Select Your Language

Notifications

webdunia
webdunia
webdunia
webdunia

ಕೃಷಿ ಕಾಯ್ದೆಗಳನ್ನು ಮತ್ತೆ ತರುವುದಿಲ್ಲ: ಕೇಂದ್ರ ಸ್ಪಷ್ಟನೆ

ಕೃಷಿ ಕಾಯ್ದೆಗಳನ್ನು ಮತ್ತೆ ತರುವುದಿಲ್ಲ: ಕೇಂದ್ರ ಸ್ಪಷ್ಟನೆ
ಭೋಪಾಲ್ , ಭಾನುವಾರ, 26 ಡಿಸೆಂಬರ್ 2021 (07:15 IST)
ಭೋಪಾಲ್ : ಈಗಾಗಲೇ ಹಿಂಪಡೆದಿರುವ ಕೃಷಿ ಕಾಯ್ದೆಗಳನ್ನು ಮತ್ತೆ ತರುವುದಿಲ್ಲ ಎಂದು ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಸ್ಪಷ್ಟಪಡಿಸಿದ್ದಾರೆ.

ಕೆಲವು ರಾಜ್ಯಗಳಿಗೆ ವಿಧಾನಸಭಾ ಚುನಾವಣೆ ನಡೆಯಲಿದೆ. ಅದಾದ ಬಳಿಕ ತಿದ್ದುಪಡಿಯೊಂದಿಗೆ ಕೃಷಿ ಕಾಯ್ದೆಗಳನ್ನು ಕೇಂದ್ರ ಸರ್ಕಾರ ಮತ್ತೆ ಜಾರಿಗೊಳಿಸಲಿದೆ ಎಂದು ಕಾಂಗ್ರೆಸ್ ಆರೋಪಿಸಿತ್ತು.
ಈ ಮಾತನ್ನು ಅಲ್ಲಗಳೆದಿರುವ ಕೃಷಿ ಸಚಿವ ತೋಮರ್, ಯಾವುದೇ ಕಾರಣಕ್ಕೂ ಕೃಷಿ ಕಾಯ್ದೆಗಳನ್ನು ಮತ್ತೆ ತರುವುದಿಲ್ಲ ಎಂದು ತಿಳಿಸಿದ್ದಾರೆ. 

ನಾಗ್ಪುರದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಕೃಷಿ ಕಾನೂನುಗಳ ಬಗ್ಗೆ ಮಾತನಾಡುವಾಗ, ಕೇಂದ್ರ ಸರ್ಕಾರ ದೂರದೃಷ್ಟಿಯಿಂದ ಕೃಷಿ ಕಾನೂನುಗಳನ್ನು ಜಾರಿಗೊಳಿಸಿತ್ತು. ಕಾರಣಾಂತರಗಳಿಂದ ಅವುಗಳನ್ನು ಹಿಂಪಡೆದಿದೆ. ರೈತರ ಕಲ್ಯಾಣಕ್ಕಾಗಿ ಕೇಂದ್ರ ಸರ್ಕಾರ ಸದಾ ಕ್ರಿಯಾಶೀಲವಾಗಿರುತ್ತದೆ ಎಂದು ತೋಮರ್ ಅಭಿಪ್ರಾಯಪಟ್ಟಿದ್ದಾರೆ.

ಸದ್ಯದಲ್ಲೇ ಐದು ರಾಜ್ಯಗಳಿಗೆ ನಡೆಯುವ ವಿಧಾನಸಭಾ ಚುನಾವಣೆ ನಂತರ ಕೃಷಿ ಕಾಯ್ದೆಗಳನ್ನು ಜಾರಿಗೆ ತರಲು ಸರ್ಕಾರ ಚಿಂತಿಸಿದೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲ ಮಾತನಾಡಿದ್ದರು.

ಮೂರು ಕೃಷಿ ಕಾಯ್ದೆಗಳನ್ನು ವಿರೋಧಿಸಿ ಸತತ ಒಂದು ವರ್ಷದಿಂದ ರೈತರು ಪ್ರತಿಭಟನೆ ನಡೆಸಿದ್ದರು. ರೈತರ ಪ್ರಬಲ ವಿರೋಧವನ್ನು ಅರಿತು ಕೇಂದ್ರ ಸರ್ಕಾರ ಮೂರು ಕೃಷಿ ಕಾಯ್ದೆಗಳನ್ನು ಹಿಂಪಡೆದಿತ್ತು.


Share this Story:

Follow Webdunia kannada

ಮುಂದಿನ ಸುದ್ದಿ

ರೈತರು ಪಂಜಾಬ್ ಚುನಾವಣೆಯಲ್ಲಿ ಕಣಕ್ಕೆ!?