Webdunia - Bharat's app for daily news and videos

Install App

ಪಿಎಸ್‌ಯು ಬ್ಯಾಂಕ್‌ಗಳಿಗೆ ಸರಕಾರ ನೆರವು: ಚೇತರಿಕೆ ಕಂಡ ಶೇರುಪೇಟೆ ಸೂಚ್ಯಂಕ

Webdunia
ಮಂಗಳವಾರ, 19 ಜುಲೈ 2016 (18:27 IST)
ಶೇರುಪೇಟೆಯ ಸೂಚ್ಯಂಕ ಇಂದಿನ ವಹಿವಾಟಿನ ಮುಕ್ತಾಯಕ್ಕೆ 41 ಪಾಯಿಂಟ್‌ಗಳ ಚೇತರಿಕೆಯೊಂದಿಗೆ ಮುಕ್ತಾಯವಾಗಿದೆ.
 
ಕೇಂದ್ರ ಸರಕಾರ 22,915 ಕೋಟಿ ರೂಪಾಯಿಗಳನ್ನು 13 ಸರಕಾರಿ ಸ್ವಾಮ್ಯದ ಬ್ಯಾಂಕ್‌ಗಳಿಗೆ ವಿತರಿಸುವ ನಿರ್ಧಾರದಿಂದ ಹೂಡಿಕೆದಾರರು ಶೇರುಗಳ ಖರೀದಿಗೆ ಮುಂದಾಗಿದ್ದಾರೆ ಎಂದು ಮಾರುಕಟ್ಟೆಯ ಡೀಲರ್‌ಗಳು ತಿಳಿಸಿದ್ದಾರೆ.
 
ಜಿಎಸ್‌ಟಿ ಮಸೂದೆ ಅಂಗೀಕಾರವಾಗುವ ನಿರೀಕ್ಷೆ ಮತ್ತು ದೇಶಾದ್ಯಂತ ಉತ್ತಮ ಮುಂಗಾರು ಮಳೆಯ ಹಿನ್ನೆಲೆ ಶೇರುಪೇಟೆ ಚೇತರಿಕೆ ಕಂಡಿದೆ ಎಂದು ಮಾರುಕಟ್ಟೆಯ ಮೂಲಗಳು ತಿಳಿಸಿವೆ.
 
ಸಾರ್ವಜನಿಕ ಸ್ವಾಮ್ಯದ ಕೆನರಾ ಬ್ಯಾಂಕ್, ಎಸ್‌ಬಿಐ ಮತ್ತು ಇಂಡಿಯನ್ ಓವರ್‌ಸೀಸ್ ಬ್ಯಾಂಕ್, ಎಚ್‌ಪಿಸಿಎಲ್, ಐಒಸಿ ಮತ್ತು ಬಿಪಿಸಿಎಲ್ ಶೇರುಗಳು ವಹಿವಾಟಿನಲ್ಲಿ ಶೇ 4.71 ರಷ್ಟು ಚೇತರಿಕೆ ಕಂಡಿವೆ. 
 
ಬಿಎಸ್‌ಇ ಸೂಚ್ಯಂಕ ಇಂದಿನ ವಹಿವಾಟಿನ ಮುಕ್ತಾಯಕ್ಕೆ 40.96 ಪಾಯಿಂಟ್‌ಗಳ ಏರಿಕೆ ಕಂಡು 27,637.98 ಅಂಕಗಳಿಗೆ ತಲುಪಿದೆ.
 
ರಾಷ್ಟ್ರೀಯ ಮಾರುಕಟ್ಟೆ ನಿಫ್ಟಿ ಸೂಚ್ಯಂಕ ಕೂಡಾ ಇಂದಿನ ವಹಿವಾಟಿನ ಮುಕ್ತಾಯಕ್ಕೆ 19.85 ಪಾಯಿಂಟ್‌ಗಳ ಏರಿಕೆ ಕಂಡು 8,528.55 ಅಂಕಗಳಿಗೆ ತಲುಪಿದೆ.
 
ಹಾಂಗ್‌ಕಾಂಗ್‌, ಜಪಾನ್, ದಕ್ಷಿಣ ಕೊರಿಯಾ ಮತ್ತು ಸಿಂಗಾಪೂರ್ ಶೇರುಪೇಟೆ ವಹಿವಾಟಿನ ಮುಕ್ತಾಯಕ್ಕೆ ಶೇ.0.21 ರಷ್ಟು ಕುಸಿತ ಕಂಡಿದ್ದರೆ, ಚೀನಾ, ತೈವಾನ್ ಶೇರುಗಳು ಶೇ.1.37 ರಷ್ಟು ಚೇತರಿಕೆ ಕಂಡಿವೆ.
 
ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಇಂದು ಈ ಭಾಗಗಳಿಗೆ ಮಳೆ ನಿರೀಕ್ಷೆಯೇ ಬೇಡ

ಕರ್ನಾಟಕವು ಅಪರಾಧಿಗಳ ರಾಜ್ಯವಾಗುತ್ತಿದೆ: ಶೋಭಾ ಕರಂದ್ಲಾಜೆ ಆಕ್ಷೇಪ

ಸಿದ್ದರಾಮಯ್ಯನನ್ನು ಕೊಂದ್ರೆ ಹಿಂದೂಗಳಿಗೆ ನೆಮ್ಮದಿ ಎಂದಿದ್ದ ವ್ಯಕ್ತಿ ಅರೆಸ್ಟ್

NEET ಪರೀಕ್ಷೆ ಹೇಗಿತ್ತು ಎಂದರೆ ವಿದ್ಯಾರ್ಥಿಗಳು ಶಾಕ್ ಆಗ್ತಿದ್ದಾರೆ: ಕಾರಣ ಇಲ್ಲಿದೆ

ಕಾನೂನು ಬಾಹಿರ ಟೆಂಡರ್ ಮೂಲಕ ಸರ್ಕಾರದಿಂದ ಭಾರೀ ಮೋಸ: ಛಲವಾದಿ ನಾರಾಯಣಸ್ವಾಮಿ

ಮುಂದಿನ ಸುದ್ದಿ
Show comments