Webdunia - Bharat's app for daily news and videos

Install App

ಸಹೋದರಿಗೆ ಅಕ್ರೆಡಿಟೇಶನ್ ಕಾರ್ಡ್‌ ಕೊಟ್ಟು ಪ್ಯಾರಿಸ್‌ನಲ್ಲಿ ಸಿಕ್ಕಿಬಿದ್ದ ಭಾರತ ಕುಸ್ತಿಪಟುಗೆ ನಿಷೇಧದ ಭೀತಿ

Sampriya
ಗುರುವಾರ, 8 ಆಗಸ್ಟ್ 2024 (17:10 IST)
Photo Courtesy X
ಪ್ಯಾರಿಸ್: ಒಲಿಂಪಿಕ್ಸ್‌ನಲ್ಲಿ ಭಾರತದ ಕುಸ್ತಿಪಟು ವಿನೇಶ್ ಫೋಗಟ್ ಅನರ್ಹಗೊಂಡ ಬೆನ್ನಲ್ಲೇ ಭಾರತದ ಮತ್ತೊಬ್ಬ ಕುಸ್ತಿಪಟು ಎಡವಟ್ಟು ಮಾಡಿಕೊಂಡಿದ್ದು, ಈ ತಪ್ಪಿಗೆ ಅವರಿಗೆ ಮೂರು  ವರ್ಷಗಳ ನಿಷೇಧದ ಭೀತಿ ಎದುರಾಗಿದೆ.

ಕ್ರೀಡಾಕೂಟದಲ್ಲಿ ಗಂಭೀರ ಅಶಿಸ್ತು ಪ್ರದರ್ಶಿಸಿದ ಭಾರತದ ಕುಸ್ತಿಪಟು ಅಂತಿಮ್ ಪಂಘಲ್‌ ಅವರಿಗೆ ಭಾರತೀಯ ಒಲಿಂಪಿಕ್ಸ್ ಸಂಸ್ಥೆ(ಐಒಎ) 3 ವರ್ಷಗಳ ಕಾಲ ನಿಷೇಧ ಹೇರುವ ಸಾಧ್ಯತೆ ಇದೆ ಎಂದು ಮೂಲಗಳಿಂದ ತಿಳಿದುಬಂದಿದೆ. ಅಂತಿಮ್ ಅವರು ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಿ ಆರಂಭದ ಸುತ್ತಿನಲ್ಲೇ ಹೊರಬಿದ್ದಿದ್ದರು.

ಅಂತಿಮ್ ಅವರ ತಪ್ಪದಾರೇನು:

ತನ್ನ ಅಕ್ರೆಡಿಟೇಶನ್ ಕಾರ್ಡ್ ಅನ್ನು ಸಹೋದರಿಗೆ ನೀಡಿ ಒಲಿಂಪಿಕ್ಸ್‌ನ ಕ್ರೀಡಾ ಗ್ರಾಮಕ್ಕೆ ಪ್ರವೇಶ ಕೊಡಿಸಲು ಯತ್ನಿಸಿ, ಸಿಕ್ಕಿಬಿದ್ದಿದರು. ಇದರಿಂದ ಭಾರತದ ಒಲಿಂಪಿಕ್ ತಂಡಕ್ಕೆ ತೀವ್ರ ಮುಜುಗರ ಉಂಟು ಮಾಡಿರುವ ಹಿನ್ನೆಲೆಯಲ್ಲಿ ಐಒಎ ಕ್ರಮ ಕೈಗೊಳ್ಳಲಿದೆ ಎಂದು ತಿಳಿದುಬಂದಿದೆ.

ಪಂಘಾಲ್ ಅವರು ಭಾರತಕ್ಕೆ ಆಗಮಿಸಿದ ಬಳಿಕ ನಿಷೇಧದ ಕುರಿತಂತೆ ಅಧಿಕೃತ ಆದೇಶ ಹೊರಬೀಳಲಿದೆ ಎಂದು ಮೂಲಗಳು ತಿಳಿಸಿವೆ.

ಬುಧವಾರ 53 ಕೆ.ಜಿ ವಿಭಾಗದ ಆರಂಭಿಕ ಬೌಟ್‌ನಲ್ಲೇ ಸೋತ ಬಳಿಕ ಅಂತಿಮ್ ಪಂಘಲ್ ಅಥ್ಲೆಟ್ಸ್ ವಿಲೇಜ್‌ಗೆ ತೆರಳದೆ ಕೋಚ್‌ಗಳಿದ್ದ ಹೋಟೆಲ್‌ಗೆ ಬಂದಿದ್ದರು.  ಈ ವೇಳೆ ತನ್ನ ಸಹೋದರಿಗೆ ಕಾರ್ಡ್ ನೀಡಿ ಕ್ರೀಡಾ ಗ್ರಾಮದಿಂದ ತಮ್ಮ ವಸ್ತುಗಳನ್ನು ತರುವಂತೆ ಹೇಳಿ ಕಳುಹಿಸಿದ್ದಾರೆ. ಅವರ ಸಹೋದರಿಯನ್ನು ಪ್ರವೇಶದ ಸಂದರ್ಭದಲ್ಲೇ ಹಿಡಿದ ಭದ್ರತಾ ಸಿಬ್ಬಂದಿ ಸ್ಥಳೀಯ ಪೊಲೀಸ್ ಠಾಣೆಗೆ ಕರೆದೊಯ್ದು ಹೇಳಿಕೆ ದಾಖಲಿಸಿದ್ದಾರೆ ಎಂದು ವರದಿ ತಿಳಿಸಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Virat Kohli: ಚಿನ್ನಸ್ವಾಮಿ ಕಾಲ್ತುಳಿತದ ಬಗ್ಗೆ ಕೊಹ್ಲಿ ಏನೂ ಹೇಳಿಲ್ವಾ, ಇಲ್ಲಿದೆ ಅಪ್ ಡೇಟ್

Chinnaswamy stampede: ನಮ್ಮಲ್ಲಿ ಹೀಗಾಗಿರ್ಲಿಲ್ಲಪ್ಪ, ನೋವಿನಲ್ಲೂ ಬೆಂಗಳೂರಿಗೆ ತಿವಿದ ಮುಂಬೈ ಫ್ಯಾನ್ಸ್

Chinnaswamy stampede: ಚಿನ್ನಸ್ವಾಮಿ ಕಾಲ್ತುಳಿತಕ್ಕೆ ಪೊಲೀಸರಲ್ಲ ಇದೇ ಎರಡು ಕಾರಣ ಇದುವೇ

Chinnaswamy stampede: ಓಪನ್ ಬಸ್ ನಲ್ಲಿ ಮೆರವಣಿಗೆ ಮಾಡಲು ಬಯಸಿದ್ದ ಆರ್ ಸಿಬಿ, ಹಾಗೇನಾದ್ರೂ ಇದ್ರೆ ಏನಾಗ್ತಿತ್ತು

Chinnaswamy Stampede: ಚಿನ್ನಸ್ವಾಮಿ ಭೀಕರ ಕಾಲ್ತುಳಿತಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ

ಮುಂದಿನ ಸುದ್ದಿ
Show comments