Webdunia - Bharat's app for daily news and videos

Install App

ಸೆನ್ಸೆಕ್ಸ್: 58 ಪಾಯಿಂಟ್‌ಗಳ ಅಲ್ಪ ಚೇತರಿಕೆ ಕಂಡ ಶೇರುಸಂವೇದಿ ಸೂಚ್ಯಂಕ

Webdunia
ಸೋಮವಾರ, 6 ಜೂನ್ 2016 (11:44 IST)
ಭಾರತೀಯ ರಿಸರ್ವ್ ಬ್ಯಾಂಕ್ ಆರ್ಥಿಕ ಪರಿಷ್ಕರಣೆಯಲ್ಲಿ ರೆಪೋ ದರಗಳ ಕಡಿತಗೊಳಿಸುವ ನಿರೀಕ್ಷೆಯಲ್ಲಿ ಹೂಡಿಕೆದಾರರು ಶೇರುಗಳ ಖರೀದಿಗೆ ಮುಂದಾಗಿದ್ದರಿಂದ ಶೇರುಪೇಟೆ ಸೂಚ್ಯಂಕ ಇಂದಿನ ಆರಂಭಿಕ ವಹಿವಾಟಿನಲ್ಲಿ 58 ಪಾಯಿಂಟ್‌ಗಳ ಅಲ್ಪ ಚೇತರಿಕೆ ಕಂಡಿದೆ.
 
ಏಷ್ಯಾ ಮಾರುಕಟ್ಟೆಗಳ ಮಿಶ್ರ ವಹಿವಾಟು ಮತ್ತು ವಿದೇಶಿ ಬಂಡವಾಳದ ಒಳಹರಿವು ಹೆಚ್ಚಳವಾಗಿದೆ. ಫಾರೆಕ್ಸ್ ಮಾರುಕಟ್ಟೆಯಲ್ಲಿ ಡಾಲರ್ ಎದುರಿಗೆ ರೂಪಾಯಿ ಮೌಲ್ಯದಲ್ಲಿ ಚೇತರಿಕೆಯಾಗಿರುವುದು ಶೇರುಪೇಟೆಯ ಮೇಲೆ ಪ್ರಭಾವ ಬೀರಿದೆ ಎಂದು ಮಾರುಕಟ್ಟೆಯ ಡೀಲರ್‌ಗಳು ತಿಳಿಸಿದ್ದಾರೆ.
  
ರಿಯಲ್ಟಿ, ಬಂಡವಾಳ ವಸ್ತುಗಳು, ಗೃಹೋಪಕರಣ ವಸ್ತುಗಳು, ಬ್ಯಾಂಕಿಂಗ್ ಮತ್ತು ವಾಹನೋದ್ಯಮ ಕ್ಷೇತ್ರಗಳ ಶೇರು ಖರೀದಿಗೆ ಹೂಡಿಕೆದಾರರು ಆಸಕ್ತಿ ತೋರಿದ್ದರಿಂದ ಬಿಎಸ್‌ಇ ಸೂಚ್ಯಂಕ ಇಂದಿನ ಆರಂಭಿಕ ವಹಿವಾಟಿನಲ್ಲಿ 58.39 ಪಾಯಿಂಟ್‌ಗಳ ಏರಿಕೆ ಕಂಡು  26,901.42 ಅಂಕಗಳಿಗೆ ತಲುಪಿದೆ.
 
ರಾಷ್ಟ್ರೀಯ ಮಾರುಕಟ್ಟೆ ನಿಫ್ಟಿ ಸೂಚ್ಯಂಕ ಕೂಡಾ ಇಂದಿನ ಆರಂಭಿಕ ವಹಿವಾಟಿನಲ್ಲಿ 13.65 ಪಾಯಿಂಟ್‌ಗಳ ಏರಿಕೆ ಕಂಡು 8,234.45 ಅಂಕಗಳಿಗೆ ತಲುಪಿದೆ.
 
ಹಾಂಗ್‌ಕಾಂಗ್‌ನ ಹಾಂಗ್‌ಸೆಂಗ್ ಸೂಚ್ಯಂಕ ಶೇ.0.11 ರಷ್ಟು ಏರಿಕೆಯಾಗಿದೆ. ಶಾಂಘೈ ಶೇರುಪೇಟೆ ಸೂಚ್ಯಂಕ ಶೇ.2.31 ರಷ್ಟು ಚೇತರಿಕೆ ಕಂಡಿದ್ದರೆ, ಜಪಾನ್‌ನ ನಿಕೈ ಸೂಚ್ಯಂಕ ಶೇ.0.85 ರಷ್ಟು ಏರಿಕೆ ಕಂಡಿದೆ.
 
ಅಮೆರಿಕದ ಡೊ ಜೊನ್ಸ್ ಶೇರುಪೇಟೆ ನಿನ್ನೆಯ ವಹಿವಾಟಿನ ಮುಕ್ತಾಯಕ್ಕೆ ಶೇ.0.18 ರಷ್ಟು ಏರಿಕೆಯಾಗಿದೆ.

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.
 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜಾ ರಘುವಂಶಿ ಪ್ರಕರಣ: ಸೋನಮ್ ಜತೆ ಸಂಪರ್ಕದಲ್ಲಿದ್ದ ಮತ್ತಿಬ್ಬರು ಅರೆಸ್ಟ್‌, ಇವರ ಪಾತ್ರವೇನು ಗೊತ್ತಾ

ದೊಡ್ಡ ದುರಂತ ಬೆನ್ನಲ್ಲೇ ಏರ್‌ ಇಂಡಿಯಾಗೆ ಬಾಂಬ್ ಬೆದರಿಕೆ: ನವದೆಹಲಿಗೆ ಹೊರಟಿದ್ದ ವಿಮಾನ ರಿಯಾದ್‌ನಲ್ಲಿ ತುರ್ತು ಭೂಸ್ಪರ್ಶ

ಬೃಹತ್‌ ರ‍್ಯಾಲಿ ವೇಳೆ ವೈಎಸ್‌ಆರ್‌ ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಹರಿದ ಜಗನ್‌ಮೋಹನ್‌ ರೆಡ್ಡಿ ಕಾರು

ಇರಾನ್‌– ಇಸ್ರೇಲ್‌ ಸಂಘರ್ಷ ಶಮನಕ್ಕೆ ಮೋದಿ ರಂಗಪ್ರವೇಶ: ಭಾರತದ ಪ್ರಧಾನಿಗೆ ಧನ್ಯವಾದ ಹೇಳಿದ ಇರಾನ್

ಬಿ.ಆರ್ ಪಾಟೀಲ್ ಸತ್ಯವನ್ನೇ ಹೇಳಿದ್ದಾರೆ : ವಿಜಯೇಂದ್ರ

ಮುಂದಿನ ಸುದ್ದಿ
Show comments