Webdunia - Bharat's app for daily news and videos

Install App

ಶ್ರೀಕೃಷ್ಣ ಜನ್ಮಭೂಮಿ ವಿವಾದ ಶುರು: ಕೋರ್ಟ್ ಮೊರೆ

Webdunia
ಗುರುವಾರ, 19 ಮೇ 2022 (22:23 IST)
ಕೃಷ್ಣ ಜನ್ಮಭೂಮಿ ಪ್ರಕರಣದ ಅರ್ಜಿದಾರ ಶಾಹಿ ಈದ್ಗಾ ಜಮಾ ಮಸೀದಿಯ ಒಳಗೆ ಶ್ರೀ ಕೃಷ್ಣ ದೇವಸ್ಥಾನದ ಕಟ್ಟಡವಿದ್ದು, ಅಲ್ಲಿ ಬಾಲ ಗೋಪಾಲನಿಗೆ ಅಭಿಷೇಕ ನಡೆಸಲು ಅನುಮತಿ ನೀಡಬೇಕು ಎಂದು ಅರ್ಜಿ ಸಲ್ಲಿಸಿದ್ದಾರೆ.
ಅಭಿಷೇಕಕ್ಕೆ ಅನುಮತಿ ಕೋರಿ ಸ್ಥಳೀಯ ಕೋರ್ಟ್‌ಗೆ ಅಖಿಲ ಭಾರತೀಯ ಹಿಂದೂ ಮಹಾಸಭಾದ ರಾಷ್ಟ್ರೀಯ ಖಜಾಂಚಿ ದಿನೇಶ್‌ ಕೌಶಿಕ್‌ ಅರ್ಜಿ ಸಲ್ಲಿಸಿದ್ದಾರೆ ಎಂದು ಜಿಲ್ಲಾ ಸರ್ಕಾರಿ ವಕೀಲ ಸಂಜಯ್‌ ಗೌರ್‌ ತಿಳಿಸಿದ್ದಾರೆ.
ಅರ್ಜಿಯ ವಿಚಾರಣೆಗೆ ಸಮ್ಮತಿಸಿರುವ ಕೋರ್ಟ್‌ ಜುಲೈ 1ಕ್ಕೆ ಕೈಗೆತ್ತಿಕೊಳ್ಳಲಿದೆ.ಕಳೆದ ವರ್ಷ ಡಿಸೆಂಬರ್‌ನಲ್ಲಿ ಕೆಲವು ಹಿಂದೂ ಕಾರ್ಯಕರ್ತರು ಜಮಾ ಮಸೀದಿಯ ಒಳಗಿದೆ ಎನ್ನಲಾದ ಶ್ರೀ ಕೃಷ್ಣ ಜನ್ಮಭೂಮಿ ದೇವಸ್ಥಾನದ ಕಟ್ಟಡದಲ್ಲಿ ಬಾಲ ಗೋಪಾಲನಿಗೆ ಜಲಾಭಿಷೇಕ ಮಾಡಲು ಯೋಜನೆ ರೂಪಿಸಿದ್ದರು.
ಶ್ರೀ ಕೃಷ್ಣ ಜನ್ಮಸ್ಥಳದಲ್ಲೇ ಮಸೀದಿ ನಿರ್ಮಿಸಲಾಗಿದೆ, ಮಸೀದಿಯನ್ನು ತೆರವು ಮಾಡಬೇಕು ಎಂದು ಕೆಲವು ಹಿಂದೂ ಮುಖಂಡರು ಹಲವು ಕೋರ್ಟ್‌ಗಳಲ್ಲಿ ಅರ್ಜಿ ಸಲ್ಲಿಸಿದ ನಂತರ ಈ ಬೆಳವಣಿಗೆ ಸಂಭವಿಸಿತ್ತು.
 

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments