ಕರ್ನಾಟಕದ ಕೆಎಲ್ ರಾಹುಲ್ ತವರಿನಲ್ಲಿ ನಡೆಯಲಿರುವ ದಕ್ಷಿಣ ಆಫ್ರಿಕಾ ವಿರುದ್ಧದ ಟಿ-20 ಸರಣಿಗೆ ಪ್ರಕಟಿಸಲಾದ ಭಾರತ ತಂಡವನ್ನು ಮುನ್ನಡೆಸಲಿದ್ದಾರೆ.
ಬಿಸಿಸಿಐ ಆಯ್ಕೆ ಸಮಿತಿ ಭಾನುವಾರ 18 ಸದಸ್ಯರ ತಂಡವನ್ನು ಪ್ರಕಟಿಸಿದ್ದು, ನಾಯಕ ರೋಹಿತ್ ಶರ್ಮ, ವಿರಾಟ್ ಕೊಹ್ಲಿ, ಜಸ್ ಪ್ರೀತ್ ಬುಮ್ರಾ ಹಾಗೂ ಮೊಹಮದ್ ಶಮಿ ಮುಂತಾದ ಹಿರಿಯ ಆಟಗಾರರಿಗೆ ವಿಶ್ರಾಂತಿ ನೀಡಿದೆ.
ಕೆಎಲ್ ರಾಹುಲ್ ಗೆ ನಾಯಕತ್ವ ಲಭಿಸಿದೆ. ಅಲ್ಲದೇ ವಿಕೆಟ್ ಕೀಪರ್ ದಿನೇಶ್ ಕಾರ್ತಿಕ್ ಮತ್ತು ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ಭಾರತ ತಂಡಕ್ಕೆ ಮರಳಿದ್ದಾರೆ.
ಮಧ್ಯಮ ವೇಗಿಗಳಾದ ಆರ್ಷದ್ ದೀಪ್ ಸಿಂಗ್ ಮತ್ತು ವೇಗದ ದಾಳಿಯಲ್ಲಿ ಗಮನ ಸೆಳೆಯುತ್ತಿರುವ ಉಮ್ರಾನ್ ಮಲಿಕ್ ಇದೇ ಮೊದಲ ಬಾರಿಗೆ ಭಾರತ ತಂಡದ ಬಾಗಿಲು ತೆರೆದಿದೆ.
ಉಳಿದಂತೆ ಶ್ರೇಯಸ್ ಅಯ್ಯರ್, ಇಶಾನ್ ಕಿಶನ್, ವೆಂಕಟೇಶ್ ಅಯ್ಯರ್ ಮತ್ತು ಋತುರಾಜ್ ಗಾಯಕ್ವಾಡ್ ಸ್ಥಾನ ಉಳಿಸಿಕೊಂಡಿದ್ದಾರೆ.