Webdunia - Bharat's app for daily news and videos

Install App

ಮಲೆನಾಡಿಗೂ ವಿಸ್ತರಿಸಿದ ಕರಾವಳಿ ಕಂಬಳ: ಘಟ್ಟ ಏರಲು ಸಜ್ಜಾದ ಓಟದ ಕೋಣಗಳು

Sampriya
ಭಾನುವಾರ, 11 ಆಗಸ್ಟ್ 2024 (10:33 IST)
Photo Courtesy X
ಮೂಡುಬಿದಿರೆ: ಕರಾವಳಿಗೆ ಸೀಮಿತವಾಗಿದ್ದ ಜಾನಪದ ಕ್ರೀಡೆ ಕಂಬಳ ಕಳೆದ ವರ್ಷ ಬೆಂಗಳೂರಿಗೂ ವಿಸ್ತರಿಸಿ ದೇಶದಾದ್ಯಂತ ಸಂಚಲನ ಮೂಡಿಸಿತ್ತು. ಈ ವರ್ಷ ಮಲೆನಾಡಿಗೆ ಕಂಬಳ ವಿಸ್ತರಣೆಯಾಗಿದ್ದು, ಹೊಸ ಬೆಳವಣಿಗೆಯಾಗಿದೆ.

ಬೆಂಗಳೂರಿನಲ್ಲಿ ಅ.26ರಂದು ಕಂಬಳ ನಡೆಯುವ ಮೂಲಕ ಈ ಬಾರಿಯ ಕಂಬಳ ಋತು ಆರಂಭವಾಗಲಿದೆ. ಬಳಿಕ ಕರಾವಳಿಯಾದ್ಯಂತ ಕಂಬಳಗಳು ನಡೆಯಲಿವೆ. ಎ.19ರಂದು ಶಿವಮೊಗ್ಗದಲ್ಲಿ ಇದೇ ಮೊದಲ ಬಾರಿಗೆ ಕಂಬಳ ನಡೆಯುವ ಮೂಲಕ ಕಂಬಳ ಋತು ಮುಕ್ತಾಯವಾಗಲಿದೆ. ಈ ಮೂಲಕ ಅಕ್ಟೋಬರ್‌ನಲ್ಲಿ ರಾಜಧಾನಿಗೆ ತೆರಳಲಿರುವ ಕೋಣಗಳು, ಏಪ್ರಿಲ್‌ನಲ್ಲಿ ಘಟ್ಟವನ್ನು ಏರಲಿವೆ.

ಜಿಲ್ಲಾ ಕಂಬಳ ಸಮಿತಿ ನೇತೃತ್ವದಲ್ಲಿ ಒಟ್ಟು 26 ಕಂಬಳಗಳು ಈ ಬಾರಿ ನಡೆಯಲಿವೆ. ಕಂಬಳವನ್ನು ಶಿಸ್ತುಬದ್ಧವಾಗಿ ಕಂಬಳ ನಡೆಯುತ್ತಿರುವುದಕ್ಕೆ ಉತ್ತಮ ಸ್ಪಂದನೆ ವ್ಯಕ್ತವಾಗುತ್ತಿದ್ದು, ಇದನ್ನು ಮತ್ತಷ್ಟು ಸುವ್ಯವಸ್ಥಿತವಾಗಿ ನಡೆಸುವ ನಿಟ್ಟಿನಲ್ಲಿ ಕಂಬಳ ಸಮಿತಿಗಳು ಪಾಲಿಸಬೇಕಾದ ಕೆಲವು ಉಪನಿಬಂಧನೆಗಳನ್ನು ರಚಿಸಲಾಗುವುದು. ಕಂಬಳ ವಿಳಂಬವಾಗುತ್ತಿರುವುದನ್ನು ನಿಯಂತ್ರಿಸಲೂ ನಿಯಮಗಳನ್ನು ರೂಪಿಸಲಾಗುವುದು. ಓಟಗಾರರು ಎಷ್ಟು ಜತೆ ಕೋಣಗಳನ್ನು ಓಡಿಸಬಹುದು ಮುಂತಾದ ನಿಯಮ ರೂಪಿಸಲಾಗುತ್ತಿದೆ ಎಂದು ಜಿಲ್ಲಾ ಕಂಬಳ ಸಮಿತಿ ಅಧ್ಯಕ್ಷ ಬೆಳಪು ಡಾ.ದೇವಿಪ್ರಸಾದ್‌ ಶೆಟ್ಟಿ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಸ್ಥಗಿತಗೊಂಡಿದ್ದ ಪಿಲಿಕುಳ ಕಂಬಳವನ್ನು ಈ ವರ್ಷದಿಂದ ಪುನರಾರಂಭಿಸಲಾಗುವುದು. ಕಂಬಳ ವನ್ನು ಪ್ರವಾಸೋದ್ಯಮದ ಭಾಗವಾಗಿಸುವ ನಿಟ್ಟಿನಲ್ಲಿ ಕಂಬಳ ಕುರಿತ ವಸ್ತು ಪ್ರದರ್ಶನ ಸಹಿತ 4 ದಿನಗಳ ತುಳುನಾಡ ವೈಭವ ಕಾರ್ಯಕ್ರಮ ಏರ್ಪಡಿಸಲಾಗುವುದು. ಬಹಳ ಮುಖ್ಯವಾಗಿ, ವಸ್ತು ಪ್ರದರ್ಶನಾಲಯ ಸಹಿತ ಕಂಬಳ ಭವನ ನಿರ್ಮಿಸಲಾಗುವುದು. ಈ ಜಿಲ್ಲೆಯಲ್ಲಿ ನಡೆಯುವ 24 ಕಂಬಳಗಳಿಗೂ ತಲಾ ₹ 5 ಲಕ್ಷ ರೂ.ಯಂತೆ ಸರಕಾರ ಅನುದಾನ ಬಿಡುಗಡೆ ಮಾಡಬೇಕೆಂಬ ಮನವಿಯನ್ನು ಕಂಬಳ ನಿಯೋಗವು ಮುಖ್ಯಮಂತ್ರಿಗೆ ಸಲ್ಲಿಸಿದ್ದು, ಅವರೂ ಸಕಾರಾತ್ಮ ಕವಾಗಿ ಸ್ಪಂದಿಸಿದ್ದಾರೆ ಎಂದರು.

ಕಂಬಳ ಸಮಿತಿ ಗೌರವಾಧ್ಯಕ್ಷ ಎರ್ಮಾಳ್‌ ರೋಹಿತ್‌ ಹೆಗ್ಡೆ ಸಹಿತ ಪ್ರಮುಖರು ಉಪಸ್ಥಿತರಿದ್ದರು<>

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments