ಪೊಲೀಸರ ಮೇಲೆ ಹಲ್ಲೆ!?

Webdunia
ಭಾನುವಾರ, 13 ಫೆಬ್ರವರಿ 2022 (11:53 IST)
ಕಲಬುರಗಿ :  ಪೊಲೀಸರ ಮೇಲೆ ಹಲ್ಲೆ, ಕೊಲೆ ಪ್ರಯತ್ನ ಹಾಗೂ ಕರ್ತವ್ಯಕ್ಕೆ ಅಡ್ಡಿ ಉಂಟುಮಾಡಿದ ಆರೋಪ. 
 
ವಾಹನ ಚಾಲಕ ನಾಗೇಶ ಅಲಿಯಾಸ್ ನಾಗರಾಜ ಪೂಜಾರಿಗೆ ಇಲ್ಲಿನ 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯವು 6 ವರ್ಷ ಜೈಲು ಶಿಕ್ಷೆ ಹಾಗೂ 7 ಸಾವಿರ ದಂಡ ವಿಧಿಸಿ ತೀರ್ಪು ನೀಡಿದೆ.

ನಗರದ ಶಿವಾಜಿ ನಗರ ನಿವಾಸಿ, ಖಾಸಗಿ ವಾಹನ ಚಾಲಕನಾಗಿದ್ದ ನಾಗೇಶ (25) ಶಿಕ್ಷೆಗೆ ಒಳಗಾಗಿದ್ದಾರೆ. 2018ರಲ್ಲಿ ಕಲಬುರಗಿ ತಾಲೂಕಿನ ಕೆರೆಭೋಸಗಾದ ಹೊಲದಲ್ಲಿನ ಹಾಳುಬಿದ್ದ ಮನೆಯಲ್ಲಿ ಅಡಗಿದ್ದ. ಈತನನ್ನು ಬಂಧಿಸಲು ಪೊಲೀಸರು ಹೋದಾಗ, ಅವರ ಮೇಲೆ ತಲ್ವಾರ್ನಿಂದ ಹಲ್ಲೆ ಮಾಡಲು ಮುಂದಾಗಿದ್ದ.

ತಪ್ಪಿಸಿಕೊಳ್ಳಲು ಪ್ರಯತ್ನಿಸಿದ್ದಾಗ ಪೊಲೀಸರು ಗಾಳಿಯಲ್ಲಿ ಗುಂಡು ಹಾರಿಸಿ ಎಚ್ಚರಿಕೆ ನೀಡಿದ್ದರು. ನಿಲ್ಲದೆ ಇದ್ದಾಗ ಕಾಲಿಗೆ ಗುಂಡು ಹೊಡೆದು ಆತನನ್ನು ಬಂಧಿಸಿದ್ದರು. ಈ ಕುರಿತು ತನಿಖಾಧಿಕಾರಿ ವರದಿ ಸಲ್ಲಿಸಿದ್ದರು.

ಪ್ರಕರಣದ ವಿಚಾರಣೆ ನಡೆಸಿದ 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶರಾದ ಶುಕ್ಲಾಕ್ಷ ಪಾಲನ್ ಅವರು ಅಪರಾಧಿಗೆ 6 ವರ್ಷ ಜೈಲು ಶಿಕ್ಷೆ ಹಾಗೂ 7 ಸಾವಿರ ದಂಡ ವಿಧಿಸಿ ತೀರ್ಪು ನೀಡಿದ್ದಾರೆ. ಸರ್ಕಾರದ ಪರವಾಗಿ 1ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ಸರಕಾರಿ ಅಭಿಯೋಜಕ ನರಸಿಂಹಲು ವಾದ ಮಂಡಿಸಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಜೆಪಿಗೆ ಗುಡ್‌ಬೈ ಬೆನ್ನಲ್ಲೇ ಹೊಸ ಪಕ್ಷ ಘೋಷಿಸಿದ ಕೆ ಅಣ್ಣಾಮಲೈ

ಕರ್ನಾಟಕದಲ್ಲಿ ಸದ್ಯದಲ್ಲೇ ಮಧ್ಯಂತರ ಚುನಾವಣೆ ಬಂದರೂ ಅಚ್ಚರಿಯಿಲ್ಲ: ವಿಜಯೇಂದ್ರ ವ್ಯಂಗ್ಯ

ಬಹುಮಹಡಿ ಆಸ್ಪತ್ರೆಯ ಕಿಟಿಕಿಯಿಂದ ಜಿಗಿದು ಆತ್ಮಹತ್ಯೆಗೆ ಯತ್ನಿಸಿದ ರೋಗಿ: ಕೊನೆಗೆ ಏನಾಯ್ತು ನೋಡಿ Video

ನಮ್ಮಂಥಾ ಹಿರಿಯರಿಗೆ ಬೆಲೆ ಕೊಡಲಿಲ್ಲ ಎಂದ ಕೆಎಚ್ ಮುನಿಯಪ್ಪ: ಮಂತ್ರಿಗಿರಿ ಸಿಕ್ಕರೂ ಕ್ಯಾತೆ

ಅಣ್ಣಾಮಲೈ ಬಿಜೆಪಿಗೆ ರಾಜೀನಾಮೆ ಈಗ ಅಧಿಕೃತ: ಒಳ್ಳೆ ನಾಯಕನನ್ನು ಉಳಿಸಿಕೊಳ್ಳದ ಬಿಜೆಪಿ

ಮುಂದಿನ ಸುದ್ದಿ
Show comments