Webdunia - Bharat's app for daily news and videos

Install App

ಮನು ಭಾಕರ್, ಗುಕೇಶ್ ಗೆ ಖೇಲ್ ರತ್ನ: ಕೊನೆಗೂ ಅರ್ಹರಿಗೇ ಸಿಕ್ತು ಪ್ರಶಸ್ತಿ

Krishnaveni K
ಗುರುವಾರ, 2 ಜನವರಿ 2025 (15:05 IST)
ನವದೆಹಲಿ: ಒಲಿಂಪಿಕ್ಸ್ ನಲ್ಲಿ ಎರಡು ಪದಕ ಗೆದ್ದು ಹೆಮ್ಮೆ ತಂದ ಮನು ಭಾಕರ್ ಮತ್ತು ಕಿರಿಯ ವಯಸ್ಸಿನಲ್ಲಿ ವಿಶ್ವ ಚೆಸ್ ಚಾಂಪಿಯನ್ ಆದ ಗುಕೇಶ್ ಖೇಲ್ ರತ್ನ ಪ್ರಶಸ್ತಿ ಲಭಿಸಿದೆ. ಈ ಮೂಲಕ ಅರ್ಹರಿಗೇ ಪ್ರಶಸ್ತಿ ಸಿಕ್ಕಿದಂತಾಗಿದೆ.

ಧ್ಯಾನ್ ಚಂದ್ ಖೇಲ್ ರತ್ನ ಪ್ರಶಸ್ತಿ ನಾಮಿನೇಷನ್ ಪಟ್ಟಿಯಲ್ಲಿ ಮನು ಭಾಕರ್ ಇಲ್ಲ ಎನ್ನುವುದು ವಿವಾದವಾಗಿತ್ತು. ಸ್ವತಃ ಮನು ತಂದೆಯೇ ಈ ಬಗ್ಗೆ ಬೇಸರ ಹೊರಹಾಕಿದ್ದರು. ಪ್ರಶಸ್ತಿಗಾಗಿ ಭಿಕ್ಷೆ ಬೇಡಬೇಕಾ ಎಂದಿದ್ದರು. ವಿವಾದದ ಬಳಿಕ ಕೊನೆಯ ಕ್ಷಣದಲ್ಲಿ ಸ್ವತಃ ಕ್ರೀಡಾ ಸಚಿವರೇ ಮಧ್ಯಪ್ರವೇಶಿಸಿ ಮನು ಭಾಕರ್ ಹೆಸರು ಸೇರ್ಪಡೆಗೆ ಸೂಚನೆ ನೀಡಿದ್ದರು.

ಕೊನೆಗೂ ಈಗ ರಾಷ್ಟ್ರೀಯ ಕ್ರೀಡಾ ಪುರಸ್ಕಾರ ಪ್ರಶಸ್ತಿ ವಿಜೇತರ ಲಿಸ್ಟ್ ಪ್ರಕಟವಾಗಿದೆ. ಮನು ಭಾಕರ್ ಮತ್ತು ಗುಕೇಶ್, ಹಾಕಿ ನಾಯಕ ಹರ್ಮನ್ ಪ್ರೀತ್ ಸಿಂಗ್, ಪ್ಯಾರಾ ಅಥ್ಲೆಟ್ ಪ್ರವೀಣ್ ಕುಮಾರ್ ಗೆ ಖೇಲ್ ರತ್ನ ಪ್ರಶಸ್ತಿ ಘೋಷಣೆ ಮಾಡಲಾಗಿದೆ. ಜನವರಿ 17 ರಂದು ರಾಷ್ಟ್ರಪತಿ ಭವನದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಪ್ರಶಸ್ತಿ ವಿತರಿಸಲಾಗುತ್ತದೆ.

ಪ್ರತಿಷ್ಠಿತ ಖೇಲ್ ರತ್ನ ಪ್ರಶಸ್ತಿಗೆ ನಾಮನಿರ್ದೇಶನಗೊಂಡವರಲ್ಲಿ ಹಾಕಿ ತಂಡದ ನಾಯಕ ಹರ್ಮನ್ ಪ್ರೀತ್ ಸಿಂಗ್, ಪ್ಯಾರಾ ಅಥ್ಲೆಟ್ ಪ್ರವೀಣ್ ಕುಮಾರ್ ಕೂಡಾ ಇದ್ದರು. ಅಂತಿಮ ಪಟ್ಟಿಯಲ್ಲಿ ಗುಕೇಶ್, ಮನು ಭಾಕರ್ ಹೆಸರು ಸೇರ್ಪಡೆಯಾಗಿತ್ತು

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ವೈಭವ್‌ ಸೂರ್ಯವಂಶಿಯ ಹಾದಿಯಲ್ಲಿ ಸ್ನೇಹಿತ ಅಯಾನ್‌ ರಾಜ್‌: ತ್ರಿಶತಕ ಸಿಡಿಸಿದ ಬಿಹಾರದ 13ರ ಪೋರ

ಭಾರತ, ಇಂಗ್ಲೆಂಡ್ ಸರಣಿಗೆ ನನ್ನ ಹೆಸರಿಡಬೇಡಿ ಎಂದ ಸಚಿನ್ ತೆಂಡುಲ್ಕರ್: ಕಾರಣ ಕೇಳಿದ್ರೆ ಹೆಮ್ಮೆ

Rohit Sharma: ಟೀಂ ಇಂಡಿಯಾ ಬಸ್ ನಲ್ಲಿ ರೋಹಿತ್ ಶರ್ಮಾ ಸೀಟ್ ಈಗ ಯಾರದ್ದು

ಲಂಡನ್‌ನಿಂದ ತುರ್ತಾಗಿ ವಾಪಸಾದ ಗೌತಮ್‌ ಗಂಭೀರ್‌: ವಿವಿಎಸ್​ ಲಕ್ಷ್ಮಣ್‌ಗೆ ಹೊಸ ಜವಾಬ್ದಾರಿ ನೀಡಲು ಚಿಂತನೆ

ಎಬಿಡಿ ವಿಲಿಯರ್ಸ್ ಗೆ ಒಂದೇ ತಿಂಗಳಲ್ಲಿ ಡಬಲ್ ಧಮಾಕ

ಮುಂದಿನ ಸುದ್ದಿ
Show comments