Select Your Language

Notifications

webdunia
webdunia
webdunia
webdunia

ಭಾರತಕ್ಕೆ ಆರಂಭಿಕ ಆಘಾತ: ಬೆಂಗಳೂರು ಪಂದ್ಯಕ್ಕೆ ಮತ್ತೆ ಮಳೆ ಅಡ್ಡಿ

ಭಾರತಕ್ಕೆ ಆರಂಭಿಕ ಆಘಾತ: ಬೆಂಗಳೂರು ಪಂದ್ಯಕ್ಕೆ ಮತ್ತೆ ಮಳೆ ಅಡ್ಡಿ
bengaluru , ಭಾನುವಾರ, 19 ಜೂನ್ 2022 (21:02 IST)

ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಣ 5ನೇ ಹಾಗೂ ಅಂತಿಮ ಟಿ-20 ಪಂದ್ಯಕ್ಕೆ ಮತ್ತೆ ಅಡ್ಡಿಯಾಗಿದ್ದು, ಸತತ ಮಳೆಯಿಂದ ಓವರ್ ಗಳ ಸಂಖ್ಯೆಯಲ್ಲಿ ಮತ್ತಷ್ಟು ಕಡಿತಗೊಳ್ಳುವ ಸಾಧ್ಯತೆ ಇದೆ.

ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಭಾರತ 3.3 ಓವರ್ ಗಳಲ್ಲಿ 2 ವಿಕೆಟ್ ಕಳೆದುಕೊಂಡು 28 ರನ್ ಗಳಿಸಿದ್ದಾಗ ಸುರಿದ ಮಳೆ ಅರ್ಧ ಗಂಟೆಯಾದರೂ ಸುರಿಯುತ್ತಲೇ ಇತ್ತು.

ಟಾಸ್ ಸೋತರೂ ಮೊದಲು ಬ್ಯಾಟ್ ಮಾಡುವ ಅವಕಾಶ ಪಡೆದ ಭಾರತ ತಂಡಕ್ಕೆ ಇಶಾನ್ ಕಿಶನ್ 7 ಎಸೆತಗಳಲ್ಲಿ 2 ಸಿಕ್ಸರ್ ಸೇರಿದ 15 ರನ್ ಗಳಿಸಿದರೆ, ಋತುರಾಜ್ ಗಾಯಕ್ವಾಡ್ 12 ಎಸೆತಗಳಲ್ಲಿ 1 ಬೌಂಡರಿ ಒಳಗೊಂಡ 10 ರನ್ ಬಾರಿಸಿ ಇಬ್ಬರೂ ನೆಗ್ಡಿಗೆ ವಿಕೆಟ್ ಒಪ್ಪಿಸಿದರು.


Share this Story:

Follow Webdunia kannada

ಮುಂದಿನ ಸುದ್ದಿ

ಭಾರತ-ದ.ಆಫ್ರಿಕಾ ಪಂದ್ಯಕ್ಕೆ ಮಳೆ ಕಾಟ