Webdunia - Bharat's app for daily news and videos

Install App

ಚೆಟ್ಟಿನಾಡ್‌ ಚಿಕನ್‌ ಸಾಂಬಾರ್‌

ಅತಿಥಾ
ಗುರುವಾರ, 4 ಜನವರಿ 2018 (15:55 IST)
ಬೇಕಾಗುವ ಸಾಮಾಗ್ರಿಗಳು:
 
ಚಿಕನ್‌ 1/2 ಕೆಜಿ(ಚಿಕ್ಕದಾಗಿ ಕತ್ತರಿಸಿದ್ದು)
ಶುಂಠಿ ಹಾಗೂ ಬೆಳ್ಳುಳ್ಳಿ ಪೇಸ್ಟ್‌-1 ಚಮಚ
ಹಸಿ ಮೆಣಸಿನಕಾಯಿ 2-3
ಈರುಳ್ಳಿ 1
ಟೊಮೆಟೊ 2
ಒಂದು ಇಂಚು ಚಕ್ಕೆ
ಲವಂಗ 2
ಕೊತ್ತಂಬರಿ ಪುಡಿ 1 ಚಮಚ
ಖಾರದ ಪುಡಿ 1/2 ಚಮಚ
ಜೀರಿಗೆ 1 ಚಮಚ
ಏಲಕ್ಕಿ 2
ಕರಿಮೆಣಸು 2-3
ಜೀರಿಗೆ 1/2 ಚಮಚ
ಸಾಸಿವೆ 1/2 ಚಮಚ
ಉಪ್ಪು
ಎಣ್ಣೆ 2 ಚಮಚ
ಕರಿ ಬೇವಿನ ಎಲೆ
ತಯಾರಿಸುವ ವಿಧಾನ:
 
ಪಾತ್ರೆಗೆ ಎಣ್ಣೆ ಹಾಕಿ ಬಿಸಿ ಮಾಡಿ ಅದಕ್ಕೆ ಸಾಸಿವೆ, ಜೀರಿಗೆ ಹಾಕಿ ಜೀರಿಗೆ ಚಟಾಪಟ ಶಬ್ದ ಬರುವಾಗ ಚಕ್ಕೆ, ಲವಂಗ,ಕರಿ ಬೇವಿನ ಎಲೆ, ಶುಂಠಿ-ಬೆಳ್ಳುಳ್ಳಿ ಪೇಸ್ಟ್‌, ಏಲಕ್ಕಿ, ಹೆಚ್ಚಿದ ಈರುಳ್ಳಿ ಹಾಕಿ ಸ್ವಲ್ಪ ಹೊತ್ತು ಹುರಿಯಿರಿ. ನಂತರ ಹಸಿ ಮೆಣಸಿನಕಾಯಿ ಹಾಗೂ ಟೊಮೆಟೊ ಹಾಕಿ ಸೌಟ್‌ನಿಂದ ತಿರುಗಿಸಿ. ಚಿಕನ್‌ ಹಾಕಿ 2 ನಿಮಿಷ ಸೌಟ್‌ನಿಂದ ತಿರುಗಿಸಿ, ಅರಿಶಿಣ ಹಾಗೂ ಸ್ವಲ್ಪ ಖಾರದ ಪುಡಿ, ಕೊತ್ತಂಬರಿ ಪುಡಿ, ರುಚಿಗೆ ತಕ್ಕಷ್ಟು ಉಪ್ಪು ಹಾಕಿ, ಬೇಯಲು ಬೇಕಾಗುವಷ್ಟು ನೀರು ಹಾಕಿ ಬೇಯಿಸಿ. ಆಗಾಗ ಸೌಟ್‌ನಿಂದ ತಿರುಗಿಸುತ್ತಾ ಇರಿ. ಚಿಕನ್‌ ಬೆಂದ ನಂತರ ಉರಿಯಿಂದ ಇಳಿಸಿ, ಅದರ ಮೇಲೆ ಕರಿ ಮೆಣಸಿನ ಪುಡಿ ಉದುರಿಸಿದರೆ ಚೆಟ್ಟಿನಾಡ್‌ ಚಿಕನ್‌ ಸಾಂಬಾರ್‌ ರೆಡಿ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಹೀಗೇ ಮಾಡಿದರೆ ಮಕ್ಕಳಲ್ಲಿ ಕಟ್ಟುನಿಟ್ಟಾಗಿರದೆ ಶಿಸ್ತುಬದ್ಧವಾಗಿ ಬೆಳೆಸಬಹುದು

Men health: ಪುರುಷರಲ್ಲಿ ಬಂಜೆತನ ನಿವಾರಣೆಯಾಗಬೇಕೆಂದರೆ ಇದೊಂದು ಜ್ಯೂಸ್ ಸಾಕು

Baby tips: ಚಿಕ್ಕ ಮಕ್ಕಳಿಗೆ ತಲೆನೋವಾಗುತ್ತಿದ್ದರೆ ಇದುವೇ ಬೆಸ್ಟ್ ಮೆಡಿಸಿನ್

ನಿಮ್ಮ ಮಕ್ಕಳ ಶಬ್ದ ಭಂಡಾರವನ್ನು ಹೆಚ್ಚಿಸಲು ಇಲ್ಲಿದೆ ಕೆಲ ಟಿಪ್ಸ್‌

ರಂಜಾನ್ ಉಪವಾಸದಲ್ಲಿ ಖರ್ಜೂರಕ್ಕೆ ಯಾಕೆ ಸಖತ್ ಡಿಮ್ಯಾಂಡ್‌

ಮುಂದಿನ ಸುದ್ದಿ
Show comments