Publish Date: Sat, 13 Jan 2018 (08:09 IST)
Updated Date: Sat, 13 Jan 2018 (08:13 IST)
ಬೆಂಗಳೂರು: ಹೆಚ್ಚಿನವರಿಗೆ ಮಲಬದ್ಧತೆ ಸಮಸ್ಯೆ ಕಿರಿ ಕಿರಿಯಾಗಿ ಕಾಡುತ್ತದೆ. ಕೆಲವೊಮ್ಮೆ ಆಹಾರದಿಂದಾಗಿ ಅಥವಾ ವಾತಾವರಣದಿಂದಾಗಿ ಮಲ ವಿಸರ್ಜನೆ ಸರಿಯಾಗಿ ಆಗದೇ ಇರಬಹುದು. ಅದಕ್ಕೆ ಒಂದು ಸಿಂಪಲ್ ರೆಸಿಪಿ ಮಾಡಿ ತಿನ್ನಿ!
ಹೆಸರು ಬೇಳೆ ಮತ್ತು ಕಲ್ಲು ಸಕ್ಕರೆ ಇದ್ದರೆ ಈ ಸಮಸ್ಯೆ ನಿವಾರಿಸಬಹುದು. ಹೆಸರು ಬೇಳೆ ದೇಹಕ್ಕೆ ತಂಪು. ಹೀಗಾಗಿ ದೇಹ ಉಷ್ಣತೆಯಿಂದಾಗಿ ಬಹಿರ್ದೆಸೆ ಕಷ್ಟವಾದಾಗ ಇದನ್ನು ಸೇವಿಸಿದರೆ ಸುಗಮವಾಗುತ್ತದೆ.
ಮಾಡುವ ವಿಧಾನ
ಹೆಸರು ಬೇಳೆಯನ್ನು ಕೆಂಪಗಾಗುವ ತನಕ ಎಣ್ಣೆ ಹಾಕದೆ ಹುರಿದುಕೊಳ್ಳಿ. ನಂತರ ಇದಕ್ಕೆ ಸ್ವಲ್ಪ ಕಲ್ಲು ಸಕ್ಕರೆ ಸೇರಿಸಿ ಮಿಕ್ಸಿಯಲ್ಲಿ ನುಣ್ಣಗೆ ರುಬ್ಬಿ ಪುಡಿ ಮಾಡಿಟ್ಟುಕೊಳ್ಳಿ. ಇದನ್ನು ಗಾಳಿಯಾಡದ ಬಾಕ್ಸ್ ನಲ್ಲಿ ಹಾಕಿ ಮುಚ್ಚಿಟ್ಟರೆ ತಿಂಗಳುಗಳ ಕಾಲ ಹಾಳಾಗದಂತೆ ಇಡಬಹುದು. ಇದನ್ನು ನಿಯಮಿತವಾಗಿ ಸೇವಿಸುತ್ತಿದ್ದರೆ ಮಲಬದ್ಧತೆಯಿಂದ ಪರಿಹಾರ ಕಂಡುಕೊಳ್ಳಬಹುದು.
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ