Webdunia - Bharat's app for daily news and videos

Install App

ರಾಜೀವ್ ಗಾಂಧಿ ಖೇಲ್ ರತ್ನ ಅವಾರ್ಡ್ ಇನ್ಮುಂದೆ ಧ್ಯಾನ್ ಚಂದ್ ಅವಾರ್ಡ್! ಕೇಂದ್ರದ ನಿರ್ಧಾರ

Webdunia
ಶುಕ್ರವಾರ, 6 ಆಗಸ್ಟ್ 2021 (16:56 IST)
ನವದೆಹಲಿ: ಇಷ್ಟು ದಿನ ಕ್ರೀಡೆಯಲ್ಲಿ ಅತ್ಯುತ್ತಮ ಸಾಧನೆ ಮಾಡಿದವರಿಗಾಗಿ ಕೊಡಮಾಡಲಾಗುವ ಖೇಲ್ ರತ್ನ ಅವಾರ್ಡ್ ನ್ನು ಮಾಜಿ ಪ್ರಧಾನಿ ದಿವಂಗತ ರಾಜೀವ್ ಗಾಂಧಿ ಹೆಸರಿನಲ್ಲಿ ನೀಡಲಾಗುತ್ತಿತ್ತು.


ಆದರೆ ಈಗ ಪ್ರಧಾನಿ ಮೋದಿ ಈ ಪ್ರಶಸ್ತಿಗೆ ಮರುನಾಮಕರಣ ಮಾಡಿರುವ ಸುದ್ದಿ ಪ್ರಕಟಿಸಿದ್ದು, ಇನ್ಮುಂದೆ ಖೇಲ್ ರತ್ನ ಅವಾರ್ಡ್ ಭಾರತದ ಹಾಕಿ ದಿಗ್ಗಜ ಧ‍್ಯಾನ್ ಚಂದ್ ಹೆಸರಿನಲ್ಲಿ ಕೊಡಮಾಡಲಾಗುತ್ತದೆ.

ನನಗೆ ದೇಶದ ಅನೇಕ ಜನರು ಖೇಲ್ ರತ್ನ ಅವಾರ್ಡ್ ನ್ನು ಧ್ಯಾನ್ ಚಂದ್ ಹೆಸರಿನಲ್ಲಿ ಮರುನಾಮಕರಣ ಮಾಡಿ ಎಂದು ಮನವಿ ಮಾಡಿದ್ದರು. ಅದರಂತೆ ಇನ್ಮುಂದೆ ಈ ಪ್ರಶಸ್ತಿಯನ್ನು ಧ್ಯಾನ್ ಚಂದ್ ಖೇಲ್ ರತ್ನ ಅವಾರ್ಡ್ ಎಂದು ಮರುನಾಮಕರಣ ಮಾಡಲಾಗಿದೆ ಎಂದು ಪ್ರಕಟಣೆ ನೀಡಿದ್ದಾರೆ.

ಇನ್ನು, ಪ್ರಧಾನಿ ಇಂತಹದ್ದೊಂದು ನಿರ್ಧಾರ ಪ್ರಕಟಿಸುತ್ತಿದ್ಧಂತೇ ಅನೇಕರು ಸಾಮಾಜಿಕ ಜಾಲತಾಣದ ಮೂಲಕ ಸ್ವಾಗತಿಸಿದ್ದು, ಹಾಕಿ ದಿಗ್ಗಜನಿಗೆ ಇಂತಹ ಗೌರವ ನೀಡಿದ್ದನ್ನು ಸ್ವಾಗತಿಸಿದ್ದಾರೆ. ಇನ್ನು, ಕೆಲವರು ಇನ್ನೂ ಹಲವು ಪ್ರಶಸ್ತಿ, ಕ್ರೀಡಾಂಗಣಗಳಿಗೆ ರಾಜಕೀಯ ನಾಯಕರ ಹೆಸರು ಕೈಬಿಟ್ಟು ಕ್ರೀಡಾ ಸಾಧಕರ ಹೆಸರನ್ನೇ ಮರು ನಾಮಕರಣ ಮಾಡಿ ಎಂದು ಒತ್ತಾಯಿಸಿದ್ದಾರೆ. ಮೋದಿ ನಿರ್ಧಾರವನ್ನು ಧ‍್ಯಾನ್ ಚಂದ್ ಪುತ್ರ ಅಶೋಕ್ ಕುಮಾರ್ ಕೂಡಾ ಸ್ವಾಗತಿಸಿದ್ದು, ತಮ್ಮ ತಂದೆಯನ್ನು ಈಗಲೂ ಜನ ನೆನಪಿನಲ್ಲಿಟ್ಟುಕೊಂಡಿರುವುದಕ್ಕೆ ಧನ್ಯವಾದ ಸಲ್ಲಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಕಣ್ಣು ಕುಕ್ಕಿದ ಇಂಗ್ಲೆಂಡ್ ಪ್ರೇಕ್ಷಕನ ಕೆಂಪು ಟೀ ಶರ್ಟ್‌, ಕ್ರೀಸ್‌ನಲ್ಲಿದ್ದ ಜಡೇಜಾ ಮಾಡಿದ್ದೇನು ಗೊತ್ತಾ

ಕೆಣಕಿದ ಕ್ರಾಲಿಗೆ ತಕ್ಕ ಉತ್ತರ ನೀಡಿದ ಮೊಹಮ್ಮದ್‌ ಸಿರಾಜ್‌: ಕುತೂಹಲಕರ ಘಟ್ಟದತ್ತ ಐದನೇ ಟೆಸ್ಟ್‌

ತಪ್ಪನ್ನು ಸರಿಪಡಿಸಿಕೊಂಡು ಮತ್ತೆ ಆಖಾಢಕ್ಕೆ ಸಿದ್ಧವಾಗುತ್ತೇವೆ ಎಂದ ಮಹೇಂದ್ರ ಸಿಂಗ್ ಧೋನಿ

ವಿಚ್ಚೇದನದಿಂದ ಹಿಂದೆ ಸರಿದ ಸೈನಾ ನೆಹ್ವಾಲ್‌: ದೂರವಾದಾಗಲೇ ಬೆಲೆ ತಿಳಿಯೋದು ಎಂದ ಬ್ಯಾಡ್ಮಿಂಟನ್‌ ತಾರೆ

END vs IND Test: ನೈಟ್ ವಾಚ್ಮೆನ್ ಆಗಿ ಬಂದು ಮೊದಲ ಅರ್ಧ ಶತಕ ಸಿಡಿಸಿದ ಆಕಾಶದೀಪ್‌

ಮುಂದಿನ ಸುದ್ದಿ
Show comments