Webdunia - Bharat's app for daily news and videos

Install App

ಹಿರಿಯ ನಾಗರಿಕರ ಪಿಂಚಣಿ, ಅಂಗವಿಕಲರ ಮಾಸಾಶನ ಬಾಕಿ – ಖಂಡನೆ

Webdunia
ಶನಿವಾರ, 3 ಡಿಸೆಂಬರ್ 2022 (17:33 IST)
ಹಿರಿಯ ನಾಗರಿಕರಿಗೆ ಪಿಂಚಣಿ ಹಾಗೂ ಅಂಗವಿಕಲರಿಗೆ ಮಾಸಾಶಾನ ನೀಡಲೂ ಸಾಧ್ಯವಾಗದಷ್ಟು ರಾಜ್ಯ ಬಿಜೆಪಿ ಸರ್ಕಾರ ದಿವಾಳಿಯಾಗಿದ್ದು, ಸಿಎಂ ಬಸವರಾಜ ಬೊಮ್ಮಾಯಿಯವರು ತಾವು ಹೋದ ಕಡೆಯೆಲ್ಲ ಯೋಜನೆಗಳಿಗೆ ಕೇವಲ ಶಂಕುಸ್ಥಾಪನೆ ಮಾಡುತ್ತಾ ಜನರನ್ನು ವಂಚಿಸುತ್ತಿದ್ದಾರೆ ಎಂದು ಆಮ್ ಆದ್ಮಿ ಪಾರ್ಟಿ ರಾಜ್ಯ ಕಾರ್ಯದರ್ಶಿ ಬಿ.ಟಿ.ನಾಗಣ್ಣ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬಿ.ಟಿ.ನಾಗಣ್ಣ, “ರಾಜ್ಯ ಸರ್ಕಾರವು ಕಳೆದ ನಾಲ್ಕು ತಿಂಗಳಿನಿಂದ ಹಿರಿಯ ನಾಗರಿಕರಿಗೆ ಪಿಂಚಣಿ ನೀಡಿಲ್ಲ. ಅಂಗವಿಕಲರಿಗೆ ಮಾಸಾಶನವನ್ನೂ ಸರ್ಕಾರ ನೀಡುತ್ತಿಲ್ಲ. ಅಂಗವಿಕಲರಿಗೆ 2,000 ರೂಪಾಯಿ ಮಾಸಾಶನ ನೀಡುವ ಸರ್ಕಾರದ ಭರವಸೆಯು ಕೇವಲ ಘೋಷಣೆಯಾಗಿ ಉಳಿದಿದೆಯೇ ಹೊರತು ಜಾರಿಗೆ ಬರುತ್ತಿಲ್ಲ. ಬಿಜೆಪಿ ಶಾಸಕರು ಹಾಗೂ ಸಚಿವರ ಭ್ರಷ್ಟಾಚಾರದಿಂದಾಗಿ ಸರ್ಕಾರದ ಬೊಕ್ಕಸ ಬರಿದಾಗಿದೆ. ಆದ್ದರಿಂದಲೇ ಸಿಎಂ ಬಸವರಾಜ ಬೊಮ್ಮಾಯಿಯವರು ಯೋಜನೆಗಳನ್ನು ಜಾರಿಗೆ ತರುವ ಬದಲು ಕೇವಲ ಘೋಷಣೆ ಹಾಗೂ ಶಂಕುಸ್ಥಾಪನೆಯಲ್ಲೇ ಕಾಲ ಕಳೆಯುತ್ತಿದ್ದಾರೆ” ಎಂದು ಹೇಳಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments