Webdunia - Bharat's app for daily news and videos

Install App

ವಿವಾದದ ಬಳಿಕ ಕೊನೆಗೂ ಮನು ಭಾಕರ್ ಹೆಸರು ಖೇಲ್ ರತ್ನ ಅವಾರ್ಡ್ ಗೆ ಸೇರ್ಪಡೆ

Krishnaveni K
ಬುಧವಾರ, 25 ಡಿಸೆಂಬರ್ 2024 (10:52 IST)
ನವದೆಹಲಿ: ವಿವಾದದ ಬಳಿಕ ಎಚ್ಚೆತ್ತುಕೊಂಡ ಕೇಂದ್ರ ಸರ್ಕಾರ ಕೊನೆಗೂ ಖೇಲ್ ರತ್ನ ಅವಾರ್ಡ್ ಗೆ ಒಲಿಂಪಿಕ್ಸ್ ಪದಕ ವಿಜೇತೆ ಶೂಟರ್ ಮನು ಭಾಕರ್ ಹೆಸರು ಸೇರ್ಪಡೆಗೊಳಿಸಿದೆ.

ಈ ಮೊದಲು ಮನು ಭಾಕರ್ ಹೆಸರು ಕೈ ಬಿಟ್ಟಿದ್ದು ಭಾರೀ ವಿವಾದಕ್ಕೆ ಒಳಗಾಗಿತ್ತು. ಮನು ಭಾಕರ್ ಅರ್ಜಿ ಸಲ್ಲಿಸಿಲ್ಲ ಎಂದು ಕ್ರೀಡಾ ಸಮಿತಿ ಹೇಳಿದರೆ ಇತ್ತ ಮನು ಭಾಕರ್ ತಂದೆ ಆಕೆ ಅರ್ಜಿ ಸಲ್ಲಿಸಿದ್ದಳು ಎಂದಿದ್ದರು. ದೇಶಕ್ಕಾಗಿ ಎರಡು ಪದಕ ಗೆದ್ದ ಮೇಲೂ ಪ್ರಶಸ್ತಿಗಾಗಿ ಭಿಕ್ಷೆ ಬೇಡಬೇಕೇ? ಎಂದು ಬೇಸರ ವ್ಯಕ್ತಪಡಿಸಿದ್ದರು.

ಅಲ್ಲದೆ ಮನು ಭಾಕರ್ ಕೂಡಾ ಬೇಸರಗೊಂಡಿದ್ದರು. ನಾನು ಒಲಿಂಪಿಕ್ಸ್ ಪದಕ ಗೆದ್ದಿದ್ದೇ ವ್ಯರ್ಥ ಎಂದು ಬೇಸರ ವ್ಯಕ್ತಪಡಿಸಿದ್ದಾರೆ ಎಂದು ಅವರ ತಂದೆ ಹೇಳಿಕೊಂಡಿದ್ದರು. ಇದರ ಬೆನ್ನಲ್ಲೇ ಸೋಷಿಯಲ್ ಮೀಡಿಯಾದಲ್ಲೂ ಸಾರ್ವಜನಿಕರಿಂದ ಆಕ್ರೋಶ ವ್ಯಕ್ತವಾಗಿತ್ತು.

ಇದರ ಬೆನ್ನಲ್ಲೇ ಈಗ ಮನು ಭಾಕರ್ ಹೆಸರು ಸೇರ್ಪಡೆಗೊಳಿಸಲು ಸ್ವತಃ ಕ್ರೀಡಾ ಸಚಿವ ಮನುಸುಖ್ ಮಾಂಡವಿಯಾ ಸೂಚನೆ ನೀಡಿದ್ದಾರೆ ಎನ್ನಲಾಗಿದೆ. ಹೀಗಾಗಿ ಕೊನೆಯ ಕ್ಷಣದಲ್ಲಿ ಹಾಕಿ ನಾಯಕ ಹರ್ಮನ್ ಪ್ರೀತ್ ಸಿಂಗ್, ಪ್ಯಾರಾ ಅಥ್ಲೆಟ್ ಪ್ರವೀಣ್ ಕುಮಾರ್ ಜೊತೆಗೆ ಮನು ಭಾಕರ್ ಹೆಸರೂ ಸೇರ್ಪಡೆಗೊಂಡಿದೆ ಎನ್ನಲಾಗಿದೆ. ಈ ಬಗ್ಗೆ ಅಧಿಕೃತ ಘೋಷಣೆ ಇನ್ನಷ್ಟೇ ಬರಬೇಕಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಇದನ್ನು ನಂಬಲು ಅಸಾಧ್ಯ, ಸಿರಾಜ್ ಪ್ರದರ್ಶನಕ್ಕೆ ಬೇಷ್ ಎಂದ ಕ್ರಿಕೆಟ್ ದೇವರು ಸಚಿನ್

ENG vs IND Test: ಭಾರತದ ಬೌಲರ್‌ಗಳ ವಿರುದ್ಧ ಗಂಭೀರ ಆರೋಪ ಎಸಗಿದ ಪಾಕ್‌ ವೇಗಿ

ಇಂಗ್ಲೆಂಡ್ ಟೆಸ್ಟ್ ಸರಣಿಯಲ್ಲಿ ಸ್ಟಾರ್ ಆಗಿದ್ದರೂ ಕೆಎಲ್ ರಾಹುಲ್ ಗೆ ಹೀಗ್ಯಾಕೆ

ನೀವು ಗ್ರೇಟ್‌: ಸಿರಾಜ್‌ಗೆ ಭಾವನಾತ್ಮಕ ಸಂದೇಶ ಕಳುಹಿಸಿದ ವಿರಾಟ್ ಕೊಹ್ಲಿ ಸಹೋದರಿ

ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ 2027 ರ ವಿಶ್ವಕಪ್ ಕನಸಿಗೆ ಬಿಸಿಸಿಐ ಕೊಳ್ಳಿ

ಮುಂದಿನ ಸುದ್ದಿ
Show comments