Webdunia - Bharat's app for daily news and videos

Install App

ಟ್ರಂಪ್‌ ತೆರಿಗೆ ಸಮರದಿಂದ ಷೇರು ಮಾರುಕಟ್ಟೆಯಲ್ಲಿ ಮಹಾಕಂಪನ: ನೀರಿನಂತೆ ಕರಗಿದ ₹20 ಲಕ್ಷ ಕೋಟಿ

Sampriya
ಸೋಮವಾರ, 7 ಏಪ್ರಿಲ್ 2025 (14:19 IST)
Photo Courtesy X
ಮುಂಬೈ:  ಅಮೆರಿಕದ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಅವರ ತೆರಿಗೆ ಸಮರಕ್ಕೆ ಷೇರು ಮಾರುಕಟ್ಟೆಯಲ್ಲಿ ಮಹಾಕಂಪನ ಉಂಟಾಗಿದೆ. ಇಂದು ಒಂದೇ ದಿನ ಹೂಡಿಕೆದಾರರ  20.16 ಲಕ್ಷ  ಕೋಟಿ ಕರಗಿಹೋಗಿದೆ.

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ತೆರಿಗೆ ನೀತಿಯಿಂದಾಗಿ ಉದ್ಭವಿಸಿದ ವ್ಯಾಪಾರ ಸಮರವು ತೀವ್ರಗೊಂಡಿರುವಂತೆಯೇ, ಜಾಗತಿಕ ಮಾರುಕಟ್ಟೆಗಳ ಸಂವೇದನೆಗಳಿಗೆ ಅನುಗುಣವಾಗಿ ಭಾರತೀಯ ಮಾರುಕಟ್ಟೆಯೂ ತೀವ್ರ ಹೊಡೆತ ಅನುಭವಿಸಿತು.

ಸೆನ್ಸೆಕ್ಸ್‌ ಆರಂಭದಲ್ಲಿ 4 ಸಾವಿರ ಅಂಕ ಪತನಗೊಂಡು ನಂತರ ಚೇತರಿಕೆ ಕಂಡಿತ್ತು. ಬೆಳಗ್ಗೆ 11 ಗಂಟೆಯ ವೇಳೆಗೆ 2,900 ಅಂಕ ಚೇತರಿಕೆಯಾಗಿ 72,423.48 ರಲ್ಲಿ ವ್ಯವಹಾರ ನಡೆಸುತ್ತಿತ್ತು. ನಿಫ್ಟಿ 900 ಅಂಕ ಇಳಿಕೆಯಾಗಿ 21,960.80 ರಲ್ಲಿ ವ್ಯವಹಾರ ನಡೆಸುತ್ತಿದೆ. ರಿಯಾಲ್ಟಿ, ಐಟಿ, ಆಟೋ ಮತ್ತು ಲೋಹ ಮುಂತಾದ ಕ್ಷೇತ್ರಗಳ ಷೇರುಗಳು ಮೌಲ್ಯ ಇಳಿಕೆಯಾಗಿದೆ.

ವಿದೇಶಿ ಸಾಂಸ್ಥಿಕ ಹೂಡಿಕೆದಾರರು ಭಾರೀ ಪ್ರಮಾಣದಲ್ಲಿ ಹೂಡಿಕೆಯನ್ನು ಹಿಂದಕ್ಕೆ ಪಡೆದ ಕಾರಣ ಬಾಂಬೆ ಷೇರು ಮಾರುಕಟ್ಟೆ ಸಂವೇದಿ ಸೂಚಂಕ್ಯ ಸೆನ್ಸೆಕ್ಸ್‌ ಮತ್ತು ರಾಷ್ಟ್ರೀಯ ಷೇರು ಮಾರುಕಟ್ಟೆ ಸೂಚಂಕ್ಯ ನಿಫ್ಟಿ  ಭಾರೀ ಇಳಿಕೆ ಕಂಡಿದೆ.

ಇಂದು ಬೆಳಿಗ್ಗೆ ವಹಿವಾಟು ಆರಂಭವಾಗುತ್ತಿದ್ದಂತೆಯೇ ಏಷ್ಯಾದ ಎಲ್ಲ ಮಾರುಕಟ್ಟೆಗಳಲ್ಲಿ ಭಾರೀ ಇಳಿಕೆಯಾಗಿತ್ತು. ಗಿಫ್ಟ್‌ ನಿಫ್ಟಿಯೂ ಅಂಕ ಇಳಿಕೆಯಾಗುತ್ತಿದ್ದಂತೆ ಭಾರತದಲ್ಲೂ ಪರಿಣಾಮ ಬೀಳುವುದು ಖಚಿತವಾಗಿತ್ತು. ಬೆಳಗ್ಗೆಯವರೆಗೆ 20 ಲಕ್ಷ ಕೋಟಿ ನಷ್ಟ ಸಂಭವಿಸಿದ್ದು  ನಿಫ್ಟಿ ಮತ್ತು ಸೆನ್ಸೆಕ್ಸ್‌ ಮತ್ತಷ್ಟು ಕುಸಿದರೆ  ನಷ್ಟದ ಪ್ರಮಾಣ ಮತ್ತಷ್ಟು ಏರಿಕೆಯಾಗಲಿದೆ.

ಟಾಟಾ ಸ್ಟೀಲ್, ಟಾಟಾ ಮೋಟರ್ಸ್ ಶೇ.10ರಷ್ಟು ಕುಸಿತ ಕಂಡರೆ, ಲಾರ್ಸನ್ ಆ್ಯಂಡ್ ಟೂಬ್ರೋ, ಹೆಚ್‌ಸಿಎಲ್ ಟೆಕ್ನಾಲಜೀಸ್, ಅದಾನಿ ಪೋರ್ಟ್ಸ್, ಟೆಕ್ ಮಹೀಂದ್ರಾ, ಇನ್ಫೋಸಿಸ್, ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್, ರಿಲಯನ್ಸ್ ಇಂಡಸ್ಟ್ರೀಸ್, ಮಹೀಂದ್ರಾ ಆ್ಯಂಡ್ ಮಹೀಂದ್ರಾ ಮುಂತಾದವು ಭಾರಿ ನಷ್ಟ ಅನುಭವಿಸಿದವು.



<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಾತಿ ಧರ್ಮ ಯಾವುದೂ ನೋಡಲ್ಲ, ಇದೊಂದು ಮಾತು ಸುಳ್ಳಾದ್ರೆ ವೇದಿಕೆ ಹತ್ತಲ್ಲ: ಸಿದ್ದರಾಮಯ್ಯ

ವಿಮಾನ ದುರಂತವಾದ ಕ್ಷಣದಲ್ಲೇ ನಾಪತ್ತೆಯಾದ ನಿರ್ಮಾಪಕ ಮಹೇಶ್ ಕಲಾವಾಡಿಯಾ ಇನ್ನೂ ಪತ್ತೆಯಾಗಿಲ್ಲ

DC ಅಪಾಯಕಾರಿ ಎಂದು ಘೋಷಿಸಿದ್ದರು,ಇಂದ್ರಾಯಣಿ ನದಿ ಸೇತುವೆ ದುರಂತ ನಡೆದಿದೆ: ಸಿಎಂ ಫಡಣವೀಸ್‌

Bengaluru, ಮಹಿಳೆ ಮೇಲೆ ರಾ‍ಪಿಡೋ ಚಾಲಕ ಕಪಾಳಮೋಕ್ಷ: ಅಸಲಿ ಸತ್ಯಾಂಶನೇ ಬೇರೆ

ಸಿಎಂ ಸಿದ್ದರಾಮಯ್ಯನ ಕಾರಿಗೆ ಅಡ್ಡ ಕಟ್ಟಿ ಆಕ್ರೋಶ ಹೊರಹಾಕಿದ ರೈತನ ಮೇಲೆ ಒದ್ದ ಪೊಲೀಸರು

ಮುಂದಿನ ಸುದ್ದಿ
Show comments