Webdunia - Bharat's app for daily news and videos

Install App

ಚಾಂಪಿಯನ್ಸ್ ಟ್ರೋಫಿ ಎಲ್ಲ ಪಂದ್ಯಗಳಿಗೂ ಹಾಜರಾಗಿ ಟೀಂ ಇಂಡಿಯಾಗೆ ಬೆಂಬಲ ನೀಡುತ್ತೇನೆ: ವಿಜಯ್ ಮಲ್ಯ

Webdunia
ಮಂಗಳವಾರ, 6 ಜೂನ್ 2017 (13:56 IST)
ನವದೆಹಲಿ: ಐಸಿಸಿ ಚಾಂಪಿಯನ್ಸ್ ಟ್ರೋಫಿ ಪಂದ್ಯಾವಳಿಯ ಭಾರತ ಮತ್ತು ಪಾಕಿಸ್ತಾನ ಪಂದ್ಯದ ವೀಕ್ಷಣೆಗೆ ಬಂದಿದ್ದ ಉದ್ಯಮಿ ವಿಜಯ್ ಮಲ್ಯ ವಿರುದ್ಧ ಕಿಡಿಕಾರಿದ್ದ ಮಾಧ್ಯಮಗಳಿಗೆ ಕಿಡಿಕಾರಿರುವ ಮಲ್ಯ ,ನಾನು ಭಾರತದ ಎಲ್ಲ ಪಂದ್ಯಗಳಿಗೂ ಹಾಜರಾಗಿ ಟೀಂ ಇಂಡಿಯಾಗೆ ಬೆಂಬಲ ನೀಡುತ್ತೇನೆ’ ಎಂದು ವಿಜಯ್ ಮಲ್ಯ ಟ್ವೀಟ್‌ ಮಾಡಿದ್ದಾರೆ. 
 
ಅಷ್ಟೇ ಅಲ್ಲ ಮಾನವ ಕಳ್ಳಸಾಗಣೆ ವಿರುದ್ಧ ಹೋರಾಡುತ್ತಿರುವ ಜಸ್ಟೀಸ್ ಅಂಡ್ ಕೇರ್ ಎಂಬ ಸಂಸ್ಥೆ ಆಯೋಜಿಸಿದ್ದ ನಿಧಿ ಸಂಗ್ರಹ ಚಾರಿಟಿ ಷೋನಲ್ಲಿ ಮಲ್ಯ ಭಾಗವಹಿಸಿದ್ದಾರೆ. ವಿರಾಟ್ ಕೊಹ್ಲಿ, ಎಂಎಸ್ ಧೋನಿ. ಯುವರಾಜ್ ಸಿಂಗ್ ಮುಂತಾದ ಆಟಗಾರರು ಪಾಲ್ಗೊಂಡು ತಮ್ಮ ಶಕ್ತ್ಯಾನುಸಾರ ನಿಧಿ ಸಂಗ್ರಹಣೆಗೆ ಕೈಜೋಡಿಸಿದರು. ಆದರೆ ಈ ಮಧ್ಯೆ ವಿಜಯ್ ಮಲ್ಯ ಸಹ ಭಾರತೀಯ ಅಟಗಾರರ ಕೈಕುಲುಕುತ್ತಾ ಓಡಾಡಿದ್ದಾರೆ ಎಂಬುದು ವಿಶೇಷ.
 
ಇಂಗ್ಲೆಂಡ್ ನಲ್ಲಿ ಬೀಡು ಬಿಟ್ಟಿರುವ ವಿಜಯ್ ಮಲ್ಯ ಬರ್ಮಿಂಗ್ ಹ್ಯಾಮ್ ನ ಎಜ್ ಬಾಸ್ಟನ್ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ಪಾಕಿಸ್ತಾನ ಮತ್ತು ಭಾರತ ನಡುವಿನ ಹೈವೋಲ್ಟೇಜ್ ಪಂದ್ಯವನ್ನು ವಿಐಪಿ ಸ್ಟ್ಯಾಂಡ್ ನಲ್ಲಿ ಕುಳಿತು ವೀಕ್ಷಿಸಿದ್ದರು. ಮಲ್ಯ ಪಂದ್ಯ ವೀಕ್ಷಣೆಯ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ, ಮಾಧ್ಯಮಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿತ್ತು.ಇದಕ್ಕೆ ಟ್ವೀಟಿಸಿರುವ ಮಲ್ಯ ಭಾರತ-ಪಾಕ್ ವೀಕ್ಷಿಸಲು ಬಂದಿದ್ದ ನನಗೆ ಮಾಧ್ಯಮಗಳು ಭಾರೀ ಪ್ರಚಾರವನ್ನು ಕೊಟ್ಟಿದೆ. ಹೀಗಾಗಿ ನಾನು ಮುಂದಿನ ಭಾರತದ ಎಲ್ಲಾ ಪಂದ್ಯಗಳನ್ನು ವೀಕ್ಷಿಸಲು ಬರುತ್ತೇನೆ ಎಂದು ಹೇಳಿದ್ದಾರೆ. 

ವೆಬ್ ದುನಿಯಾ ಫ್ಯಾಂಟಸಿ ಕ್ರಿಕೆಟ್ ಲೀಗ್: ಆಡಿ 2.5 ಲಕ್ಷ ರೂ. ಮೌಲ್ಯದ ಬಹುಮಾನ ಗೆಲ್ಲಿ.. ವೆಬ್ ದುನಿಯಾ ಫ್ಯಾಂಟಸಿ ಲೀಗ್`ನಲ್ಲಿ ಭಾಗವಹಿಸಲು ಈ ಲಿಂಕ್ ಕ್ಲಿಕ್ ಮಾಡಿ..
 
http://kannada.fantasycricket.webdunia.com/
 
 
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ವೈಭವ್‌ ಸೂರ್ಯವಂಶಿಯ ಹಾದಿಯಲ್ಲಿ ಸ್ನೇಹಿತ ಅಯಾನ್‌ ರಾಜ್‌: ತ್ರಿಶತಕ ಸಿಡಿಸಿದ ಬಿಹಾರದ 13ರ ಪೋರ

ಭಾರತ, ಇಂಗ್ಲೆಂಡ್ ಸರಣಿಗೆ ನನ್ನ ಹೆಸರಿಡಬೇಡಿ ಎಂದ ಸಚಿನ್ ತೆಂಡುಲ್ಕರ್: ಕಾರಣ ಕೇಳಿದ್ರೆ ಹೆಮ್ಮೆ

Rohit Sharma: ಟೀಂ ಇಂಡಿಯಾ ಬಸ್ ನಲ್ಲಿ ರೋಹಿತ್ ಶರ್ಮಾ ಸೀಟ್ ಈಗ ಯಾರದ್ದು

ಲಂಡನ್‌ನಿಂದ ತುರ್ತಾಗಿ ವಾಪಸಾದ ಗೌತಮ್‌ ಗಂಭೀರ್‌: ವಿವಿಎಸ್​ ಲಕ್ಷ್ಮಣ್‌ಗೆ ಹೊಸ ಜವಾಬ್ದಾರಿ ನೀಡಲು ಚಿಂತನೆ

ಎಬಿಡಿ ವಿಲಿಯರ್ಸ್ ಗೆ ಒಂದೇ ತಿಂಗಳಲ್ಲಿ ಡಬಲ್ ಧಮಾಕ

ಮುಂದಿನ ಸುದ್ದಿ
Show comments