ರವೆ ಖಾರದ ಉಂಡೆ

Webdunia
ಗುರುವಾರ, 21 ಫೆಬ್ರವರಿ 2019 (15:18 IST)
ಸಾಮಾನ್ಯವಾಗಿ ಮಕ್ಕಳಿಗೆ ಉಪ್ಪಿಟ್ಟೆಂದರೇನೆ ಅಲರ್ಜಿ ಅಲ್ಲವೇ. ಬಹಳಷ್ಟು ಮಕ್ಕಳು ಇಷ್ಟಪಟ್ಟು ತಿನ್ನುವುದೇ ಇಲ್ಲ. ಉಪ್ಪಿಟ್ಟನ್ನೇ ಸ್ವಲ್ಪ ವಿಭಿನ್ನವಾಗಿ ಅವರಿಗೆ ಇಷ್ಟವಾಗುವ ಆಕಾರದಲ್ಲಿ, ಅತ್ಯಂತ ಸುಲಭವಾಗಿ ಮಾಡಬಹುದು. ಹಾಗೇಯೇ ಇದು ಬೆಳಗಿನ ಉಪಹಾರಕ್ಕೆ ತುಂಬಾ ಸ್ವಾದಿಷ್ಟವಾಗಿರುತ್ತದೆ.
ಬೇಕಾಗುವ ಸಾಮಾಗ್ರಿಗಳು:
1 ಕಪ್ ಗೋಧಿ ರವೆ
4-5 ಟೀ ಸ್ಪೂನ್ ಎಣ್ಣೆ
1 ಟೀ ಸ್ಪೂನ್ ಅಚ್ಚಖಾರದ ಪುಡಿ
1/2 ಗರಂಮಸಾಲಾ ಪುಡಿ
1 ಟೀ ಸ್ಪೂನ್ ಧನಿಯಾ ಪುಡಿ
2-3 ಒಣ ಮೆಣಸಿನಕಾಯಿ
1/2 ಟೀ ಸ್ಪೂನ್ ಕರಿಮೆಣಸಿನಪುಡಿ
5-6 ಗೊಡಂಬಿ
ಚಿಟಿಕೆ ಅರಿಶಿಣ
ಬೇಕಾಗುವಷ್ಟು ಉಪ್ಪು
ಒಗ್ಗರಣೆಗೆ ಸಾಸಿವೆ, ಕಡಲೇ ಬೆಳೆ ಮತ್ತು ಉದ್ದಿನ ಬೇಳೆ
 
ಮಾಡುವ ವಿಧಾನ:
ಮೊದಲಿಗೆ ಬಾಣಲಿಯಲ್ಲಿ 1 1/2 ಲೋಟದಷ್ಟು ನೀರು ಕಾಯಿಸಿಕೊಂಡು ಅದಕ್ಕೆ ಹುರಿದುಕೊಂಡ ಗೋಧಿರವೆ ಮತ್ತು ಚಿಟಿಕೆ ಉಪ್ಪನ್ನು ಹಾಕಿ ಉಪ್ಪಿಟ್ಟಿನ ಹದದಲ್ಲಿ ಬೇಯಿಸಿಕೊಳ್ಳಬೇಕು. ಸ್ವಲ್ಪ ತಣ್ಣಗಾದ ನಂತರ ಅದಕ್ಕೆ ಸ್ವಲ್ಪ ಎಣ್ಣೆಹಾಕಿಕೊಂಡು ಚೆನ್ನಾಗಿ ಕಲಸಿ ಉಂಡೆ ಮಾಡಿಕೊಂಡು ಹಬೆಯಲ್ಲಿ ಬೇಯಿಸಿಕೊಳ್ಳಬೇಕು. ಮತ್ತೊಂದು ಬಾಣಲಿಯಲ್ಲಿ 4- 5 ಚಮಚ ಎಣ್ಣೆಹಾಕಿಕೊಂಡು ಒಗ್ಗರಣೆಗೆ ಸಾಸಿವೆ, ಉದ್ದಿನ ಬೇಳೆ, ಕಡಲೇ ಬೇಳೆ ಹಾಗೂ ಒಣಮೆಣಸಿನಕಾಯಿ, ಗೊಡಂಬಿ, 5-6 ಎಸಳು ಕರಿಬೇವು ಹಾಕಿಕೊಂಡು ಅದಕ್ಕೆ ಗರಂಮಸಾಲಾ ಪುಡಿ, ಅರಿಶಿಣ, ಧನಿಯಾ ಪುಡಿ, ಅಚ್ಚಖಾರದ ಪುಡಿ, ಕರಿಣೆಣಸು, ರುಚಿಗೆ ತಕ್ಕಷ್ಟು ಉಪ್ಪು ಹಾಕಿ ಹಬೆಯಲ್ಲಿ ಬೇಯಿಸಿಕೊಂಡ ಉಂಡೆಗಳನ್ನು ಅದರಲ್ಲಿ ಹಾಕಿ ಫ್ರೈ ಮಾಡಬೇಕು. ಹಚ್ಚಿಕೊಂಡ ಕೊತ್ತಂಬರಿ ಸೊಪ್ಪನ್ನು ಉದುರಿಸಿ ಬಿಸಿ ಬಿಸಿಯಾಗಿ ಸಾಸ್‌ನೊಂದಿಗೆ ಸವಿದರೆ ಚೆನ್ನಾಗಿರುತ್ತದೆ.     

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಚಳಿಗಾಲದಲ್ಲಿ ಹಿಮ್ಮಡಿ ಒಡೆಯುವುದಕ್ಕೆ ಕ್ವಿಕ್ ಆಗಿ ಹೀಗೆ ಮಾಡಿ

ಮಕ್ಕಳಲ್ಲಿ ಒತ್ತಡ ನಿವಾರಣೆಗೆ ಇದು ಬೆಸ್ಟ್ ದಾರಿ

ರಾತ್ರಿ ನಿದ್ದೆ ಬರುತ್ತಿಲ್ಲವೆಂದರೆ ಯಾವುದೇ ಕಾರಣಕ್ಕೂ ಮಲಗುವಾಗ ಈ ತಪ್ಪು ಮಾಡಬೇಡಿ

ಋತುಚಕ್ರದ ನೋವಿಗೆ ದಿಡೀರ್ ಮುಕ್ತಿ ಬೇಕೆಂದರೆ ಹೀಗೆ ಮಾಡಿ

ಉದ್ದಿನ ದೋಸೆ ತಿಂದು ಬೇಜಾರಾಗಿದ್ರೆ ಈ ರೀತಿ ಒಮ್ಮೆ ಟ್ರೈ ಮಾಡಿ

ಮುಂದಿನ ಸುದ್ದಿ
Show comments