Webdunia - Bharat's app for daily news and videos

Install App

ಬ್ಯಾಡ್ಮಿಂಟನ್‌ ಕೋರ್ಟ್‌ನಲ್ಲಿ ಕಾಣಿಸಿಕೊಂಡ ಮಹೇಂದ್ರ ಸಿಂಗ್‌ ಧೋನಿ: ಇದು ಐಪಿಎಲ್‌ಗೆ ಸಿದ್ಧತೆ ಎಂದ ಫ್ಯಾನ್ಸ್‌

Sampriya
ಶನಿವಾರ, 24 ಆಗಸ್ಟ್ 2024 (19:10 IST)
Photo Courtesy X
ಚೆನ್ನೈ: ಕ್ಯಾಪ್ಟನ್‌ ಕೂಲ್‌ ಮಹೇಂದ್ರ ಸಿಂಗ್‌ ಧೋನಿ ಮುಂದಿನ ಐಪಿಎಲ್‌ ಟೂರ್ನಿ ಆಡುತ್ತಾರೆಯೇ ಎಂಬ ಪ್ರಶ್ನೆಯ ಮಧ್ಯೆ ಅವರು ತಾಲೀಮು ಆರಂಭಿಸಿದ್ದಾರೆ. ಇದು ಅವರ ಅಭಿಮಾನಿಗಳಿಗೆ ಖುಷಿಯಾಗಿದ್ದು, ಇದು ಮುಂದಿನ ಐಪಿಎಲ್‌ಗೆ ಭರ್ಜರಿ ಸಿದ್ಧತೆ ಎಂಬ ಲೆಕ್ಕಾಚಾರ ಹೊಂದಿದ್ದಾರೆ.

ಚೆನ್ನೈ ಸೂಪರ್ ಕಿಂಗ್ಸ್​ ತಂಡದ ನಾಯಕರಾಗಿದ್ದ ಧೋನಿ ಐಪಿಎಲ್‌ನ ಕಳೆದ ಆವೃತ್ತಿಗೆ ಮೊದಲು ಋತುರಾಜ್‌ ಗಾಯಕವಾಡ್ ಅವರಿಗೆ ನಾಯಕತ್ವವನ್ನು ಹಸ್ತಾಂತರಮಾಡಿ ಅಚ್ಚರಿ ಮೂಡಿಸಿದ್ದರು. ಈ ಬೆಳವಣಿಗೆ ಮಧ್ಯೆ 43 ವರ್ಷದ ಧೋನಿ ಕ್ರಿಕೆಟ್‌ಗೆ ವಿದಾಯ ಹೇಳುತ್ತಾರೆ ಎನ್ನಲಾಗಿತ್ತು. ಆದರೆ, ಟೂರ್ನಿಯಲ್ಲಿ ಅವರು ಚೆನ್ನೈ ತಂಡದ ಪರ ಮಿಂಚಿದ್ದು ಮಾತ್ರವಲ್ಲದೆ ಕ್ರಿಕೆಟ್‌ಗೆ ತಾನಿನ್ನೂ ಸಮರ್ಥನಿದ್ದೇನೆ ಎಂಬ ಸಂದೇಶ ರವಾನಿಸಿದ್ದರು.

ಮುಂದಿನ ಐಪಿಎಲ್‌ ಟೂರ್ನಿಯನ್ನು ಧೋನಿ ಆಡುತ್ತಾರೆಯೇ ಎಂಬ ಪ್ರಶ್ನೆ ಈಗ ಎದ್ದಿದೆ. ಅದರ ನಡುವೆ ಧೋನಿ ಐಪಿಎಲ್​ಗಾಗಿ ಸಿದ್ದತೆಗಳನ್ನು ಶುರು ಮಾಡಿದ್ದಾರೆ. ಇದಕ್ಕಾಗಿ ಈ ಬಾರಿ ಬ್ಯಾಡ್ಮಿಂಟನ್​ ಮೊರೆ ಹೋಗಿದ್ದಾರೆ. ಬಿಡುವಿನಲ್ಲಿರುವ ಧೋನಿ ಬ್ಯಾಡ್ಮಿಂಟನ್​ ಅಂಗಳದಲ್ಲಿ ಕಾಣಿಸಿಕೊಂಡಿದ್ದಾರೆ. ಐಪಿಎಲ್ ಆರಂಭಕ್ಕೂ ಮುನ್ನ ಫಿಟ್​ನೆಸ್ ಸಾಧಿಸುವ ಇರಾದೆಯಲ್ಲಿರುವ ಧೋನಿ ಬ್ಯಾಡ್ಮಿಂಟನ್ ಆಡಲಾರಂಭಿಸಿದ್ದಾರೆ ಎನ್ನಲಾಗುತ್ತಿದೆ

ಈ ಹಿಂದೆ ಕೊರೋನಾ ಲಾಕ್​ಡೌನ್ ವೇಳೆಯೂ ಧೋನಿ ತಮ್ಮ ಫಿಟ್​ನೆಸ್​ ಅನ್ನು ಕಾಪಾಡಿಕೊಳ್ಳಲು ಪ್ರತಿದಿನ ಬ್ಯಾಡ್ಮಿಂಟನ್​ ಆಡುತ್ತಿದ್ದರು. ಇದೀಗ ಮತ್ತೆ ಬ್ಯಾಡ್ಮಿಂಟನ್​ ಅಂಗಳದಲ್ಲಿ ಕಾಣಿಸಿಕೊಳ್ಳುವ ಮೂಲಕ ಗಮನ ಸೆಳೆದಿದ್ದಾರೆ. ಇದರೊಂದಿಗೆ ಧೋನಿ ಈ ಬಾರಿಯ ಐಪಿಎಲ್ ಆಡುವುದು ಕೂಡ ಖಚಿತವಾಗಿದೆ. ಈ ಬಾರಿಯ ಮೆಗಾ ಹರಾಜಿಗೂ ಮುನ್ನ ಮಹೇಂದ್ರ ಸಿಂಗ್ ಧೋನಿಯನ್ನು ಅನ್​ಕ್ಯಾಪ್ಡ್ ಆಟಗಾರರ ಪಟ್ಟಿಯಲ್ಲಿ ಸಿಎಸ್​ಕೆ ರಿಟೈನ್ ಮಾಡಿಕೊಳ್ಳುವ ಸಾಧ್ಯತೆಯಿದೆ.<>

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ವೈಭವ್‌ ಸೂರ್ಯವಂಶಿಯ ಹಾದಿಯಲ್ಲಿ ಸ್ನೇಹಿತ ಅಯಾನ್‌ ರಾಜ್‌: ತ್ರಿಶತಕ ಸಿಡಿಸಿದ ಬಿಹಾರದ 13ರ ಪೋರ

ಭಾರತ, ಇಂಗ್ಲೆಂಡ್ ಸರಣಿಗೆ ನನ್ನ ಹೆಸರಿಡಬೇಡಿ ಎಂದ ಸಚಿನ್ ತೆಂಡುಲ್ಕರ್: ಕಾರಣ ಕೇಳಿದ್ರೆ ಹೆಮ್ಮೆ

Rohit Sharma: ಟೀಂ ಇಂಡಿಯಾ ಬಸ್ ನಲ್ಲಿ ರೋಹಿತ್ ಶರ್ಮಾ ಸೀಟ್ ಈಗ ಯಾರದ್ದು

ಲಂಡನ್‌ನಿಂದ ತುರ್ತಾಗಿ ವಾಪಸಾದ ಗೌತಮ್‌ ಗಂಭೀರ್‌: ವಿವಿಎಸ್​ ಲಕ್ಷ್ಮಣ್‌ಗೆ ಹೊಸ ಜವಾಬ್ದಾರಿ ನೀಡಲು ಚಿಂತನೆ

ಎಬಿಡಿ ವಿಲಿಯರ್ಸ್ ಗೆ ಒಂದೇ ತಿಂಗಳಲ್ಲಿ ಡಬಲ್ ಧಮಾಕ

ಮುಂದಿನ ಸುದ್ದಿ
Show comments