Webdunia - Bharat's app for daily news and videos

Install App

ಜಿಎಸ್‌ಟಿ ನಿರೀಕ್ಷೆಯಲ್ಲಿ ಕುಸಿದ ಶೇರುಪೇಟೆ ಸಂವೇದಿ ಸೂಚ್ಯಂಕ

Webdunia
ಮಂಗಳವಾರ, 2 ಆಗಸ್ಟ್ 2016 (18:18 IST)
ಯುರೋಪ್ ಮಾರುಕಟ್ಟೆಗಳ ದುರ್ಬಲ ವಹಿವಾಟು ಮತ್ತು ಜಿಎಸ್‌ಟಿ ಮಸೂದೆ ನಾಳೆ ಅಂಗೀಕಾರವಾಗುವ ನಿರೀಕ್ಷೆಗಳ ಹಿನ್ನೆಲೆಯಲ್ಲಿ, ಹೂಡಿಕೆದಾರರು ಕಾದು ನೋಡುವ ತಂತ್ರ ಅನುಸರಿಸಿದ್ದರಿಂದ ಶೇರುಪೇಟೆ ಸೂಚ್ಯಂಕ ಇಂದಿನ ವಹಿವಾಟಿನ ಮುಕ್ತಾಯಕ್ಕೆ 21 ಪಾಯಿಂಟ್‌ಗಳ ಕುಸಿತ ಕಂಡಿದೆ.
 
ಕಳೆದ ಎರಡು ದಿನಗಳ ವಹಿವಾಟಿನ ಮುಕ್ತಾಯಕ್ಕೆ 205.48 ಪಾಯಿಂಟ್‌ಗಳ ಕುಸಿತಂ ಕಂಡಿದ್ದ ಬಿಎಸ್‌ಇ ಸೂಚ್ಯಂಕ, ಇಂದಿನ ವಹಿವಾಟಿನ ಮುಕ್ತಾಯಕ್ಕೆ 21.41 ಪಾಯಿಂಟ್‌ಗಳ ಕುಸಿತ ಕಂಡು 27,981.71 ಅಂಕಗಳಿಗೆ ತಲುಪಿದೆ.  
 
ರಾಷ್ಟ್ರೀಯ ಮಾರುಕಟ್ಟೆ ನಿಫ್ಟಿ ಸೂಚ್ಯಂಕ ಕೂಡಾ ಇಂದಿನ ವಹಿವಾಟಿನ ಮುಕ್ತಾಯಕ್ಕೆ 13.65 ಪಾಯಿಂಟ್‌ಗಳ ಕುಸಿತ ಕಂಡು 8,622.90 ಅಂಕಗಳಿಗೆ ತಲುಪಿದೆ.
 
ಟಾಟಾ ಮೋಟಾರ್ಸ್, ಎಚ್‌ಡಿಎಫ್‌ಸಿ, ಆದಾನಿ ಪೋರ್ಟ್ಸ್, ಭಾರ್ತಿ ಏರ್‌ಟೆಲ್, ಐಸಿಐಸಿಐ ಬ್ಯಾಂಕ್, ಗೇಲ್, ವಿಪ್ರೋ, ಸಿಪ್ಲಾ, ಲುಪಿನ್, ಕೋಲ್ ಇಂಡಿಯಾ, ಸನ್‌ ಫಾರ್ಮಾ ಮತ್ತು ಟಾಟಾ ಸ್ಟೀಲ್ ಶೇರುಗಳು ವಹಿವಾಟಿನಲ್ಲಿ ಕುಸಿತ ಕಂಡಿವೆ.
 
ಏತನ್ಮದ್ಯೆ, ಐಟಿಸಿ, ಮಾರುತಿ ಸುಜುಕಿ, ಎಸ್‌ಬಿಐ ಕ್ಷೇತ್ರಗಳ ಶೇರುಗಳು ವಹಿವಾಟಿನಲ್ಲಿ ಚೇತರಿಕೆ ಕಂಡಿವೆ ಎಂದು ಮಾರುಕಟ್ಟೆಯ ಡೀಲರ್‌ಗಳು ತಿಳಿಸಿದ್ದಾರೆ. 
 
ಜಪಾನ್‌ ಮತ್ತು ಸಿಂಗಾಪೂರ್ ಶೇರುಪೇಟೆಗಳು ವಹಿವಾಟಿನ ಮುಕ್ತಾಯಕ್ಕೆ ಶೇ 1.47 ರಷ್ಟು ಕುಸಿತ ಕಂಡಿದ್ದರೆ, ನಿಡಾ ಚಂಡುಮಾರುತದಿಂದಾಗಿ ಹಾಂಗ್‌ಕಾಂಗ್‌ ಶೇರುಪೇಟೆಗೆ ರಜೆ ಘೋಷಿಸಲಾಗಿದೆ. 
 
ಯುರೋಪ್, ಫ್ರಾನ್ಸ್, ಜರ್ಮನಿ ಮತ್ತು ಯುಕೆ ಮೂಲದ ಶೇರುಪೇಟೆಗಳು ವಹಿವಾಟಿನ ಮುಕ್ತಾಯಕ್ಕೆ ಶೇ.1.42 ರಷ್ಟು ಇಳಿಕೆ ಕಂಡಿದೆ ಎಂದು ಮಾರುಕಟ್ಟೆಯ ಮೂಲಗಳು ತಿಳಿಸಿವೆ. 

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸೇನಾಧಿಕಾರಿ ಖುರೇಷಿ ಅತ್ತೆ ಮಾವನ ಮನೆ ಮೇಲೆ ದಾಳಿ ಪೋಸ್ಟ್‌: ಮೂವರ ವಿರುದ್ಧ ಪ್ರಕರಣ ದಾಖಲು

ಬರ್ತಡೇ ಆಚರಿಸಲ್ಲ ಅಂತಾ ಹೇಳಿ ನೆನಪಿನಲ್ಲಿ ಉಳಿದುಕೊಳ್ಳುವ ಹಾಗೇ ದಿನ ಕಳೆದ ಡಿಸಿಎಂ ಡಿಕೆ ಶಿವಕುಮಾರ್‌: Video

ಪಾಕ್‌ಗೆ ಸಹಾಯ ಮಾಡಿದ ಟರ್ಕಿ: ಟರ್ಕಿ ಆ್ಯಪಲ್ ಬ್ಯಾನ್ ಮಾಡಲು ಭಾರತದಲ್ಲಿ ಹೆಚ್ಚಿದ ಒತ್ತಾಯ

Tiranga Yatra, ಭಾರತೀಯ ಯೋಧರಿಗೆ ಸ್ಥೈರ್ಯ ತುಂಬಲು ತಿರಂಗಾ ಯಾತ್ರೆ: ಬಿವೈ ವಿಜಯೇಂದ್ರ

ಅಶ್ಲೀಲ ವಿಡಿಯೋಗಳನ್ನು ಹರಿಬಿಡುವುದಾಗಿ ಆನಂದ್‌ ಗುರೂಜಿಗೆ ಬೆದರಿಕೆ: ದಿವ್ಯ ವಸಂತಾ ಸೇರಿ ಇಬ್ಬರ ವಿರುದ್ಧ ದೂರು

ಮುಂದಿನ ಸುದ್ದಿ
Show comments