Webdunia - Bharat's app for daily news and videos

Install App

ನೀರಜ್ ಚೋಪ್ರಾ ಬೆಳ್ಳಿ ಗೆದ್ದರೂ ಹೆಚ್ಚು ಹಣ ಕಂಚು ಗೆದ್ದ ಮನು ಭಾಕರ್ ಗೆ: ಇದಕ್ಕೂ ಇದೆ ಕಾರಣ

Krishnaveni K
ಸೋಮವಾರ, 19 ಆಗಸ್ಟ್ 2024 (14:55 IST)
ಹರ್ಯಾಣ: ಈ ಬಾರಿ ಪ್ಯಾರಿಸ್ ಒಲಿಂಪಿಕ್ಸ್ ನಲ್ಲಿ ಜ್ಯಾವೆಲಿನ್ ಥ್ರೋ ವಿಭಾಗದಲ್ಲಿ ನೀರಜ್ ಚೋಪ್ರಾ ಬೆಳ್ಳಿ ಪದಕ ಗೆದ್ದಿದ್ದರೆ ಶೂಟಿಂಗ್ ವಿಭಾಗದಲ್ಲಿ ಮನು ಭಾಕರ್ ಕಂಚಿನ ಪದಕ ಗೆದ್ದಿದ್ದರು. ಆದರೂ ಹರ್ಯಾಣ ಸರ್ಕಾರ ಮನು ಭಾಕರ್ ಗೆ ಹೆಚ್ಚು ಬಹುಮಾನ ಮೊತ್ತ ನಿಡಿದೆ. ಇದಕ್ಕೆ ಕಾರಣವೂ ಇದೆ.

ಸಾಮಾನ್ಯವಾಗಿ ಚಿನ್ನ, ಬೆಳ್ಳಿ ಪದಕ ಗೆದ್ದವರಿಗೆ ಕಂಚಿನ ಪದಕ ಗೆದ್ದವರಿಗಿಂತ ಹೆಚ್ಚು ಬಹುಮಾನ ಮೊತ್ತ ನೀಡಲಾಗುತ್ತದೆ. ಆದರೆ ಈ ಬಾರಿ ಪ್ಯಾರಿಸ್ ಒಲಿಂಪಿಕ್ಸ್ ನಲ್ಲಿ ಕಂಚಿನ ಪದಕ ಗೆದ್ದಿದ್ದ ಮನು ಭಾಕರ್ ಗೆ ಹರ್ಯಾಣ ಸರ್ಕಾರ 5 ಕೋಟಿ ರೂ. ಬಹುಮಾನ ಘೋಷಣೆ ಮಾಡಿದೆ.

ಆದರೆ ಕಳೆದ ಬಾರಿ ಚಿನ್ನ ಗೆದ್ದು ಈ ಬಾರಿ ಬೆಳ್ಳಿ ಪದಕಕ್ಕೆ ಮುತ್ತಿಕ್ಕಿದ್ದ ಜ್ಯಾವೆಲಿನ್ ಥ್ರೋ ಪಟು ನೀರಜ್ ಚೋಪ್ರಾಗೆ ಕೇವಲ 4 ಕೋಟಿ ರೂ. ಬಹುಮಾನ ಮೊತ್ತ ಘೋಷಣೆ ಮಾಡಲಾಗಿದೆ. ಕಂಚಿನ ಪದಕ ಗೆದ್ದರೂ ಮನುಗೆ ಹೆಚ್ಚು ಬೆಳ್ಳಿ ಪದಕ ಗೆದ್ದರೂ ನೀರಜ್ ಗೆ ಕಡಿಮೆ ಬಹುಮಾನ ಮೊತ್ತ ನೀಡಲೂ ಕಾರಣವಿದೆ.

ಮನು ಭಾಕರ್ ಈ ಬಾರಿ ಒಂದು ವೈಯಕ್ತಿಕ ವಿಭಾಗ ಮತ್ತು ಇನ್ನೊಂದು ಮಿಕ್ಸೆಡ್ ಡಬಲ್ಸ್ ಈವೆಂಟ್ ನಲ್ಲಿ ಸೇರಿದಂತೆ ಎರಡು ಕಂಚಿನ ಪದಕ ಗೆದ್ದುಕೊಂಡಿದ್ದರು. ಕಂಚಿನ ಪದಕವಾದರೂ ಎರಡು ಪದಕ ಗೆದ್ದಿರುವುದಕ್ಕೆ ಮನು ಭಾಕರ್ ಗೆ ನೀರಜ್ ಗಿಂತ 1 ಕೋಟಿ ರೂ. ಹೆಚ್ಚು ಬಹುಮಾನ ಮೊತ್ತ ನೀಡಲಾಗಿದೆ.
 

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಡಬ್ಲ್ಯುಟಿಸಿ ಫೈನಲ್ ಗೆಲ್ಲಲು ದ ಆಫ್ರಿಕಾಗೆ ಕಠಿಣ ಗುರಿ ನೀಡಿದ ಆಸ್ಟ್ರೇಲಿಯಾ

Gautam Gambhir: ಗೌತಮ್ ಗಂಭೀರ್ ತಾಯಿಗೆ ಗಂಭೀರ: ಭಾರತಕ್ಕೆ ಮರಳಿದ ಟೀಂ ಇಂಡಿಯಾ ಕೋಚ್

Shubman Gill: ಸಚಿನ್, ಕೊಹ್ಲಿಗೇ ಇಲ್ಲದ ಅಹಂ ಶುಬ್ಮನ್ ಗಿಲ್ ತಲೆಗೆ ಹತ್ತಿದ್ಯಾ: ನೆಟ್ಟಿಗರ ಆಕ್ರೋಶ

ಜೂನ್ 14 ಆರ್ ಸಿಬಿ ಪಾಲಿಗೆ ಮಹತ್ವದ ದಿನ: ಅಭಿಮಾನಿಗಳ ಆತಂಕ ನಿಜ ಮಾಡುತ್ತಾ ಬಿಸಿಸಿಐ

KL Rahul: ಇಂಗ್ಲೆಂಡ್ ನಲ್ಲಿ ಕೆಎಲ್ ರಾಹುಲ್ ಗೆ ಜೀವದ ಗೆಳೆಯನಿಂದಲೇ ಕುತ್ತು

ಮುಂದಿನ ಸುದ್ದಿ
Show comments