Webdunia - Bharat's app for daily news and videos

Install App

ಜಿಎಸ್‌ಟಿ ನಿರೀಕ್ಷೆ: ಕುಸಿದ ಶೇರುಪೇಟೆ ಸಂವೇದಿ ಸೂಚ್ಯಂಕ

Webdunia
ಬುಧವಾರ, 3 ಆಗಸ್ಟ್ 2016 (13:21 IST)
ರಾಜ್ಯಸಭೆಯಲ್ಲಿ ಇಂದು ಸಂಜೆ ಜಿಎಸ್‌ಟಿ ಮಸೂದೆ ಕುರಿತಂತೆ ಚರ್ಚೆಯಾಗಲಿರುವ ಹಿನ್ನೆಲೆಯಲ್ಲಿ ಹೂಡಿಕೆದಾರರು ಕಾದು ನೋಡುವ ತಂತ್ರ ಅನುಸರಿಸಿದ್ದರಿಂದ ಶೇರುಪೇಟೆ ಸೂಚ್ಯಂಕ ಇಂದಿನ ಆರಂಭಿಕ ವಹಿವಾಟಿನಲ್ಲಿ 109 ಪಾಯಿಂಟ್‌ಗಳ ಕುಸಿತ ಕಂಡಿದೆ.
 
ಕಳೆದ ಮೂರು ದಿನಗಳ ವಹಿವಾಟಿನ ಮುಕ್ತಾಯಕ್ಕೆ 226.89 ಪಾಯಿಂಟ್‌ಗಳ ಕುಸಿತ ಕಂಡಿದ್ದ ಬಿಎಸ್‌ಇ ಸೂಚ್ಯಂಕ, ಇಂದಿನ ಆರಂಭಿಕ ವಹಿವಾಟಿನಲ್ಲಿ ಮತ್ತೆ 108.55 ಪಾಯಿಂಟ್‌ಗಳ ಇಳಿಕೆ ಕಂಡು 27,873.16 ಅಂಕಗಳಿಗೆ ತಲುಪಿದೆ.
 
ಎಫ್‌ಎಂಸಿಜಿ, ತೈಲ ಮತ್ತು ಅನಿಲ, ರಿಯಲ್ಟಿ, ವಿದ್ಯುತ್, ಮೂಲಸೌಕರ್ಯ, ಬ್ಯಾಂಕಿಂಗ್ ಮತ್ತು ಹೆಲ್ತ್‌ಕೇರ್ ಕ್ಷೇತ್ರಗಳ ಶೇರುಗಳು ವಹಿವಾಟಿನಲ್ಲಿ ಶೇ.0.60 ರಷ್ಟು ನಷ್ಟ ಅನುಭವಿಸಿವೆ.
 
ರಾಷ್ಟ್ರೀಯ ಮಾರುಕಟ್ಟೆ ನಿಫ್ಟಿ ಸೂಚ್ಯಂಕ ಕೂಡಾ ಇಂದಿನ ಆರಂಭಿಕ ವಹಿವಾಟಿನಲ್ಲಿ 36.30 ಪಾಯಿಂಟ್‌ಗಳ ಕುಸಿತ ಕಂಡು 8,586.60 ಅಂಕಗಳಿಗೆ ತಲುಪಿದೆ. 
 
ಏಷ್ಯಾ ಮಾರುಕಟ್ಟೆಗಳ ದುರ್ಬಲ ವಹಿವಾಟು ಮತ್ತು ಜಿಎಸ್‌ಟಿ ಮಸೂದೆ ಚರ್ಚೆ ಹಿನ್ನೆಲೆಯಲ್ಲಿ ಹೂಡಿಕೆದಾರರು ಶೇರುಗಳ ಖರೀದಿಗೆ ಕಾದು ನೋಡುವ ತಂತ್ರ ಅನುಸರಿಸಿದ್ದರಿಂದ ಶೇರುಪೇಟೆ ಚೇತರಿಕೆ ಕಂಡಿದೆ ಎಂದು ಮಾರುಕಟ್ಟೆಯ ಮೂಲಗಳು ತಿಳಿಸಿವೆ.
 
ಜಪಾನ್‌ನ ನಿಕೈ ಶೇರುಪೇಟೆ ಸೂಚ್ಯಂಕ ಶೇ.0.86 ರಷ್ಟು ಇಳಿಕೆ ಕಂಡಿದ್ದರೆ, ಹಾಂಗ್‌ಕಾಂಗ್‌ನ ಹಾಂಗ್‌ಸೆಂಗ್ ಸೂಚ್ಯಂಕ ಶೇ.1.70 ರಷ್ಟು ಇಳಿಕೆಯಾಗಿದೆ. ಆದರೆ, ಶಾಂಘೈ ಶೇರುಪೇಟೆ ಸೂಚ್ಯಂಕ ಶೇ.0.04 ರಷ್ಟು ಚೇತರಿಕೆ ಕಂಡಿದೆ.
 
ಅಮೆರಿಕದ ಡೊ ಜೊನ್ಸ್ ಶೇರುಪೇಟೆ ಸೂಚ್ಯಂಕ ಕೂಡಾ ನಿನ್ನೆಯ ವಹಿವಾಟಿನ ಮುಕ್ತಾಯಕ್ಕೆ ಶೇ.0.49 ರಷ್ಟು ಕುಸಿತ ಕಂಡಿದೆ.
 
ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

19ಮಾಜಿ ಮಂತ್ರಿಗಳ ಭದ್ರತೆ ಕೈಬಿಟ್ಟ ಗೃಹ ಸಚಿವಾಲಯ, ಆದರೆ ಸ್ಮೃತಿ ಇರಾನಿಗೆ ಯಾಕೆ ಈ ವಿಶೇಷತೆ

ಛತ್ತೀಸ್‌ಗಢ: ನಕ್ಸಲ್ ವಿರೋಧಿ ಕಾರ್ಯಾಚರಣೆಯಲ್ಲಿ ಮಹಿಳಾ ಮಾವೋವಾದಿ ಹತ್ಯೆ

ಮದ್ಯದ ಬೆಲೆ ಕೇಳಿಯೇ ನಶೆ ಏರುವಂತಾಗಿದೆ: ಬಿಜೆಪಿ ವ್ಯಂಗ್ಯ

Suhas Shetty Case: ಹತ್ಯೆ ಹಿಂದೆ ಬಜ್ಪೆ ಹೆಡ್‌ ಕಾನ್‌ಸ್ಟೇಬಲ್‌ ಭಾಗಿಯಾಗಿರುವ ಶಂಕೆ

Suhas Shetty Case: ಯುಟಿ ಖಾದರ್ ಸ್ಪೀಕರ್‌ ಆಗಿರುವವರೆಗೆ ಸಾವಿಗೆ ನ್ಯಾಯ ಸಿಗುವ ನಂಬಿಕೆಯಿಲ್ಲ

ಮುಂದಿನ ಸುದ್ದಿ
Show comments