Select Your Language

Notifications

webdunia
webdunia
webdunia
webdunia

Video: ಕೆಸರನ್ನು ಲೆಕ್ಕಿಸದೆ ಬರಿಗಾಲದಲ್ಲಿ ವೃಂದಾವನಕ್ಕೆ ಭೇಟಿ ನೀಡಿದ ವಿರಾಟ್‌- ಅನುಷ್ಕಾ ದಂಪತಿ

Cricketer Virat Kohli
Photo Courtesy X
ಮುಂಬೈ: ಸ್ಟಾರ್‌ ಕ್ರಿಕೆಟಿಗ ವಿರಾಟ್ ಕೊಹ್ಲಿ ಮತ್ತು ನಟಿ ಅನುಷ್ಕಾ ಶರ್ಮಾ ದಂಪತಿ ಉತ್ತರ ಪ್ರದೇಶದ ವೃಂದಾವನಕ್ಕೆ ಇಂದು ಭೇಟಿ ನೀಡಿದ್ದಾರೆ.  

ವೃಂದಾವನದಲ್ಲಿರುವ ರಾಧಾ ಕೇಲಿ ಕುಂಜ್ ಆಶ್ರಮಕ್ಕೆ ತೆರಳಿದ ಈ ಜೋಡಿ, ಪ್ರಸಿದ್ಧ ಆಧ್ಯಾತ್ಮಿಕ ಗುರು ಪ್ರೇಮಾನಂದ್ ಜಿ ಮಹಾರಾಜ್ ಅವರ ಆಶೀರ್ವಾದ ಪಡೆದರು.  ಗುರು ಪೂರ್ಣಿಮಾ ಮಹೋತ್ಸವದ ಪ್ರಯುಕ್ತ ಅವರು ಕಾಲಿಗೆ ಚಪ್ಪಲಿ ಧರಿಸದೆ, ಮಾಸ್ಕ್ ಧರಿಸಿ ಸರಳವಾಗಿ ಆಶ್ರಮಕ್ಕೆ ಭೇಟಿ ನೀಡಿದ್ದರು. 

ಇತ್ತೀಚಿನ ವರ್ಷಗಳಲ್ಲಿ ಆಗಾಗ್ಗೆ ಆಧ್ಯಾತ್ಮಿಕ ಪ್ರಯಾಣ ಕೈಗೊಳ್ಳುತ್ತಿರುವ ವಿರುಷ್ಕಾ, ಮತ್ತೊಮ್ಮೆ ಆಶ್ರಮ ತಲುಪಿ ಅನೇಕರಿಗೆ ಸ್ಫೂರ್ತಿಯಾಗಿದ್ದಾರೆ. ಇಂದು ವೈರಲ್​ ಆಗಿರುವ ಫೋಟೋ, ವಿಡಿಯೋಗಳಲ್ಲಿ ದಂಪತಿ ಬಹಳ ಸರಳವಾಗಿ ಕಾಣಿಸಿಕೊಂಡಿದ್ದಾರೆ. 

ಫೇಸ್​ ಮಾಸ್ಕ್​​​ ಧರಿಸಿದ್ದ ಜೋಡಿ, ಜನಸಾಮಾನ್ಯರ ನಡುವೆ ಸಾಮಾನ್ಯರಂತೆ ಸಾಗುತ್ತಿರುವ ವಿಡಿಯೋಗಳು ನೆಟ್ಟಿಗರ ಗಮನ ಸೆಳೆದಿವೆ. ಸೋಷಿಯಲ್​ ಮೀಡಿಯಾದಲ್ಲಿ ದಂಪತಿ ಮೇಲೆ ಅಭಿಮಾನಿಗಳು ಪ್ರೀತಿಯ ಧಾರೆಯೆರೆದಿದ್ದಾರೆ. ಜೊತೆಗೆ ಸದ್ಯ ದೇಶದಲ್ಲಿ ನಡೆಯುತ್ತಿರುವ ಪ್ರತಿಭಟನೆಗೆ ಸಂಬಂಧಿಸಿದಂತೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲವೆಂದೂ ಕೆಲವರು ತಮ್ಮ ಅಸಮಾಧಾನ ಹೊರಹಾಕಿದ್ದಾರೆ. 

Share this Story:

Follow Webdunia kannada

ಮುಂದಿನ ಸುದ್ದಿ

ಟೀಂ ಇಂಡಿಯಾ ಮುಂದಿನ ಸರಣಿಯ ವೇಳಾಪಟ್ಟಿ ಇಲ್ಲಿದೆ