Webdunia - Bharat's app for daily news and videos

Install App

ನನ್ನ ತಪ್ಪಿನಿಂದ ರಾಷ್ಟ್ರಗೀತೆ ಮೊಳಗಲಿಲ್ಲ ಎಂದ ಕುಸ್ತಿಪಟು ಪೂಜಾಗೆ ಸಮಾಧಾನಿಸಿದ ಪ್ರಧಾನಿ ಮೋದಿ

Webdunia
ಭಾನುವಾರ, 7 ಆಗಸ್ಟ್ 2022 (17:11 IST)
ನವದೆಹಲಿ: ಕಾಮನ್ ವೆಲ್ತ್ ಗೇಮ್ಸ್ ನ ಮಹಿಳೆಯ 50 ಕೆ.ಜಿ. ವಿಭಾಗದ ಕುಸ್ತಿ ಸ್ಪರ್ಧೆಯಲ್ಲಿ ಕಂಚಿನ ಪದಕಕ್ಕೆ ತೃಪ್ತಿಪಟ್ಟುಕೊಂಡ ಪೂಜಾ ಗೆಹ್ಲೋಟ್ ಗೆ ಪ್ರಧಾನಿ ಮೋದಿ ಸಮಾಧಾನಿಸಿದ್ದಾರೆ.

ಕಂಚಿನ ಪದಕ ಗೆದ್ದ ಬಳಿಕ ಮಾತನಾಡಿದ್ದ ಪೂಜಾ ನಾನು ಈ ಮೂಲಕ ದೇಶದ ಕ್ಷಮೆ ಯಾಚಿಸಲು ಬಯಸುತ್ತೇನೆ. ನಾನು ಪ್ರಶಸ್ತಿ ಸ್ವೀಕರಿಸುವಾಗ ರಾಷ್ಟ್ರಗೀತೆ ಮೊಳಗಬೇಕು ಎಂದು ಬಯಸಿದ್ದೆ. ಆದರೆ ನನ್ನ ತಪ್ಪಿನಿಂದಾಗಿ ರಾಷ್ಟ್ರಗೀತೆ ಮೊಳಗಲಿಲ್ಲ. ಮುಂದಿನ ಬಾರಿ ಪ್ರದರ್ಶನ ಸುಧಾರಿಸಲು ಪ್ರಯತ್ನಿಸುವೆ ಎಂದಿದ್ದರು.

ಪೂಜಾ ಹೇಳಿಕೆಗೆ ಪ್ರತಿಕ್ರಿಯಿಸಿರುವ ಪ್ರಧಾನಿ ಮೋದಿ, ‘ಪೂಜಾ ನಿಮ್ಮ ಪದಕ ನಮಗೆಲ್ಲರಿಗೂ ಸಂಭ್ರಮ. ಕ್ಷಮೆ ಯಾಚಿಸಬೇಕಾಗಿಲ್ಲ. ನಿಮ್ಮ ಪಯಣ ನಮಗೆಲ್ಲಾ ಸ್ಪೂರ್ತಿ. ಮುಂದೆ ನಿಮಗೆ ಮತ್ತಷ್ಟು ಒಳಿತಾಗಲಿದೆ. ಹೀಗೇ ಸಾಧನೆ ಮಾಡುತ್ತಿರಿ’ ಎಂದಿದ್ದಾರೆ. ಪ್ರಧಾನಿ ಮೋದಿ ಕ್ರೀಡಾಳುವಿಗೆ ಈ ರೀತಿ ಸಮಾಧಾನಿಸಿದ್ದನ್ನು ನೆಟ್ಟಿಗರು ಮೆಚ್ಚಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments