Webdunia - Bharat's app for daily news and videos

Install App

ಕೃಷಿ ಕಾಯ್ದೆಗಳನ್ನು ಮತ್ತೆ ತರುವುದಿಲ್ಲ: ಕೇಂದ್ರ ಸ್ಪಷ್ಟನೆ

Webdunia
ಭಾನುವಾರ, 26 ಡಿಸೆಂಬರ್ 2021 (07:15 IST)
ಭೋಪಾಲ್ : ಈಗಾಗಲೇ ಹಿಂಪಡೆದಿರುವ ಕೃಷಿ ಕಾಯ್ದೆಗಳನ್ನು ಮತ್ತೆ ತರುವುದಿಲ್ಲ ಎಂದು ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಸ್ಪಷ್ಟಪಡಿಸಿದ್ದಾರೆ.

ಕೆಲವು ರಾಜ್ಯಗಳಿಗೆ ವಿಧಾನಸಭಾ ಚುನಾವಣೆ ನಡೆಯಲಿದೆ. ಅದಾದ ಬಳಿಕ ತಿದ್ದುಪಡಿಯೊಂದಿಗೆ ಕೃಷಿ ಕಾಯ್ದೆಗಳನ್ನು ಕೇಂದ್ರ ಸರ್ಕಾರ ಮತ್ತೆ ಜಾರಿಗೊಳಿಸಲಿದೆ ಎಂದು ಕಾಂಗ್ರೆಸ್ ಆರೋಪಿಸಿತ್ತು.
ಈ ಮಾತನ್ನು ಅಲ್ಲಗಳೆದಿರುವ ಕೃಷಿ ಸಚಿವ ತೋಮರ್, ಯಾವುದೇ ಕಾರಣಕ್ಕೂ ಕೃಷಿ ಕಾಯ್ದೆಗಳನ್ನು ಮತ್ತೆ ತರುವುದಿಲ್ಲ ಎಂದು ತಿಳಿಸಿದ್ದಾರೆ. 

ನಾಗ್ಪುರದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಕೃಷಿ ಕಾನೂನುಗಳ ಬಗ್ಗೆ ಮಾತನಾಡುವಾಗ, ಕೇಂದ್ರ ಸರ್ಕಾರ ದೂರದೃಷ್ಟಿಯಿಂದ ಕೃಷಿ ಕಾನೂನುಗಳನ್ನು ಜಾರಿಗೊಳಿಸಿತ್ತು. ಕಾರಣಾಂತರಗಳಿಂದ ಅವುಗಳನ್ನು ಹಿಂಪಡೆದಿದೆ. ರೈತರ ಕಲ್ಯಾಣಕ್ಕಾಗಿ ಕೇಂದ್ರ ಸರ್ಕಾರ ಸದಾ ಕ್ರಿಯಾಶೀಲವಾಗಿರುತ್ತದೆ ಎಂದು ತೋಮರ್ ಅಭಿಪ್ರಾಯಪಟ್ಟಿದ್ದಾರೆ.

ಸದ್ಯದಲ್ಲೇ ಐದು ರಾಜ್ಯಗಳಿಗೆ ನಡೆಯುವ ವಿಧಾನಸಭಾ ಚುನಾವಣೆ ನಂತರ ಕೃಷಿ ಕಾಯ್ದೆಗಳನ್ನು ಜಾರಿಗೆ ತರಲು ಸರ್ಕಾರ ಚಿಂತಿಸಿದೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲ ಮಾತನಾಡಿದ್ದರು.

ಮೂರು ಕೃಷಿ ಕಾಯ್ದೆಗಳನ್ನು ವಿರೋಧಿಸಿ ಸತತ ಒಂದು ವರ್ಷದಿಂದ ರೈತರು ಪ್ರತಿಭಟನೆ ನಡೆಸಿದ್ದರು. ರೈತರ ಪ್ರಬಲ ವಿರೋಧವನ್ನು ಅರಿತು ಕೇಂದ್ರ ಸರ್ಕಾರ ಮೂರು ಕೃಷಿ ಕಾಯ್ದೆಗಳನ್ನು ಹಿಂಪಡೆದಿತ್ತು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments