Webdunia - Bharat's app for daily news and videos

Install App

ಹುಡುಗರೇ ಹಣ ಉಳಿಸಬೇಕಾ…? (ವಿಡಿಯೋ ನೋಡಿ)

Webdunia
ಶನಿವಾರ, 25 ನವೆಂಬರ್ 2017 (11:27 IST)
ಉಡುಪಿ: ಸಂಸಾರದ ತಾಪತ್ರಯಗಳಿಗೆ ಹೆಗಲುಕೊಟ್ಟು ದೂರದ ಊರಿನಲ್ಲಿ ಕೆಲಸ ಮಾಡಿಕೊಂಡು ಇರುವ ಹುಡುಗರಿಗೆ ಅಡುಗೆ ಮಾಡುವುದೇ ದೊಡ್ಡ ತಲೆಬಿಸಿ. ಸಂಸಾರಸ್ಥರಾದರೆ ಹೆಂಡತಿ ರುಚಿ ರುಚಿಯಾಗಿ ಅಡುಗೆ ಮಾಡುತ್ತಾಳೆ ತಿಂದುಂಡು ಮಲಗಿದರೆ ಮುಗಿಯಿತು. ಆದರೆ ಇನ್ನು ಮದುವೆಯಾಗದೇ ಇರುವ ಹುಡುಗರ ಪರಿಸ್ಥಿತಿ ತುಸು ಕಷ್ಟ ಎನ್ನಬಹುದು.


ಎರಡಂಕಿ ಸಂಬಳ ಪಡೆದುಕೊಂಡು ಹೋಟೆಲ್ ನಲ್ಲಿ ಊಟ ಮಾಡಿಕೊಂಡು ಆಮೇಲೆ ಸಾಲ ಮಾಡಿಕೊಂಡು ತಲೆ ಕೆಡಿಸಿಕೊಳ್ಳುವ ಹುಡುಗರೇ ಇರುವಾಗ ಉಡುಪಿ ಜಿಲ್ಲೆಯ ಯಡ್ತಾಡಿ ಗ್ರಾಮದ ಯೋಗೀಶ್ ಎಂ. ಶೆಟ್ಟಿ ಎಂಬುವರು ಮದುವೆಯಾಗದ ಹುಡುಗರು ಮನೆಯಲ್ಲಿಯೇ ಸರಳವಾಗಿ ಅಡುಗೆ ಮಾಡಿಕೊಂಡು ಹೇಗೆ ಹಣವನ್ನು ಉಳಿಸಬಹುದು ಜತೆಗೆ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು ಎಂದು ತಿಳಿಸಿಕೊಟ್ಟಿದ್ದಾರೆ.


ರಜಾ ದಿನಗಳಲ್ಲಿ ಹುಡುಗರು ತಡವಾಗಿ ಎದ್ದು ಬೆಳಿಗ್ಗೆ ಹೋಟೆಲ್ ನಲ್ಲಿ ತಿಂಡಿ ತಿಂದು ಮಧ್ಯಾಹ್ನ ಪುನಃ ಊಟಕ್ಕಾಗಿ ಹೋಟೆಲ್ ಗೆ ಹೋಗುತ್ತಾರೆ. ರಾತ್ರಿ ಮತ್ತೆ ಗೆಳೆಯರೆಲ್ಲಾ ಸೇರಿಕೊಂಡು ಪಾರ್ಟಿ ಎಂದು ಹೊರಗೆ ಹೋಗುತ್ತಾರೆ. ವಾರಾಂತ್ಯದಲ್ಲಿ ರಜೆಯಲ್ಲಿ ಹುಡುಗರು ಹೊರಗಡೆ ಊಟ ಮಾಡುವುದಕ್ಕೆಂದೇ ಸುಮಾರು 2 ಸಾವಿರದ ತನಕ ಖರ್ಚುಮಾಡುತ್ತಾರೆ. ಇದರ ಬದಲು 300-400 ಹಣ ಕೊಟ್ಟು ಮೀನು/ ಕೋಳಿ ತಂದು ಮನೆಯಲ್ಲಿಯೇ ಅಡುಗೆ ಮಾಡಿಕೊಂಡರೇ ಆರೋಗ್ಯಕ್ಕೂ ಒಳ್ಳೆಯದು, ಹಣವೂ ಉಳಿತಾಯವಾಗುತ್ತದೆ ಎನ್ನುತ್ತಾರೆ ಖಾಸಗಿ ಕಂಪೆನಿಯೊಂದರಲ್ಲಿ ಕೆಲಸ ಮಾಡುತ್ತಿರುವ ಯೋಗೀಶ್.




ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಕಲ್ಲಂಗಡಿ ಹಣ್ಣನ್ನು ಫ್ರಿಡ್ಜ್ ನಲ್ಲಿಟ್ಟು ಸೇವಿಸುತ್ತಿದ್ದೀರೆ ಇದನ್ನು ಓದಿ

ಪೇಟೆಯಿಂದ ತಂದ ಮಾವಿನ ಹಣ್ಣು ಸೇವಿಸುವ ಮೊದಲು ಈ ಟಿಪ್ಸ್ ಫಾಲೋ ಮಾಡಿ

ಕ್ಯಾನ್ಸರ್ ರೋಗಕ್ಕೆ ಈ ಒಂದು ಹಣ್ಣು ರಾಮಬಾಣ

ಕಾರ್ನ್ ಸಿಲ್ಕ್ ಚಹಾ ಮಾಡಿ ಕುಡಿದರೆ ನಿಮ್ಮ ಈ ಅಂಗ ಸುರಕ್ಷಿತವಾಗಿರುತ್ತದೆ

ಮಾವಿನ ಹಣ್ಣು ತಿಂದರೆ ಶುಗರ್ ಹೆಚ್ಚಾಗುತ್ತಾ

ಮುಂದಿನ ಸುದ್ದಿ
Show comments