ಕಂಚಿನೊಂದಿಗೆ ಮನೆಗೆ ಬಂದ ಹಾಕಿ ವೀರರು: ಚಿನ್ನ ಗೆದ್ದಷ್ಟೇ ಖುಷಿಯಿದೆ ಎಂದ ಫೋಷಕರು

Sampriya
ಭಾನುವಾರ, 11 ಆಗಸ್ಟ್ 2024 (16:38 IST)
Photo Courtesy X
ಅಮೃತಸರ: ಪ್ಯಾರಿಸ್ ಒಲಿಂಪಿಕ್ಸ್ 2024 ರಲ್ಲಿ ಕಂಚಿನ ಪದಕವನ್ನು ಗೆದ್ದ ನಂತರ, ಭಾರತೀಯ ಪುರುಷರ ಹಾಕಿ ತಂಡದ ಆಟಗಾರರಾದ ಹಾರ್ದಿಕ್ ಸಿಂಗ್ ಮನ್‌ದೀಪ್ ಸಿಂಗ್, ಹರ್ಮನ್‌ಪ್ರೀತ್ ಸಿಂಗ್, ಮನ್‌ದೀಪ್ ಸಿಂಗ್ ಮತ್ತು ಗುರ್ಜಂತ್ ಸಿಂಗ್  ತಮ್ಮ ಊರಿಗೆ ಮರಳಿದರು.

ಗುರುವಾರ ನಡೆದ ಪಂದ್ಯದಲ್ಲಿ ನಾಯಕ ಹರ್ಮನ್‌ಪ್ರೀತ್ ಸಿಂಗ್ ಮತ್ತು ಪಿಆರ್ ಶ್ರೀಜೇಶ್ ಅವರ ನೆರವಿನಿಂದ ಭಾರತಕ್ಕೆ ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಸ್ಪೇನ್ ವಿರುದ್ಧ 2-1 ಗೋಲುಗಳಿಂದ ಕಂಚಿನ ಪದಕ ಲಭಿಸಿದೆ.

ಮಕ್ಕಳು ತಾಯ್ನಾಡಿಗೆ ಪದಕದೊಂದಿಗೆ ಮರಳಿರುವ ಖುಷಿಯನ್ನು ವ್ಯಕ್ತಪಡಿಸಿದ ಹಾರ್ದಿಗ್ ಸಿಂಗ್ ತಾಯಿ ಕಮಲ್‌ಜೀತ್ ಕೌರ್ ಅವರು, "ನಾವು ತುಂಬಾ ಹೆಮ್ಮೆಪಡುತ್ತೇವೆ. ನನ್ನ ಭಾವನೆಗಳನ್ನು ವಿವರಿಸಲು ನನ್ನ ಬಳಿ ಪದಗಳಿಲ್ಲ... ನಾವು ಪ್ಯಾರಿಸ್‌ನಲ್ಲಿ ತಂಡವನ್ನು ಬೆಂಬಲಿಸುತ್ತಿದ್ದೆವು ಮತ್ತು ಇಂದು ನಾವು ಅವರನ್ನು ಸ್ವಾಗತಿಸಲು ಒಟ್ಟುಗೂಡಿದ್ದೇವೆ" ಎಂದು ಖುಷಿ ವ್ಯಕ್ತಪಡಿಸಿದರು.

"ಒಲಿಂಪಿಕ್ಸ್‌ನಲ್ಲಿ ತಂಡವು ಕಂಚಿನ ಪದಕ ಗೆದ್ದಿರುವುದರಿಂದ ನನಗೆ ತುಂಬಾ ಸಂತೋಷವಾಗಿದೆ... ಎಲ್ಲರೂ ಅವರನ್ನು ಸ್ವಾಗತಿಸಲು ಕಾಯುತ್ತಿದ್ದಾರೆ..." ಎಂದು ಮನ್‌ದೀಪ್ ಸಿಂಗ್ ಅವರ ತಂದೆ ಹೇಳಿದರು.

ತಂಡವು ತಮ್ಮೊಂದಿಗೆ ಚಿನ್ನದ ಪದಕವನ್ನು ಮರಳಿ ತಂದಂತೆ ಭಾಸವಾಗುತ್ತಿದೆ ಎಂದು ಸುಖದೇವ್ ಸಿಂಗ್ ಅವರ ತಂದೆ ಅಜಿತ್ ಸಿಂಗ್ ಹೇಳಿದ್ದಾರೆ.

"ಅವರು ಗೆದ್ದು ಬಂದಿದ್ದಾರೆ, ಚಿನ್ನ ಗೆದ್ದಿದ್ದಾರೆ ಎಂಬ ಭಾವನೆ ಮೂಡುತ್ತಿದೆ. ತುಂಬಾ ಖುಷಿಯಾಗಿದೆ. ಬಂದ ಕೂಡಲೇ ನನ್ನ ಮಗ ಪದಕವನ್ನು ನನ್ನ ಕೊರಳಿಗೆ ಹಾಕಿದ್ದಾನೆ. ಇದಕ್ಕಿಂತ ದೊಡ್ಡ ಸಂತೋಷ ಇನ್ನೊಂದಿಲ್ಲ. ಇಡೀ ತಂಡಕ್ಕೆ ಅಭಿನಂದನೆಗಳು.  ದೇವರು ಅವರನ್ನು ಆಶೀರ್ವದಿಸಲಿ... ನಮ್ಮ ಆಸೆ ಈಗ ಈಡೇರಿದೆ, ಅವರು ನಮ್ಮ ದೇಶಕ್ಕೆ ಪ್ರಶಸ್ತಿ ತಂದುಕೊಟ್ಟಿದ್ದಾರೆ... ನಮಗೆ ತುಂಬಾ ಸಂತೋಷವಾಗಿದೆ ಎಂದು ಅಜಿತ್ ಸಿಂಗ್ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಶ್ರೇಯಸ್ ಅಯ್ಯರ್ ಸ್ಥಿತಿ ಗಂಭೀರ: ಪೋಷಕರ ತೀರ್ಮಾನವೇನು ಗೊತ್ತಾ

ಶ್ರೇಯಸ್ ಅಯ್ಯರ್ ಆರೋಗ್ಯ ಸ್ಥಿತಿ ಗಂಭೀರ: ಐಸಿಯುವಿನಲ್ಲಿ ಚಿಕಿತ್ಸೆ

ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಆಡುವ ಮುಂದಿನ ಪಂದ್ಯ ಯಾವಾಗ ಇಲ್ಲಿದೆ ಡೀಟೈಲ್ಸ್

ಟೀಂ ಇಂಡಿಯಾಗೆ ಮತ್ತೆ ಶುರು ಹರ್ಷಿತ್ ರಾಣಾ ತಲೆನೋವು

Womens World Cup:ಧಾರಾಕಾರ ಮಳೆಗೆ ಕೊಚ್ಚಿ ಹೋದ ಭಾರತ–ಬಾಂಗ್ಲಾದೇಶ ಪಂದ್ಯ

ಮುಂದಿನ ಸುದ್ದಿ
Show comments