Webdunia - Bharat's app for daily news and videos

Install App

ಮೆಂತ್ಯ ಸೊಪ್ಪಿನ ಪತ್ರೊಡೆ

Webdunia
ಶನಿವಾರ, 27 ಅಕ್ಟೋಬರ್ 2018 (16:01 IST)
ತಯಾರಿಸಲು ಬೇಕಾಗುವ ಸಾಮಗ್ರಿಗಳು :
 
 * ಅಕ್ಕಿ 3/4 ಕಪ್
* ಚಿಕ್ಕದಾಗಿ ಹೆಚ್ಚಿದ ಮೆಂತ್ಯ ಸೊಪ್ಪು ಒಂದೂವರೆ ಕಪ್
* ತೆಂಗಿನತುರಿ 1 ಕಪ್
* ನಿಂಬೆ ಹಣ್ಣು
* ಈರುಳ್ಳಿ 1 ಕಪ್
* ಧನಿಯಾ 2 ಟೀ ಚಮಚ
* ಜೀರಿಗೆ 2 ಟೀ ಚಮಚ
* ಕಡಲೆಬೇಳೆ 4 ಟೀ ಚಮಚ
* ಉದ್ದಿನಬೇಳೆ 4 ಟೀ ಚಮಚ
* ಸ್ವಲ್ಪ ಬೆಲ್ಲ
* ಮೆಣಸಿನಕಾಯಿ ಸ್ವಲ್ಪ
* ಸಾಸಿವೆ 1 ಟೀ ಚಮಚ
* ಅರಿಶಿನ 1/2 ಟೀ ಚಮಚ
* ಒಣಮೆಣಸಿನಕಾಯಿ 2
* ಕರಿಬೇವು
* ಎಣ್ಣೆ
 
ತಯಾರಿಸುವ ವಿಧಾನ :
 
ಮೊದಲು ಒಂದು ಬಟ್ಟಲಿನಲ್ಲಿ ಅಕ್ಕಿ, ಧನಿಯಾ, ಜೀರಿಗೆ, ಉದ್ದಿನಬೇಳೆ, ಕಡಲೇಬೇಳೆ, ಮೆಣಸಿನಕಾಯಿಯನ್ನು ನೀರು ಹಾಕಿ ಒಂದರಿಂದ ಒಂದೂವರೆ ಗಂಟೆ ನೆನೆಸಿಡಬೇಕು. ನಂತರ ಒಂದು ಮಿಕ್ಸಿ ಜಾರನ್ನು ತೆಗೆದುಕೊಂಡು ನೆನೆಸಿದ ಅಕ್ಕಿ, ಧನಿಯಾ, ಜೀರಿಗೆ, ಉದ್ದಿನಬೇಳೆ, ಕಡಲೆಬೇಳೆ ಮತ್ತು ಮೆಣಸಿನಕಾಯಿಯನ್ನು ಹಾಕಿ ಅದರೊಂದಿಗೆ ನಿಂಬೆರಸ, ತೆಂಗಿನಕಾಯಿ ತುರಿ, ಬೆಲ್ಲ ಮತ್ತು ಸ್ವಲ್ಪ ನೀರನ್ನು ಹಾಕಿ ತರಿತರಿಯಾಗಿ ರುಬ್ಬಿಕೊಳ್ಳಬೇಕು. ನಂತರ ಈ ಮಿಶ್ರಣಕ್ಕೆ ಮೆಂತ್ಯ ಸೊಪ್ಪನ್ನು ಹಾಕಬೇಕು. ಇದನ್ನು ಕುಕ್ಕರ್‌ನಲ್ಲಿ ವಿಷಲ್ ಹಾಕದೇ 1/2 ಗಂಟೆಯ ಕಾಲ ಬೇಯಿಸಬೇಕು. 
 
ಇದನ್ನು ಗ್ಯಾಸ್ ಇಂದ ಇಳಿಸಿ ಇದು ಆರಿದ ನಂತರ ಒಂದು ಬಾಣಲೆಯಲ್ಲಿ ಎಣ್ಣೆ ಬಿಸಿ ಮಾಡಿ ಅದಕ್ಕೆ ಸಾಸಿವೆ, ಕಡಲೇಬೇಳೆ, ಉದ್ದಿನಬೇಳೆ, ಒಣಮೆಣಸಿನಕಾಯಿ, ಚಿಕ್ಕದಾಗಿ ಕತ್ತರಿಸಿದ ಈರುಳ್ಳಿ, ಕರಿಬೇವು, 1/2 ಟೀ ಚಮಚ ಅರಿಶಿನವನ್ನು ಹಾಕಿ ಒಗ್ಗರಣೆ ಮಾಡಿಕೊಳ್ಳಬೇಕು. ಈಗ ಬೇಯಿಸಿಕೊಂಡ ಮೆಂತ್ಯ ಸೊಪ್ಪಿನ ಮಿಶ್ರಣವನ್ನು ಚಿಕ್ಕದಾಗಿ ಪುಡಿ ಮಾಡಿಕೊಳ್ಳಬೇಕು. ಈ ಪುಡಿಯನ್ನು ಒಗ್ಗರಣೆಯೊಂದಿಗೆ ಚೆನ್ನಾಗಿ ಮಿಶ್ರಣ ಮಾಡಬೇಕು. ಇದನ್ನು 5 ನಿಮಿಷ ಸಣ್ಣ ಉರಿಯಲ್ಲಿ ಬೇಯಿಸಿ ಸ್ವಲ್ಪ ತೆಂಗಿನಕಾಯಿ ತುರಿಯನ್ನು ಹಾಕಿ ಒಲೆಯಿಂದ ಇಳಿಸಿದರೆ ರುಚಿಯಾದ ಮೆಂತ್ಯ ಸೊಪ್ಪಿನ ಪತ್ರೊಡೆ ಸವಿಯಲು ಸಿದ್ಧ. 

ಸಂಬಂಧಿಸಿದ ಸುದ್ದಿ

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಕ್ಯಾನ್ಸರ್ ರೋಗಕ್ಕೆ ಈ ಒಂದು ಹಣ್ಣು ರಾಮಬಾಣ

ಕಾರ್ನ್ ಸಿಲ್ಕ್ ಚಹಾ ಮಾಡಿ ಕುಡಿದರೆ ನಿಮ್ಮ ಈ ಅಂಗ ಸುರಕ್ಷಿತವಾಗಿರುತ್ತದೆ

ಮಾವಿನ ಹಣ್ಣು ತಿಂದರೆ ಶುಗರ್ ಹೆಚ್ಚಾಗುತ್ತಾ

ರಕ್ತದೊತ್ತಡ ಕಡಿಮೆ ಮಾಡಲು ಈ ಒಂದು ಸಿಂಪಲ್ ಜ್ಯೂಸ್ ಸಾಕು

ತಲೆಕೂದಲಿನ ಸಂರಕ್ಷಣೆಗೆ ತೆಂಗಿನ ಹಾಲು ಬಳಸಿ ಈ ರೀತಿ ಮಾಡಿ

ಮುಂದಿನ ಸುದ್ದಿ
Show comments