Webdunia - Bharat's app for daily news and videos

Install App

ವಿನೇಶ್ ಫೋಗಟ್ ರನ್ನು ಬೇಕೆಂದೇ ಫೈನಲ್ ಗೇರದಂತೆ ಮಾಡಲಾಯಿತಾ: ಶುರುವಾಯ್ತು ರಾಜಕೀಯದ ಗುಮಾನಿ

Krishnaveni K
ಗುರುವಾರ, 8 ಆಗಸ್ಟ್ 2024 (11:05 IST)
ಪ್ಯಾರಿಸ್: ಪ್ಯಾರಿಸ್ ಒಲಿಂಪಿಕ್ಸ್ ನಲ್ಲಿ 50 ಕೆ.ಜಿ. ವಿಭಾಗದ ಕುಸ್ತಿ ಸ್ಪರ್ಧೆಯಲ್ಲಿ ಫೈನಲ್ ಗೇರಿ ಇತಿಹಾಸ ನಿರ್ಮಿಸಿದ್ದ ವಿನೇಶ್ ಫೋಗಟ್ ರನ್ನು ಬೇಕೆಂದೇ ಅನರ್ಹಗೊಳಿಸಲಾಯಿತೇ? ಹೀಗೊಂದು ಚರ್ಚೆ ಸೋಷಿಯಲ್ ಮೀಡಿಯಾದಲ್ಲಿ ಶುರುವಾಗಿದೆ.
 

ವಿನೇಶ್ ಫೋಗಟ್ ಈ ಹಿಂದೆ ಕುಸ್ತಿ ಫೆಡರೇಶನ್ ಅಧ್ಯಕ್ಷರಾಗಿದ್ದ ಬ್ರಿಜ್ ಭೂಷಣ್ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಮಾಡಿ ಹೋರಾಟ ಮಾಡಿದ ಕುಸ್ತಿಪಟುಗಳಲ್ಲಿ ಒಬ್ಬರಾಗಿದ್ದರು. ಈ ಬಾರಿ ಒಲಿಂಪಿಕ್ಸ್ ನಲ್ಲಿ ಪದಕ ಗೆದ್ದು ಬ್ರಿಜ್ ಭೂಷಣ್ ಗೆ ತೋರಿಸಬೇಕು ಎಂದು ಅವರಿಗೆ ಜಿದ್ದು ಇತ್ತು.

ವಿನೇಶ್ ಫೈನಲ್ ಗೇರಿದಾಗ ಹಲವರು ಕೇಂದ್ರ ಸರ್ಕಾರದ ವಿರುದ್ಧ, ಬ್ರಿಜ್ ಭೂಷಣ್ ವಿರುದ್ಧ ಕುಹುಕವಾಡಿದ್ದರು. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯಂತೂ ವಿನೇಶ್ ವಿರುದ್ಧ ಲಾಠಿ ಪ್ರಯೋಗ ಮಾಡಿದ ಬಿಜೆಪಿ ನಾಯಕರಿಗೆ ಈಗ ಅವರಿಗೆ ಅಭಿನಂದನೆ ಸಲ್ಲಿಸಲು ಸಾಧ್ಯವಾಗುತ್ತಿದೆಯೇ ಎಂದು ಕಾಲೆಳೆದಿದ್ದರು.

ಇದರ ನಡುವೆ ವಿನೇಶ್ ಫೈನಲ್ ಗೆದ್ದ ಬಳಿಕ ಮಾತನಾಡುವುದಾಗಿ ಮೊದಲೇ ಹೇಳಿದ್ದರು. ಅವರು ಫೈನಲ್ ಗೆದ್ದ ಬಳಿಕ ಏನು ಮಾತನಾಡಬಹುದು ಎಂಬುದು ಎಲ್ಲರಿಗೂ ಅಂದಾಜಿತ್ತು. ಇದರ ಬೆನ್ನಲ್ಲೇ ಅವರು ಕೇವಲ 100 ಗ್ರಾಂ ತೂಕ ಹೆಚ್ಚಾಯಿತು ಎಂಬ ಕಾರಣಕ್ಕೆ ಫೈನಲ್ ನಿಂದ ಅನರ್ಹಗೊಂಡಿರುವುದರ ಹಿಂದೆ ಕಾಣದ ಕೈಗಳ ಕೈವಾಡವಿರಬಹುದು ಎಂದು ಕೆಲವರು ಸೋಷಿಯಲ್ ಮೀಡಿಯಾಗಳಲ್ಲಿ ಅಭಿಪ್ರಾಯಪಡುತ್ತಿದ್ದಾರೆ. ಅದೇನೇ ಇದ್ದರೂ ಭಾರತಕ್ಕೆ ಅರ್ಹವಾಗಿದ್ದ ಒಂದು ಪದಕ ನಷ್ಟವಾಗಿದ್ದು ಕ್ರೀಡಾಭಿಮಾನಿಗಳಿಗೆ ಬೇಸರ ತಂದಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಕ್ರಿಕೆಟಿಗ ರಿಂಕು ಸಿಂಗ್‌ ನಿಶ್ಚಿತಾರ್ಥ: ಕೈ ಹಿಡಿಯಲಿರುವ ಯುವತಿ ಹಿನ್ನೆಲೆ ಕೇಳಿದ್ರೆ ಶಾಕ್ ಆಗ್ತೀರಾ

French Open: ಯಾನಿಕ್‌ ಸಿನ್ನರ್‌- ಕಾರ್ಲೋಸ್‌ ಅಲ್ಕರಾಜ್‌ ಪೈಪೋಟಿಯಲ್ಲಿ ಯಾರಿಗೆ ಒಲಿಯಲಿದೆ ಫ್ರೆಂಚ್‌ ಓಪನ್‌ ಕಿರೀಟ

IPL 2025: ಆರ್‌ಸಿಬಿಗೆ ಐಪಿಎಲ್‌ ಕಿರೀಟ: ಇಡೀ ಗ್ರಾಮಕ್ಕೆ ಮಾಂಸದೂಟ ಹಾಕಿ ಸಂಭ್ರಮಿಸಿದ ಯುವಕರು

Norway Chess: ಮ್ಯಾಗ್ನಸ್ ಕಾರ್ಲ್‌ಸನ್ ಏಳನೇ ಬಾರಿ ಕಿರೀಟ: ಪ್ರಶಸ್ತಿ ರೇಸ್‌ನಲ್ಲಿದ್ದ ಗುಕೇಶ್‌ಗೆ ನಿರಾಸೆ

Chinnaswamy Stampede: ಕಾಲ್ತುಳಿತಕ್ಕೆ ಮತ್ತಷ್ಟು ವಿಕೆಟ್‌ ಪತನ: ಕೆಎಸ್‌ಸಿಎ ಪದಾಧಿಕಾರಿಗಳು ಗುಡ್‌ಬೈ

ಮುಂದಿನ ಸುದ್ದಿ