Webdunia - Bharat's app for daily news and videos

Install App

ಗಣರಾಜ್ಯೋತ್ಸವ ಹಿನ್ನೆಲೆ: ದೆಹಲಿಯಲ್ಲಿ ಬಿಗಿ ಭದ್ರತೆ

Webdunia
ಸೋಮವಾರ, 22 ಜನವರಿ 2018 (16:40 IST)
ಗಣರಾಜ್ಯೋತ್ಸವ ಹಿನ್ನೆಲೆಯಲ್ಲಿ ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಬಿಗಿ ಭದ್ರತೆಯನ್ನು ಕೈಗೊಳ್ಳಲಾಗಿದೆ. ಇಂಡಿಯಾ ಗೇಟ್ ಸುತ್ತಮುತ್ತಲೂ ಭದ್ರತಾ ಸಿಬ್ಬಂದಿ ಗಸ್ತು ತಿರುಗುತ್ತಿದ್ದಾರೆ. 
ಶಂಕಿತ ಉಗ್ರರ ಬಂಧನ ಮತ್ತು  ಭಯೋತ್ಪಾದಕ ಗುಂಪುಗಳಿಂದ ದಾಳಿ ಬೆದರಿಕೆ ಇರುವ ಕುರಿತು ಗುಪ್ತಚರ ದಳಗಳು ಎಚ್ಚರಿಕೆ ನೀಡಿರುವ ಹಿನ್ನೆಲೆಯಲ್ಲಿ ನವದೆಹಲಿಯಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ. 40,000ಕ್ಕೂ ಹೆಚ್ಚು ಭದ್ರತಾ ಪಡೆಗಳನ್ನು ಭದ್ರತೆಗಾಗಿ ನಿಯೋಜಿಸಲಾಗಿದೆ. 
 
ಎಲ್ಲ ಶಂಕಿತ ಉಗ್ರರ ಭಾವಚಿತ್ರಗಳನ್ನು ಬಿಡುಗಡೆ ಮಾಡಿರುವ ಪೊಲೀಸರು ಎಲ್ಲ ರೈಲು ನಿಲ್ದಾಣಗಳಲ್ಲಿ ಮತ್ತು ಮೆಟ್ರೋ, ಅಂತರರಾಜ್ಯ ಬಸ್ ನಿಲ್ದಾಣಗಳಲ್ಲಿ ಅವನ್ನು ಲಗತ್ತಿಸಿ ಎಚ್ಚರಿಕೆ ಕಾಯ್ದುಕೊಳ್ಳಬೇಕಾಗಿ ನಾಗರಿಕರಲ್ಲಿ ಮನವಿ ಮಾಡಿಕೊಂಡಿದ್ದಾರೆ. 
 
40,000ಕ್ಕೂ ಹೆಚ್ಚು ದೆಹಲಿ ಪೊಲೀಸ್ ಮತ್ತು ಅರೆಸೇನಾ ಪಡೆ ಸಿಬ್ಬಂದಿ  ನವದೆಹಲಿಯಾದ್ಯಂತ ನಿಯೋಜನೆಗೊಂಡಿದ್ದು, ವಿಶೇಷವಾಗಿ ಮೆಟ್ರೋ ನಿಲ್ದಾಣಗಳು, ವಿಮಾನ ನಿಲ್ದಾಣಗಳಲ್ಲಿ ಹೆಚ್ಚಿನ ಭದ್ರತೆ ಒದಗಿಸಲಾಗಿದೆ. 
 
ಪ್ರಧಾನಿ ಮೋದಿ, ರಾಷ್ಟ್ರಪತಿ ರಾಮಾನಾಥ್ ಕೋವಿಂದ್ ಗಣರಾಜ್ಯೋತ್ಸವ ಸಮಾರಂಭದಲ್ಲಿ ಭಾಗವಹಿಸುತ್ತಿರುವ ಹಿನ್ನೆಲೆಯಲ್ಲಿ ಆ ಪ್ರದೇಶದಲ್ಲಿ ಭಾರಿ ಭದ್ರತೆಯನ್ನು ಒದಗಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments