Webdunia - Bharat's app for daily news and videos

Install App

ಸೆನ್ಸೆಕ್ಸ್: 112 ಪಾಯಿಂಟ್‌ಗಳ ಏರಿಕೆ ಕಂಡ ಶೇರುಪೇಟೆ ಸೂಚ್ಯಂಕ

Webdunia
ಮಂಗಳವಾರ, 31 ಮೇ 2016 (11:14 IST)
ಶೇರುಪೇಟೆಯ ಸೂಚ್ಯಂಕ ಸತತ ಆರನೇ ದಿನವೂ ಚೇತರಿಕೆ ಕಂಡಿದೆ. ಇಂದಿನ ಆರಂಭಿಕ ವಹಿವಾಟಿನಲ್ಲಿ ಮತ್ತೆ 112 ಪಾಯಿಂಟ್‌ಗಳ ಏರಿಕೆಯಾಗಿದೆ ಎಂದು ಮಾರುಕಟ್ಟೆಯ ಮೂಲಗಳು ತಿಳಿಸಿವೆ. 
 
ವಾಹನೋದ್ಯಮ, ಗೃಹೋಪಕರಣ ವಸ್ತುಗಳು, ಬ್ಯಾಂಕಿಂಗ್, ಎಫ್‌ಎಂಸಿಜಿ ಮತ್ತು ವಿದ್ಯುತ್ ಕ್ಷೇತ್ರಗಳ ಶೇರುಗಳ ಖರೀದಿಗೆ ಹೂಡಿಕೆದಾರರು ಆಸಕ್ತಿ ತೋರಿದ್ದರಿಂದ ಶೇರುಪೇಟೆ ಸೂಚ್ಯಂಕ ಚೇತರಿಕೆ ಕಂಡಿದೆ ಎಂದು ಮಾರುಕಟ್ಟೆಯ ಡೀಲರ್‌ಗಳು ತಿಳಿಸಿದ್ದಾರೆ. 
 
ಕಳೆದ ಐದು ದಿನಗಳ ವಹಿವಾಟಿನ ಮುಕ್ತಾಯಕ್ಕೆ 1495.24 ಪಾಯಿಂಟ್‌ಗಳ ಏರಿಕೆ ಕಂಡಿದ್ದ ಬಿಎಸ್‌ಇ ಸೂಚ್ಯಂಕ, ಇಂದಿನ ಆರಂಭಿಕ ವಹಿವಾಟಿನಲ್ಲಿ ಮತ್ತೆ 111.60 ಪಾಯಿಂಟ್‌ಗಳ ಚೇತರಿಕೆ ಕಂಡು 26,837.20 ಅಂಕಗಳಿಗೆ ತಲುಪಿದೆ.
 
ರಾಷ್ಟ್ರೀಯ ಮಾರುಕಟ್ಟೆ ನಿಫ್ಟಿ ಸೂಚ್ಯಂಕ ಕೂಡಾ ಇಂದಿನ ಆರಂಭಿಕ ವಹಿವಾಟಿನಲ್ಲಿ 35.10 ಪಾಯಿಂಟ್‌ಗಳ  ಚೇತರಿಕೆ ಕಂಡು 8,213.60 ಅಂಕಗಳಿಗೆ ತಲುಪಿದೆ.
 
ಹಾಂಗ್‌ಕಾಂಗ್‌ನ ಹಾಂಗ್‌ಸೆಂಗ್ ಸೂಚ್ಯಂಕ ಕೂಡಾ ಇಂದಿನ ಆರಂಭಿಕ ವಹಿವಾಟಿನಲ್ಲಿ ಶೇ.1.06 ರಷ್ಟು ಏರಿಕೆ ಕಂಡಿದ್ದರೆ, ಜಪಾನ್‌ನ ನಿಕೈ ಶೇರುಪೇಟೆ ಸೂಚ್ಯಂಕ ಶೇ.0.49 ರಷ್ಟು ಚೇತರಿಕೆ ಕಂಡಿದೆ. ಶಾಂಘೈ ಶೇರುಪೇಟೆ ಸೂಚ್ಯಂಕ ಶೇ.2.11 ರಷ್ಟು ಏರಿಕೆಯಾಗಿದೆ.
 
ಅಮೆರಿಕದ ಡೊ ಜೊನ್ಸ್ ಶೇರುಪೇಟೆ ಕೂಡಾ ನಿನ್ನೆಯ ವಹಿವಾಟಿನ ಮುಕ್ತಾಯಕ್ಕೆ ಶೇ.0.25 ರಷ್ಟು ಚೇತರಿಕೆ ಕಂಡಿದೆ.

ವೆಬ್‌ದುನಿಯಾ ಮೊಬೈಲ್ ಆಪ್ (ಡೌನ್‌ಲೋಡ್) ಮಾಡಿಕೊಂಡು ತಾಜಾ ಸುದ್ದಿಗಳನ್ನು ಪಡೆಯಿರಿ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹಾರಲು ಪರ್ಮಿಷನ್ ಬೇಕಾಗಿಲ್ಲ ಎಂದ ಶಶಿ ತರೂರ್: ಮುಂದಿನ ಸಲ ಬಿಜೆಪಿ ಪಕ್ಕಾ ಎಂದ ನೆಟ್ಟಿಗರು

ವಾಲ್ಮೀಕಿ ಹಗರಣ ಎಷ್ಟು ಕೋಟಿ, ವಂಚನೆಯಾಗಿದ್ದು ಹೇಗೆ ಎಂದ ಬಿಜೆಪಿ ನಾಯಕ ಬಂಗಾರು ಹನುಮಂತು

ವನ್ಯಜೀವಿ, ಮಾನವ ಸಂಘರ್ಷವನ್ನು ಪರಿಗಣಿಸದಿರುವುದೇ ಹುಲಿಗಳ ಸಾವಿಗೆ ಕಾರಣ: ಸುನೀಲ್ ಕುಮಾರ್‌ ವಿಷಾದ

ಅಮರನಾಥ ಯಾತ್ರೆಗೆ ಯಾತ್ರಿಕರ ಸಂಖ್ಯೆಯಲ್ಲಿ ಇಳಿಕೆ, ಇದೇ ಕಾರಣ ಎಂದ ಗವರ್ನರ್‌

ಬೇಸತ್ತು ಹೋದೆ: ಕ್ಯಾನ್ಸರ್‌ ರೋಗಿ ಅಜ್ಜಿಯನ್ನು ಬೀದಿಯಲ್ಲಿ ಬಿಡಲು ಕಾರಣ ಕೊಟ್ಟ ಮೊಮ್ಮಗ

ಮುಂದಿನ ಸುದ್ದಿ
Show comments