Webdunia - Bharat's app for daily news and videos

Install App

ಕ್ರಿಕೆಟಿಗರಿಗೆ ಸಿಕ್ಕ ಸ್ವಾಗತವಿಲ್ಲ, ಒಲಿಂಪಿಕ್ಸ್ ಪದಕ ವಿಜೇತ ಹಾಕಿ ತಂಡಕ್ಕೆ ಹೀಗೇಕೆ ಮಾಡಿದಿರಿ

Krishnaveni K
ಶನಿವಾರ, 10 ಆಗಸ್ಟ್ 2024 (17:29 IST)
ನವದೆಹಲಿ: ಇತ್ತೀಚೆಗೆ ಪ್ಯಾರಿಸ್ ಒಲಿಂಪಿಕ್ಸ್ ಪುರುಷರ ಹಾಕಿ ವಿಭಾಗದಲ್ಲಿ ಕಂಚಿನ ಪದಕ ಗೆದ್ದ ಭಾರತ ತಂಡದ ಕೆಲವು ಆಟಗಾರರು ತವರಿಗೆ ಮರಳಿದ್ದಾರೆ. ಆದರೆ ಅವರಿಗೆ ಕ್ರಿಕೆಟಿಗರಿಗೆ ಸಿಕ್ಕ ಸ್ವಾಗತವಿಲ್ಲ ಎಂದು ಆಕ್ರೋಶ ವ್ಯಕ್ತವಾಗಿದೆ.

ಟಿ20 ವಿಶ್ವಕಪ್ ಗೆದ್ದ ರೋಹಿತ್ ಶರ್ಮಾ ಬಳಗ ದೆಹಲಿ ವಿಮಾನ ನಿಲ್ದಾಣಕ್ಕೆ ಬಂದಿಳಿದಾಗ ಭಾರೀ ಸ್ವಾಗತ ದೊರೆಯಿತು. ಅವರನ್ನು ವಿಶೇಷ ಬಸ್ ನಲ್ಲಿ ಹೋಟೆಲ್ ರೂಂಗೆ ಕರದೊಯ್ದು ಬಳಿಕ ಪ್ರಧಾನಿ ನಿವಾಸಕ್ಕೆ ಕರೆದೊಯ್ಯಲು ಬಿಸಿಸಿಐ ಎಲ್ಲಾ ವ್ಯವಸ್ಥೆ ಮಾಡಿತ್ತು. ಸಾಕಷ್ಟು ಜನರೂ ಅವರನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ್ದರು.

ಆದರೆ ಒಲಿಂಪಿಕ್ಸ್ ನಲ್ಲಿ ಪದಕ ಗೆದ್ದು ಬಂದ ಭಾರತೀಯ ಹಾಕಿ ತಂಡದ ಆಟಗಾರರಿಗೆ ಅಂತಹ ಸ್ವಾಗತ ದೊರೆತಿಲ್ಲ ಎಂದು ಆಕ್ರೋಶ ಕೇಳಿಬಂದಿದೆ. ಕೆಲವು ಮಂದಿ ಏರ್ ಪೋರ್ಟ್ ನಲ್ಲಿದ್ದು ಹಾಕಿ ಆಟಗಾರರನ್ನು ಸ್ವಾಗತಿಸಿದ್ದಾರೆ. ಬಳಿಕ ಅವರನ್ನು ಸಾಮಾನ್ಯ ಬಸ್ ನಲ್ಲಿ ಕರೆದೊಯ್ಯಲಾಗಿದೆ.

ಇದನ್ನು ಹೊರತುಪಡಿಸಿ ದೊಡ್ಡ ಸಂಭ್ರಮವೇನೂ ಕಂಡುಬಂದಿಲ್ಲ ಎಂದು ಕೆಲವರು ಸೋಷಿಯಲ್ ಮೀಡಿಯಾದಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಗೋಲ್ ಕೀಪರ್ ಶ್ರೀಜೇಶ್ ಸೇರಿದಂತೆ ಕೆಲವು ಆಟಗಾರರು ನಾಳೆಯವರೆಗೆ ಪ್ಯಾರಿಸ್ ನಲ್ಲೇ ಇರಲಿದ್ದು, ಸಮಾರೋಪ ಸಮಾರಂಭದಲ್ಲಿ ಭಾಗಿಯಾಗಿ ತವರಿಗೆ ಮರಳಲಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

RCB vs PBKS:ಆರ್‌ಸಿಬಿ ಆಟಗಾರರ ಬ್ಯಾಟಿಂಗ್‌ ಬಗ್ಗೆ ವೀರೇಂದ್ರ ಸೆಹ್ವಾಗ್ ಟೀಕೆ

IPL 2025 RCB: ಮೊದಲು ಕಪ್ ಗೆಲ್ತಾ ಇರಲಿಲ್ಲ, ಈಗ ಚಿನ್ನಸ್ವಾಮಿಯಲ್ಲೇ ಗೆಲ್ತಾ ಇಲ್ಲ

IPL 2025: ಎಲ್ಲಾ ಚೆನ್ನಾಗಿತ್ತು, ಕೊಹ್ಲಿ ಒಂದು ಸಲಹೆ ಕೊಟ್ಟಿದ್ದೇ ಕೊಟ್ಟಿದ್ದು, ಎಡವಟ್ಟಾಯ್ತು: ವಿಡಿಯೋ

IPL 2025: ಚಿನ್ನಸ್ವಾಮಿಯಲ್ಲಿ ಕಿಂಗ್ಸ್‌ ದರ್ಬಾರ್‌: ತವರಿನಲ್ಲಿ ಆರ್‌ಸಿಬಿಗೆ ಹ್ಯಾಟ್ರಿಕ್‌ ಸೋಲಿನ ಮುಖಭಂಗ

ಬಿಡುವು ನೀಡಿದ ಮಳೆರಾಯ, RCB vs PBKS ಪಂದ್ಯಾಟ ಶುರು

ಮುಂದಿನ ಸುದ್ದಿ
Show comments