Publish Date: Mon, 22 Jan 2018 (16:09 IST)
Updated Date: Mon, 22 Jan 2018 (16:37 IST)
ಎನ್ಎಸ್ಜಿಯ ಪಥಸಂಚಲನ ತುಕಡಿಯು ಇತರ ತುಕಡಿಗಳೊಂದಿಗೆ ಹೆಜ್ಜೆ ಹಾಕಲಿವೆ ಎಂಬುದಾಗಿ ರಕ್ಷಣಾ ಸಚಿವಾಲಯದ ಮೂಲಗಳು ತಿಳಿಸಿವೆ.
ಇದುವರೆಗೆ ಗಣರಾಜ್ಯೋತ್ಸವದಲ್ಲಿ ಎನ್ಎಸ್ಜಿ ಪಾತ್ರ ಸಮಾರಂಭದಲ್ಲಿ ಭಾಗವಸುವ ಗಣ್ಯಾತಿಗಣ್ಯರಿಗೆ ಭದ್ರತೆ ಒದಗಿಸಲು ಮಾತ್ರ ಮೀಸಲಾಗಿತ್ತು.
ಎನ್ಎಸ್ಜಿಯನ್ನು 1984ರಲ್ಲಿ ಹುಟ್ಟುಹಾಕಲಾಗಿದ್ದು, ಭಯೋತ್ಪಾದಕರ ವಿರುದ್ಧ ಹೋರಾಟ ಮತ್ತು ರಾಷ್ಟ್ರದ ಉನ್ನತ ರಾಜಕೀಯ ನಾಯಕರ ರಕ್ಷಣಾ ಜವಾಬ್ದಾರಿಯ ಕಾರ್ಯವನ್ನು ವಹಿಸಲಾಗಿದೆ.
ಶಿಫಾರಸ್ಸು ಮಾಡಲಾಗಿರುವ ಸಿಬ್ಬಂದಿಗಳು ಸೇರಿದಂತೆ ಸರ್ಕಾರವು ಭದ್ರತಾ ಸಿಬ್ಬಂದಿಗಳಿಗೆ ಶೌರ್ಯ ಪ್ರಶಸ್ತಿ ನೀಡಲಿದೆ ಎಂದು ಮೂಲಗಳು ಹೇಳಿದೆ.
ಒಂಬತ್ತು ಮಂದಿಗೆ ಅಶೋಕ ಚಕ್ರ ಮತ್ತು ಇತರ ಐವರಿಗೆ ಸೂರ್ಯ ಚಕ್ರ ಮತ್ತು ಕೀರ್ತಿ ಚಕ್ರ ನೀಡಲಾಗುವುದು ಎಂಬುದಾಗಿ ಮೂಲಗಳು ಹೇಳಿವೆ.
ನವೆಂಬರ್ 26ರಂದು ಉಗ್ರರು ಮುಂಬೈಮೇಲೆ ದಾಳಿ ನಡೆಸಿ, ಒಬೇರಾಯ್, ತಾಜ್, ನಾರಿಮನ್ ಹೌಸನ್ನು ಆಕ್ರಮಿಸಿಕೊಂಡು ನರಮೇಧ ನಡೆಸಿದ ವೇಳೆ ಉಗ್ರರ ವಿರುದ್ಧ ದಿಟ್ಟತನದ ಹೋರಾಟ ನಡೆಸಿದ ಎನ್ಎಸ್ಜಿ ಉಗ್ರರ ಅಟ್ಟಹಾಸಕ್ಕೆ ಇತಿಶ್ರೀ ಹಾಡಿತ್ತು.