ವಿನೇಶ್ ಫೋಗಟ್ ರನ್ನು ಬೇಕೆಂದೇ ಫೈನಲ್ ಗೇರದಂತೆ ಮಾಡಲಾಯಿತಾ: ಶುರುವಾಯ್ತು ರಾಜಕೀಯದ ಗುಮಾನಿ

Krishnaveni K
ಗುರುವಾರ, 8 ಆಗಸ್ಟ್ 2024 (11:05 IST)
ಪ್ಯಾರಿಸ್: ಪ್ಯಾರಿಸ್ ಒಲಿಂಪಿಕ್ಸ್ ನಲ್ಲಿ 50 ಕೆ.ಜಿ. ವಿಭಾಗದ ಕುಸ್ತಿ ಸ್ಪರ್ಧೆಯಲ್ಲಿ ಫೈನಲ್ ಗೇರಿ ಇತಿಹಾಸ ನಿರ್ಮಿಸಿದ್ದ ವಿನೇಶ್ ಫೋಗಟ್ ರನ್ನು ಬೇಕೆಂದೇ ಅನರ್ಹಗೊಳಿಸಲಾಯಿತೇ? ಹೀಗೊಂದು ಚರ್ಚೆ ಸೋಷಿಯಲ್ ಮೀಡಿಯಾದಲ್ಲಿ ಶುರುವಾಗಿದೆ.
 

ವಿನೇಶ್ ಫೋಗಟ್ ಈ ಹಿಂದೆ ಕುಸ್ತಿ ಫೆಡರೇಶನ್ ಅಧ್ಯಕ್ಷರಾಗಿದ್ದ ಬ್ರಿಜ್ ಭೂಷಣ್ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಮಾಡಿ ಹೋರಾಟ ಮಾಡಿದ ಕುಸ್ತಿಪಟುಗಳಲ್ಲಿ ಒಬ್ಬರಾಗಿದ್ದರು. ಈ ಬಾರಿ ಒಲಿಂಪಿಕ್ಸ್ ನಲ್ಲಿ ಪದಕ ಗೆದ್ದು ಬ್ರಿಜ್ ಭೂಷಣ್ ಗೆ ತೋರಿಸಬೇಕು ಎಂದು ಅವರಿಗೆ ಜಿದ್ದು ಇತ್ತು.

ವಿನೇಶ್ ಫೈನಲ್ ಗೇರಿದಾಗ ಹಲವರು ಕೇಂದ್ರ ಸರ್ಕಾರದ ವಿರುದ್ಧ, ಬ್ರಿಜ್ ಭೂಷಣ್ ವಿರುದ್ಧ ಕುಹುಕವಾಡಿದ್ದರು. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯಂತೂ ವಿನೇಶ್ ವಿರುದ್ಧ ಲಾಠಿ ಪ್ರಯೋಗ ಮಾಡಿದ ಬಿಜೆಪಿ ನಾಯಕರಿಗೆ ಈಗ ಅವರಿಗೆ ಅಭಿನಂದನೆ ಸಲ್ಲಿಸಲು ಸಾಧ್ಯವಾಗುತ್ತಿದೆಯೇ ಎಂದು ಕಾಲೆಳೆದಿದ್ದರು.

ಇದರ ನಡುವೆ ವಿನೇಶ್ ಫೈನಲ್ ಗೆದ್ದ ಬಳಿಕ ಮಾತನಾಡುವುದಾಗಿ ಮೊದಲೇ ಹೇಳಿದ್ದರು. ಅವರು ಫೈನಲ್ ಗೆದ್ದ ಬಳಿಕ ಏನು ಮಾತನಾಡಬಹುದು ಎಂಬುದು ಎಲ್ಲರಿಗೂ ಅಂದಾಜಿತ್ತು. ಇದರ ಬೆನ್ನಲ್ಲೇ ಅವರು ಕೇವಲ 100 ಗ್ರಾಂ ತೂಕ ಹೆಚ್ಚಾಯಿತು ಎಂಬ ಕಾರಣಕ್ಕೆ ಫೈನಲ್ ನಿಂದ ಅನರ್ಹಗೊಂಡಿರುವುದರ ಹಿಂದೆ ಕಾಣದ ಕೈಗಳ ಕೈವಾಡವಿರಬಹುದು ಎಂದು ಕೆಲವರು ಸೋಷಿಯಲ್ ಮೀಡಿಯಾಗಳಲ್ಲಿ ಅಭಿಪ್ರಾಯಪಡುತ್ತಿದ್ದಾರೆ. ಅದೇನೇ ಇದ್ದರೂ ಭಾರತಕ್ಕೆ ಅರ್ಹವಾಗಿದ್ದ ಒಂದು ಪದಕ ನಷ್ಟವಾಗಿದ್ದು ಕ್ರೀಡಾಭಿಮಾನಿಗಳಿಗೆ ಬೇಸರ ತಂದಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಭಾರತ, ದಕ್ಷಿಣ ಆಫ್ರಿಕಾ ಟೆಸ್ಟ್ ಸರಣಿ ವೇಳಾಪಟ್ಟಿ, ಸಮಯ ವಿವರ ಇಲ್ಲಿದೆ

ಮೊಹಮ್ಮದ್ ಶಮಿ ಫಿಟ್ನೆಸ್ ಬಗ್ಗೆ ಹೊರಗೊಂದು ಒಳಗೊಂದು ಹೇಳುತ್ತಿದ್ದಾರಾ

ಆರ್ ಸಿಬಿಗೆ ಹೊಸ ಮಾಲಿಕರು ಬಂದರೆ ಹೆಸರೂ ಬದಲಾಗುತ್ತಾ

ರವೀಂದ್ರ ಜಡೇಜಾರನ್ನು ಸೇಲ್ ಮಾಡಲು ಹೊರಟ ಸಿಎಸ್ ಕೆ: ಸ್ವಲ್ಪವಾದ್ರೂ ಕೃತಜ್ಞತೆ ಬೇಡ್ವಾ ಫ್ಯಾನ್ಸ್ ಗರಂ

ಗಾಯಗೊಂಡು ತಂಡದಿಂದ ಹೊರಬಿದ್ದರೂ ಪ್ರತೀಕಾ ರಾವಲ್‌ಗೆ ಚಿನ್ನ ಪದಕ ಸಿಗಲು ಇವರ ಕೃಪೆಯೇ ಕಾರಣ

ಮುಂದಿನ ಸುದ್ದಿ