೆ ಫ್ರೆಂಚ್‌ ಓಪನ್‌ ಕಿರೀಟ

ಮುಂದಿನ ಸುದ್ದಿ
Show comments