Manu Bhaker: ಎರಡು ಪದಕ ಗೆದ್ದು ದೇಶಕ್ಕೆ ಹೆಮ್ಮೆ ತಂದ ಶೂಟರ್ ಮನು ಭಾಕರ್ ಅಮ್ಮನ ಮುಂದಿಟ್ಟ ಆ ಒಂದು ಬೇಡಿಕೆಯೇನು

Krishnaveni K
ಶನಿವಾರ, 3 ಆಗಸ್ಟ್ 2024 (14:00 IST)
ನವದೆಹಲಿ: ಈ ಬಾರಿ ಒಲಿಂಪಿಕ್ಸ್ ನಲ್ಲಿ ಭಾರತಕ್ಕೆ ಎರಡು ಪದಕ ಗೆದ್ದು ಹೆಮ್ಮೆ ತಂದ ಶೂಟರ್ ಮನು ಭಾಕರ್ ಈಗ ಮೂರನೇ ಪದಕವನ್ನು ಕೂದಲೆಳೆಯಲ್ಲಿ ತಪ್ಪಿಸಿಕೊಂಡಿದ್ದಾರೆ. ಹಾಗಿದ್ದರೂ ಎರಡು ಪದಕಗಳನ್ನು ಒಂದೇ ಒಲಿಂಪಿಕ್ಸ್ ನಲ್ಲಿ ಗೆದ್ದು ಇತಿಹಾಸ ನಿರ್ಮಿಸಿದ್ದಾರೆ.

ಇಂದು ಮನು ಭಾಕರ್ 25 ಮೀ ಪಿಸ್ತೂಲ್ ವಿಭಾಗದಲ್ಲಿ ಸ್ಪರ್ಧಿಸಿ ನಾಲ್ಕನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡರು. ಈ ಪಂದ್ಯ ಆರಂಭಕ್ಕೂ ಮುನ್ನವೇ ಅವರು ದೇಶದ ಜನತೆಗೆ ಒಂದು ಮಾತು ಹೇಳಿದ್ದರು. ನನಗೆ ಈ ಪದಕ ಗೆಲ್ಲಲು ಸಾಧ್ಯವಾಗುತ್ತದೋ ಇಲ್ಲವೋ ಗೊತ್ತಿಲ್ಲ. ನಾನು ನನ್ನ ಪ್ರಯತ್ನ ಮಾಡುತ್ತಿದ್ದೇನಷ್ಟೇ. ಒಂದು ವೇಳೆ ಪದಕ ಗೆಲ್ಲಲು ಸಾಧ್ಯವಾಗದೇ ಇದ್ದರೂ ನನ್ನನ್ನು ಮೊದಲಿನಂತೇ ಪ್ರೀತಿಸಿ ಎಂದು ಮನವಿ ಮಾಡಿದ್ದರು.

ಮನು ಭಾಕರ್ 10 ಮೀ. ಪಿಸ್ತೂಲ್ ವಿಭಾಗದಲ್ಲಿ ಪರಿಣತರು. 25 ಮೀ. ವಿಭಾಗ ಅವರಿಗೆ ಅಷ್ಟೊಂದು ಪರಿಚಿತವಲ್ಲ. ಹಾಗಿದ್ದರೂ ಸ್ಪರ್ಧೆ ಮಾಡಿ ಫೈನಲ್ ಸುತ್ತಿಗೆ ಅರ್ಹತೆ ಪಡೆದು ಕೊನೆಗೆ ನಾಲ್ಕನೇ ಸ್ಥಾನ ಪಡೆಯುವುದು ಸುಲಭದ ಮಾತಲ್ಲ. ಈ ಕಾರಣಕ್ಕೆ ಅವರನ್ನು ದೇಶವೇ ಅಭಿನಂದಿಸುತ್ತಿದೆ.

ಈ ಪಂದ್ಯದ ಬಳಿಕ ಮಾತನಾಡಿದ ಅವರನ್ನು ಭಾರತಕ್ಕೆ ಮರಳಿದ ತಕ್ಷಣ ನೀವು ಏನು ಮಾಡಬೇಕೆಂದಿದ್ದೀರಿ ಎಂದು ಕೇಳಲಾಯಿತು. ಇದಕ್ಕೆ ಉತ್ತರಿಸಿದ ಮನು ‘ಮೊದಲು ಚೆನ್ನಾಗಿ ಊಟ ಮಾಡಬೇಕು. ಇಷ್ಟು ದಿನ ಕಠಿಣ ತರಬೇತಿ ನಡುವೆ ಸರಿಯಾಗಿ ಊಟ-ತಿಂಡಿಯ ಕಡೆಗೂ ಗಮನ ಕೊಡಲು ಸಾಧ್ಯವಾಗಿರಲಿಲ್ಲ. ಅದರಲ್ಲೂ ಅಮ್ಮನ ಆಲೂ ಪರಾಠ ಮಿಸ್ ಮಾಡಿಕೊಳ್ಳುತ್ತಿದ್ದೇನೆ. ಮನೆಗೆ ಹೋದ ತಕ್ಷಣ ಅಮ್ಮನಿಗೆ ಆಲೂ ಪರಾಠ ಮಾಡಿಕೊಡಲು ಹೇಳುವೆ’ ಎಂದು ಬೇಡಿಕೆಯಿಟ್ಟಿದ್ದಾರೆ.

ಇತ್ತ ಮನು ಭಾಕರ್ ತಾಯಿ ಕೂಡಾ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದು ‘ಆಕೆ ಯಾವಾಗ ಬರುತ್ತಾಳೆ ಗೊತ್ತಿಲ್ಲ. ಬಂದ ತಕ್ಷಣ ಬಿಸಿ ಬಿಸಿಯಾಗಿ ಆಲೂ ಪರಾಠ ಮಾಡಿಕೊಡುತ್ತೇನೆ. ಅದು ತಣ್ಣಗಾದರೆ ಚೆನ್ನಾಗಿರಲ್ಲ. ಮಗಳನ್ನು ಸ್ವಾಗತಿಸಲು ಎಲ್ಲಾ ತಯಾರಿ ಮಾಡಿಕೊಂಡಿದ್ದೇವೆ. ಅದು ಆಕೆಗೊಂದು ಸರ್ಪೈಸ್ ಆಗಿರುತ್ತದೆ’ ಎಂದು ಹೇಳಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಟೀಂ ಇಂಡಿಯಾ ಟೆಸ್ಟ್ ತಂಡ ಹಳ್ಳ ಹಿಡಿಸಿದ ಗೌತಮ್ ಗಂಭೀರ್ ಟೆಸ್ಟ್ ದಾಖಲೆ ಹೇಗಿತ್ತು ನೋಡಿ

IND vs SA: ಟೀಂ ಇಂಡಿಯಾ, ದಕ್ಷಿಣ ಆಫ್ರಿಕಾ ಎರಡನೇ ಟೆಸ್ಟ್ ಯಾವಾಗ, ಎಲ್ಲಿ ಇಲ್ಲಿದೆ ವಿವರ

ಕೋಚ್ ಆಗಿ ಬಂದಾಗ ರಾಹುಲ್ ದ್ರಾವಿಡ್ ಹೇಳಿದ್ದ ಈ ಮಾತು ಗಂಭೀರ್ ಗೂ ಪಾಠವಾಗಬೇಕು

ಸಂಜು ಸ್ಯಾಮ್ಸನ್‌ ಅವರನ್ನು ಬಿಟ್ಟುಕೊಟ್ಟ ಬೆನ್ನಲ್ಲೇ ರಾಜಸ್ಥಾನ ರಾಯಲ್ಸ್‌ ಮತ್ತೊಂದು ಕಠಿಣ ನಿರ್ಧಾರ

ಕಾಲು ಮುರಿದಿದ್ರೂ ಆಡಿದ್ದ ರಿಷಭ್ ಪಂತ್ ನೋಡಿ ಕಲಿಯಿರಿ: ಪಿಚ್ ನೋಡಿ ಡವ್ ಮಾಡಿದ್ರಾ ಶುಭಮನ್ ಗಿಲ್

ಮುಂದಿನ ಸುದ್ದಿ
Show comments