Webdunia - Bharat's app for daily news and videos

Install App

ನಿಷ್ಪಕ್ಷಪಾತ ತನಿಖೆಗಾಗಿ ಪ್ರಧಾನಿ ನರೇಂದ್ರ ಮೋದಿಗೆ ಮನವಿ: ನರಸಿಂಗ್ ಯಾದವ್

Webdunia
ಶನಿವಾರ, 20 ಆಗಸ್ಟ್ 2016 (13:35 IST)
ಒಲಿಂಪಿಕ್ಸ್‌ನಿಂದ ನಾಲ್ಕು ವರ್ಷಗಳ ನಿಷೇಧಕ್ಕೆ ಗುರಿಯಾದ ಕುಸ್ತಿಪಟು ನರಸಿಂಗ್ ಯಾದವ್, ನನ್ನ ವಿರುದ್ಧ ಷಡ್ಯಂತ್ರ ನಡೆದಿದ್ದು, ನಿಷ್ಪಕ್ಷಪಾತ ಸಿಬಿಐ ತನಿಖೆ ನಡೆಸುವಂತೆ ಪ್ರಧಾನಿ ಕಚೇರಿಗೆ ಮನವಿ ಮಾಡುವುದಾಗಿ ಹೇಳಿದ್ದಾರೆ.
 
ದೇಶವನ್ನು ಪ್ರತಿನಿಧಿಸಿ ಪದಕ ಗೆಲ್ಲಬೇಕು ಎನ್ನುವ ಕನಸು ಹೊತ್ತಿದ್ದ ನರಸಿಂಗ್ ಯಾದವ್‌ಗೆ ಕೋರ್ಟ್ ಆಫ್ ಆರ್ಬಿಟ್ರೇಶನ್ ಫಾರ್ ಸ್ಪೋರ್ಟ್ಸ್ ನಾಲ್ಕು ವರ್ಷಗಳ ನಿಷೇಧ ಹೇರಿದ್ದರಿಂದ ಅವರ ಕನಸು ಛಿದ್ರವಾಗಿತ್ತು. ನ್ಯಾಯ ದೊರೆಯುವವರೆಗೆ ಹೋರಾಟ ನಡೆಸುತ್ತೇನೆ ಎಂದು ತಿಳಿಸಿದ್ದಾರೆ. 
 
ನನ್ನ ಮತ್ತು ದೇಶದ ಹೆಸರಿಗೆ ಮಸಿಬಳೆಯಲಾಗಿದೆ. ನಾನು ಗಲ್ಲಿಗೇರಿದರೂ ಚಿಂತೆಯಿಲ್ಲ. ಘಟನೆಯ ಬಗ್ಗೆ ತನಿಖೆ ನಡೆಸುವಂತೆ ಒತ್ತಡ ಹೇರಲು ಸರ್ವೋಚ್ಚ ನ್ಯಾಯಾಲಯಕ್ಕೆ ತೆರಳಲು ಸಿದ್ದ ಎಂದು ಯಾದವ್ ಘೋಷಿಸಿದ್ದಾರೆ.
 
ಘಟನೆಯ ಬಗ್ಗೆ ಸಂಪೂರ್ಣ ತನಿಖೆ ನಡೆಸುವಂತೆ ಪ್ರಧಾನಿ ಮೋದಿಯವರಿಗೆ ಮನವಿ ಮಾಡುತ್ತೇನೆ. ಸತ್ಯ ಹೊರಬರಬೇಕು. ಅದಕ್ಕಾಗಿ ಸಿಬಿಐ ತನಿಖೆ ನಡೆದರೂ ಪರವಾಗಿಲ್ಲ. ಒಂದು ವೇಳೆ, ನಾನು ಅಪರಾಧಿಯಂತಾದಲ್ಲಿ ನನ್ನನ್ನು ಗಲ್ಲಿಗೇರಿಸಿ ಎಂದು ಗುಡುಗಿದ್ದಾರೆ.
 
ಸೋನೆಪತ್‌ನಲ್ಲಿ ತರಬೇತಿ ಪಡೆಯುತ್ತಿರುವ ಸಂದರ್ಭದಲ್ಲಿ ನನ್ನ ಕುಡಿಯು ನೀರು, ಆಹಾರಗಳಲ್ಲಿ ಕೆಲ ಔಷಧಿಗಳನ್ನು ಬೆರಸಿರುವ ಸಾಧ್ಯತೆಗಳಿವೆ. ಇದನ್ನು ನಾಡಾ ಕೂಡಾ ಒಪ್ಪಿಕೊಂಡಿದ್ದರಿಂದಲೇ ನನಗೆ ರಿಯೋ ಒಲಿಂಪಿಕ್ಸ್‌ಗೆ ತೆರಳಲು ಅನುಮತಿ ನೀಡಿತ್ತು ಎಂದು ನರಸಿಂಗ್ ಯಾದವ್ ಹೇಳಿದ್ದಾರೆ

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆಪ್ ಡೌನ್‍ಲೋಡ್ ಮಾಡಿಕೊಳ್ಳಿ 

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments