Webdunia - Bharat's app for daily news and videos

Install App

ಪ್ಯಾರಾಲಿಂಪಿಕ್ಸ್ ವಿಜೇತರಿಗೆ ಪ್ರಧಾನಿ ಅಭಿನಂದನೆ

Webdunia
ಶನಿವಾರ, 10 ಸೆಪ್ಟಂಬರ್ 2016 (12:40 IST)
ರಿಯೋ ಪ್ಯಾರಾಲಿಂಪಿಕ್ಸ್‌ನಲ್ಲಿ ಕ್ರಮವಾಗಿ ಚಿನ್ನ ಮತ್ತು ಕಂಚನ್ನು ಗೆದ್ದು ದೇಶಕ್ಕೆ ಹೆಮ್ಮೆ ತಂದಿರುವ ಮರಿಯಪ್ಪನ್ ತಂಗವೇಲು ಮತ್ತು ವರುಣ್ ಸಿಂಗ್ ಭಾಟಿ ಅವರಿಗೆ ಪ್ರಧಾನಿ ಮೋದಿ ಅಭಿನಂದನೆಗಳನ್ನು ತಿಳಿಸಿದ್ದಾರೆ. 

ಒಲಂಪಿಕ್ಸ್‌ನಲ್ಲಿ ದೇಶಕ್ಕೆ ಏಕೈಕ ಚಿನ್ನ ತಂದಿರುವ ಶೂಟರ್ ಅಭಿನವ್ ಬಿಂದ್ರಾ ಸೇರಿದಂತೆ ಅನೇಕ ದಿಗ್ಗಜರು ಸಾಧಕದ್ವಯರಿಗೆ ಅಭಿನಂದನೆ ಸಲ್ಲಿಸಿದ್ದಾರೆ. 
 
"ಭಾರತ ಉಲ್ಲಸಿತವಾಗಿದೆ! ಚಿನ್ನ ಗೆದ್ದ ಮರಿಯಪ್ಪನ್ ತಂಗವೇಲು ಮತ್ತು ಕಂಚಿನ ಪದಕ ಗೆದ್ದ ವರುಣ್ ಸಿಂಗ್ ಭಾಟಿ ಅವರಿಗೆ ಅಭಿನಂದನೆಗಳು", ಎಂದು ಪ್ರಧಾನಿ ಟ್ವೀಟ್ ಮಾಡಿದ್ದಾರೆ. 
 
ಕ್ರೀಡಾ ಸಚಿವಾಲಯದ ನಗದು ಬಹುಮಾನ ಯೋಜನೆಯಡಿಯಲ್ಲಿ ಮರಿಯಪ್ಪನ್ 75 ಲಕ್ಷ ರೂಪಾಯಿಯನ್ನು ಪಡೆಯಲಿದ್ದಾರೆ. ಭಾಟಿ ಅವರಿಗೆ 30 ಲಕ್ಷ ದೊರೆಯಲಿದೆ. 
 
ರಿಯೋನಲ್ಲಿ ನಡೆಯುತ್ತಿರುವ ಪ್ಯಾರಾಲಿಂಪಿಕ್ಸ್‌ನಲ್ಲಿ ಭಾರತ ಐತಿಹಾಸಿಕ ಸಾಧನೆ ತೋರಿದ್ದು ಚಿನ್ನ ಮತ್ತು ಕಂಚಿನ ಮೂಲಕ ಖಾತೆ ತೆರೆದಿದೆ. ಪುರುಷರ ಹೈ ಜಂಪ್‌ ಟಿ-42 ವಿಭಾಗದಲ್ಲಿ ತಂಗವೇಲು ಚಿನ್ನಕ್ಕೆ ಮುತ್ತಿಕ್ಕಿದರೆ, ಇದೇ ಸ್ಪರ್ಧೆಯಲ್ಲಿ ಮತ್ತೊಬ್ಬ ಭಾರತೀಯ ವರುಣ್ ಭಾಟಿ ಕೂಡ ಕಂಚನ್ನು ಮುಡಿಗೇರಿಸಿಕೊಂಡಿದ್ದಾರೆ.  
 
ಮರಿಯಪ್ಪನ್ ತಂಗವೇಲು 1.89 ಮೀಟರ್ ದೂರ ಜಿಗಿದು ಚಿನ್ನ ಗೆದ್ದರು. ಇದು ಅವರ ವೈಯಕ್ತಿಕ ಶ್ರೇಷ್ಠ ದಾಖಲೆ ಕೂಡ. ಈ ಸಾಧನೆ ಮೂಲಕ 20 ವರ್ಷದ ತಂಗವೇಲು ರಿಯೋ ಪ್ಯಾರಾಲಿಂಪಿಕ್ಸ್‌ನಲ್ಲಿ ದೇಶಕ್ಕೆ ಚಿನ್ನ ತಂದುಕೊಟ್ಟ ಮೊದಲ ಭಾರತೀಯ ಎನ್ನಿಸಿಕೊಂಡರು. ಭಾಟಿ 1.86 ಮೀಟರ್ ದೂರಕ್ಕೆ ಜಿಗಿದು ಕಂಚನ್ನು ಪಡೆದುಕೊಂಡರು. ರಜತ ಪದಕ ಅಮೇರಿಕಾದ ಸ್ಯಾಮ್ ಗ್ರಿವ್ ಪಾಲಾಯಿತು.
 
ಪ್ಯಾರಾಲಿಂಪಿಕ್ಸ್ ಇತಿಹಾಸದಲ್ಲಿ ದೇಶಕ್ಕೆ ಚಿನ್ನ ತಂದುಕೊಟ್ಟ ಮೂರನೆಯ ಆಟಗಾರ ಎಂಬ ಹೆಗ್ಗಳಿಕೆಗೂ ತಂಗವೇಲು ಪಾತ್ರರಾಗಿದ್ದಾರೆ,  ಈ ಹಿಂದೆ ಮುರಳಿಕಾಂತ್ ಪೆಟ್ಕರ್ (ಹೈಡೆಲ್ಬರ್ಗ್-1972) ಈಜಿನಲ್ಲಿ ಮತ್ತು ದೇವೇಂದ್ರ ಝಾಜ್‌ಹರಿಯಾ (ಜಾವೆಲಿನ್, 2004 ಅಥೆನ್ಸ್) ಚಿನ್ನ ಗೆದ್ದಿದ್ದರು. 
 
ತಂಗವೇಲು ಮತ್ತು ಭಾಟಿ ಸಾಧನೆಯೊಂದಿಗೆ ಭಾರತದ ಪ್ಯಾರಾಲಿಂಪಿಕ್ಸ್‌ನಲ್ಲಿ ಪಡೆದಿರುವ ಪದಕಗಳ ಮೊತ್ತ 10 ಆದಂತಾಯಿತು. ಅದರಲ್ಲಿ ಮೂರು ಚಿನ್ನ, ಮೂರು ಬೆಳ್ಳಿ ಮತ್ತು ನಾಲ್ಕು ಕಂಚಿನ ಪದಕಗಳಾಗಿವೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ 
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs ENG: ಇಂಗ್ಲೆಂಡ್ ವಿರುದ್ಧ ನಾಲ್ಕನೇ ಟೆಸ್ಟ್ ಪಂದ್ಯಕ್ಕೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ನಿವೃತ್ತಿ ಘೋಷಿಸಿದ ಆ್ಯಂಡ್ರೆ ರಸೆಲ್

IND vs ENG: ರಿಷಭ್ ಪಂತ್ ಗಾಯ ಹೇಗಿದೆ, ಮುಂದಿನ ಪಂದ್ಯದಲ್ಲಿ ಆಡ್ತಾರಾ

ಮೂರನೇ ಟೆಸ್ಟ್‌ನ ಕೊನೆಯಲ್ಲಿ ಸಿರಾಜ್‌ ಔಟಾದಾಗ ಏನನ್ನಿಸಿತು: ಶುಭಮನ್‌ ಗಿಲ್‌ಗೆ ಕಿಂಗ್ಸ್‌ ಚಾರ್ಲ್ಸ್‌ ಪ್ರಶ್ನೆ

IND vs ENG: ಹಾರ್ಟ್ ಬ್ರೇಕ್ ನಂತರ ಟೀಂ ಇಂಡಿಯಾ ಮುಂದಿನ ಟೆಸ್ಟ್ ಪಂದ್ಯ ಯಾವಾಗ, ಎಲ್ಲಿ

ಮುಂದಿನ ಸುದ್ದಿ
Show comments