Select Your Language

Notifications

webdunia
webdunia
webdunia
webdunia

ಕೆಎಲ್ ರಾಹುಲ್ ಭಾರತ ಟಿ-20 ತಂಡದ ನಾಯಕ: ದಿನೇಶ್, ಹಾರ್ದಿಕ್ ವಾಪಸ್!

ಕೆಎಲ್ ರಾಹುಲ್ ಭಾರತ ಟಿ-20 ತಂಡದ ನಾಯಕ: ದಿನೇಶ್, ಹಾರ್ದಿಕ್ ವಾಪಸ್!
bangalore , ಭಾನುವಾರ, 22 ಮೇ 2022 (20:32 IST)
ಕರ್ನಾಟಕದ ಕೆಎಲ್ ರಾಹುಲ್ ತವರಿನಲ್ಲಿ ನಡೆಯಲಿರುವ ದಕ್ಷಿಣ ಆಫ್ರಿಕಾ ವಿರುದ್ಧದ ಟಿ-20 ಸರಣಿಗೆ ಪ್ರಕಟಿಸಲಾದ ಭಾರತ ತಂಡವನ್ನು ಮುನ್ನಡೆಸಲಿದ್ದಾರೆ.
ಬಿಸಿಸಿಐ ಆಯ್ಕೆ ಸಮಿತಿ ಭಾನುವಾರ 18 ಸದಸ್ಯರ ತಂಡವನ್ನು ಪ್ರಕಟಿಸಿದ್ದು, ನಾಯಕ ರೋಹಿತ್ ಶರ್ಮ, ವಿರಾಟ್ ಕೊಹ್ಲಿ, ಜಸ್ ಪ್ರೀತ್ ಬುಮ್ರಾ ಹಾಗೂ ಮೊಹಮದ್ ಶಮಿ ಮುಂತಾದ ಹಿರಿಯ ಆಟಗಾರರಿಗೆ ವಿಶ್ರಾಂತಿ ನೀಡಿದೆ.
ಕೆಎಲ್ ರಾಹುಲ್ ಗೆ ನಾಯಕತ್ವ ಲಭಿಸಿದೆ. ಅಲ್ಲದೇ ವಿಕೆಟ್ ಕೀಪರ್ ದಿನೇಶ್ ಕಾರ್ತಿಕ್ ಮತ್ತು ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ಭಾರತ ತಂಡಕ್ಕೆ ಮರಳಿದ್ದಾರೆ.
ಮಧ್ಯಮ ವೇಗಿಗಳಾದ ಆರ್ಷದ್ ದೀಪ್ ಸಿಂಗ್ ಮತ್ತು ವೇಗದ ದಾಳಿಯಲ್ಲಿ ಗಮನ ಸೆಳೆಯುತ್ತಿರುವ ಉಮ್ರಾನ್ ಮಲಿಕ್ ಇದೇ ಮೊದಲ ಬಾರಿಗೆ ಭಾರತ ತಂಡದ ಬಾಗಿಲು ತೆರೆದಿದೆ.
ಉಳಿದಂತೆ ಶ್ರೇಯಸ್ ಅಯ್ಯರ್, ಇಶಾನ್ ಕಿಶನ್, ವೆಂಕಟೇಶ್ ಅಯ್ಯರ್ ಮತ್ತು ಋತುರಾಜ್ ಗಾಯಕ್ವಾಡ್ ಸ್ಥಾನ ಉಳಿಸಿಕೊಂಡಿದ್ದಾರೆ.
ಭಾರತ ಟಿ-20 ತಂಡ: ಕೆಎಲ್ ರಾಹುಲ್ (ನಾಯಕ), ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಋತುರಾಜ್ ಗಾಯಕ್ವಾಡ್, ಇಶನ್ ಕಿಶನ್, ದೀಪಕ್ ಹೂಡಾ, ಶ್ರೇಯಸ್ ಅಯ್ಯರ್, ರಿಷಭ್ ಪಂತ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ವೆಂಕಟೇಶ್ ಅಯ್ಯರ್, ಯಜುರ್ವೆಂದ್ರ ಚಾಹಲ್, ಕುಲದೀಪ್ ಯಾದವ್, ಅಕ್ಸರ್ ಪಟೇಲ್, ರವಿ ಬಿಶ್ನೋಯಿ, ಭುವೇಶ್ವ್ರ್ ಕುಮಾರ್, ಹರ್ಷಲ್ ಪಟೇಲ್, ಅವಿಶ್ ಖಾನ್, ಆರ್ಷದೀಪ್ ಸಿಂಗ್, ಉಮ್ರಾನ್ ಮಲಿಕ್.

Share this Story:

Follow Webdunia kannada

ಮುಂದಿನ ಸುದ್ದಿ

ರಿಷಬ್ ಪಂತ್ ಪ್ರಮಾದದಿಂದ ಗೆದ್ದ ಮುಂಬೈ: ನೆಟ್ಟಿಗರಿಂದ ಭಾರೀ ಟೀಕೆ