Webdunia - Bharat's app for daily news and videos

Install App

1999ರ ಕಾರ್ಗಿಲ್ ಯುದ್ಧ ಯಾರಾದರೂ ಮರೆಯುವುದುಂಟೆ

Webdunia
ಶುಕ್ರವಾರ, 24 ಜುಲೈ 2020 (21:24 IST)
ಪಾಕಿಸ್ತಾನ ಯಾವತ್ತೂ ತನ್ನ ಕುಕೃತ್ಯವನ್ನು ತೋರದೆ ಇರದು. ಶಾಂತವಾಗಿ ನೆಮ್ಮದಿಯಿಂದ ಜೀವನ ಸಾಗಿಸುತ್ತಿದ್ದ ಭಾರತ ದೇಶದ ಮೇಲೆ ನಿರಂತರ ಪ್ರತಿಕಾರ ಕಾರುವುದು ಆ ದೇಶದ ಹುಟ್ಟು ಗುಣವಾಗಿದೆ. ಕಾಶ್ಮಿರದ ಕಾರ್ಗಿಲ್ ಜಿಲ್ಲೆಯಲ್ಲಿರುವ ನಿಯಂತ್ರಣ ರೇಖೆಯ ಗಡಿ ಬಳಿ 1999ರ ಮೇ ತಿಂಗಳಲ್ಲಿ ಇದ್ದಕಿದ್ದಂತೆ ಉದ್ರಿಕ್ತ ವಾತಾವರಣ ಕಾಣಿಸಿಕೊಂಡಿತು. 
ಕಾರ್ಗಿಲ್‌ನಲ್ಲಿರುವ ಗಡಿರೇಖೆಯೊಳಗೆ ಪಾಕಿಸ್ತಾನದ ಸೇನೆ ತಾನು ನುಗ್ಗಿದ್ದಲ್ಲದೇ ಉಗ್ರರನ್ನು ನುಗ್ಗಿಸಿ ಅಟ್ಟಹಾಸ ಮೆರೆಯಿತು. ಆರಂಭದಲ್ಲಿ ಇದೊಂದು ಉಗ್ರರ ಕಾಟ ಎಂದು ಭಾವಿಸಲಾಗಿತ್ತು. ಪಾಕಿಸ್ತಾನ ಕೂಡಾ ತಮ್ಮ ಯಾವುದೇ ಸೈನಿಕರು ಗಡಿಯೊಳಗೆ ನುಗಿಲ್ಲ. ಇದೆಲ್ಲಾ ಭಾರತ ಸರಕಾರದ ಕುಚ್ಯೋದ್ಯದ ಆರೋಪ ಎಂದು ತಿರುಗೇಟು ನೀಡಿತ್ತು.
 
ತದನಂತರ ಕೆಲವೇ ದಿನಗಳಲ್ಲಿ ಪಾಕಿಸ್ತಾನದ ಬಣ್ಣ ಬಯಲಾಯಿತು. ಪಾಕಿಸ್ತಾನದ ಸೈನಿಕರು ಕಾರ್ಗಿಲ್‌ನಲ್ಲಿ ಗುಂಡಿನ ಸುರಿಮಳೆಗೈಯುತ್ತಿರುವುದು ಕಂಡು ಬಂದಿತು.ಪಾಕಿಸ್ತಾನದ ಕೂಟ ನೀತಿಯಿಂದ ಶಾಕ್ ಗೊಂಡ ಭಾರತೀಯ ಸೇನೆ, ಕಾರ್ಗಿಲ್‌ಗೆ ನುಗ್ಗಿ ಪಾಕಿಸ್ತಾನ ಸೇನೆಯನ್ನು ಸದೆಬಡೆಯಿತು.
 
ಪಾಕಿಸ್ತಾನದ ಪಡೆಗಳು ಮತ್ತು ಉಗ್ರಗಾಮಿಗಳು ಗಡಿಯಲ್ಲಿ ಆಕ್ರಮಿಸಿಕೊಂಡ ಭಾರತದ ಬಹುತೇಕ ನೆಲೆಗಳನ್ನು ಬಳಿಕ ಭಾರತದ ಸೇನೆಯು ಭಾರತೀಯ ವಾಯು ಪಡೆಯ ಬೆಂಬಲದೊಂದಿಗೆ ಮರುವಶಕ್ಕೆ ತೆಗೆದುಕೊಂಡಿತು. ಅಂತಾರಾಷ್ಟ್ರೀಯವಾಗಿ ರಾಜತಾಂತ್ರಿಕ ವಿರೋಧ ವ್ಯಕ್ತವಾಗಿದ್ದರಿಂದಾಗಿ, ಪಾಕಿಸ್ತಾನದ ಪಡೆಗಳು ಗಡಿಯ ಭಾರತದ ನೆಲೆಗಳಿಂದ ಬಲವಂತವಾಗಿ ಹಿಂದಕ್ಕೆ ಸರಿಯಬೇಕಾಯಿತು.
 
ಜುಲೈ 26 ರಂದು ಭಾರತೀಯ ಸೇನೆ ಪಾಕಿಗಳನ್ನು ಯಶಸ್ವಿಯಾಗಿ ಹಿಮ್ಮೆಟ್ಟಿಸಿ ವಿಜಯ ಪತಾಕೆ ಹಾರಿಸಿತು. ಅಂದಿನಿಂದ ಜುಲೈ 26 ರಂದು ಭಾರತೀಯ ಸೇನೆ ಕಾರ್ಗಿಲ್ ವಿಜಯೋತ್ವವ ಆಚರಿಸುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬೆಕ್ಕನ್ನು ಓಡಿಸಿಕೊಂಡು ಹೋದ ಮಗು, ಬಿಸಿ ಹಾಲಿನ ಪಾತ್ರೆಗೆ ಬಿದ್ದು ದುರ್ಮರಣ

ಪಟಾಕಿಗಳ ಮೇಲೆ ಸಂಪೂರ್ಣ ನಿಷೇಧ ಹೇರಲು ಸಾಧ್ಯವಿಲ್ಲ: ಸುಪ್ರೀಂ

ಪೊಲೀಸ್ ವಿಚಾರಣೆಗೆ ಹಾಜರಾಗುವಂತೆ ಮಹೇಶ್ ಶೆಟ್ಟಿ ತಿಮರೋಡಿಗೆ 3ನೇ ನೋಟಿಸ್, ಯಾವಾ ಪ್ರಕರಣ ಗೊತ್ತಾ

ಜಾತಿ ಸಮೀಕ್ಷೆ ಬಗ್ಗೆ ಸಿಎಂ ಸಿದ್ದರಾಮಯ್ಯ ಸಭೆ ಹೈಲೈಟ್ಸ್

ಧರ್ಮಸ್ಥಳ ಪ್ರಕರಣದಲ್ಲಿ ಸರ್ಕಾರ ಜನರ ಮುಂದೆ ಬೆತ್ತಲೆಯಾಗಿದೆ

ಮುಂದಿನ ಸುದ್ದಿ
Show comments