ಕನ್ನಡಿಗ ರೋಹನ್ ಬೋಪಣ್ಣಗೆ ಈ ಅನ್ಯಾಯ ಸರೀನಾ?

Webdunia
ಬುಧವಾರ, 23 ಆಗಸ್ಟ್ 2017 (09:15 IST)
ನವದೆಹಲಿ: ದೇಶದ ಪ್ರತಿಷ್ಠಿತ ಕ್ರೀಡಾ ಪ್ರಶಸ್ತಿ ವಿಜೇತರ ಹೆಸರು ಪ್ರಕಟಣೆಯಾಗಿದ್ದು, ಮಹಿಳಾ ಕ್ರಿಕೆಟ್ ಆಟಗಾರ್ತಿ ಹರ್ಮನ್ ಪ್ರೀತ್ ಕೌರ್ ಸೇರಿದಂತೆ ಹಲವು ಕ್ರೀಡಾ ಪ್ರತಿಭೆಗಳಿಗೆ ಪ್ರಶಸ್ತಿ ಲಭಿಸಿದೆ.

 
ಮಹಿಳಾ ವಿಶ್ವಕಪ್ ನಲ್ಲಿ ಹೊಸ ಹವಾ ಸೃಷ್ಟಿಸಿದ ಹರ್ಮನ್ ಪ್ರೀತ್ ಕೌರ್ ಗೆ ಅರ್ಜುನ ಪ್ರಶಸ್ತಿ ಲಭಿಸಿದೆ. ಅವರ ಜತೆಗೆ ಕ್ರಿಕೆಟಿಗ ಚೇತೇಶ್ವರ ಪೂಜಾರ, ಜಸ್ಬೀರ್ ಸಿಂಗ್, ಟಿ. ಮರಿಯಪ್ಪನ್ ಅರ್ಜುನ ಪ್ರಶಸ್ತಿಗೆ ಭಾಜನರಾದ ಪ್ರಮುಖರು.

ಆದರೆ ಕನ್ನಡಿಗ ರೋಹನ್ ಬೋಪಣ್ಣಗೆ ನಿರಾಸೆಯಾಗಿದೆ. ಈ ವರ್ಷ ಫ್ರೆಂಚ್ ಓಪನ್ ಗ್ರ್ಯಾಂಡ್ ಸ್ಲಾಮ್ ಗೆದ್ದು ಪ್ರಶಸ್ತಿ ಪಡೆಯುವ ಅರ್ಹತೆ ಇದ್ದರೂ, ಟೆನಿಸ್ ಅಕಾಡಮಿ ಗಡುವು ಮುಗಿದ ಮೇಲೆ ಅರ್ಜಿ ಸಲ್ಲಿಸಿದ ಕಾರಣ ಪ್ರಶಸ್ತಿಯಿಂದ ವಂಚಿತರಾಗಿದ್ದಾರೆ. ಟೆನಿಸ್ ಅಕಾಡೆಮಿಯ ಬೇಜವಬ್ದಾರಿ ವರ್ತನೆಯಿಂದ ಕನ್ನಡಿಗನಿಗೆ ಸಿಗಬೇಕಾದ ಮಾನ್ಯತೆ ದೊರೆಯದೇ ಹೋಯ್ತು.

ಧ್ಯಾನ್ ಚಂದ್ ಪ್ರಶಸ್ತಿಗೆ ಮೂವರನ್ನು ಆಯ್ಕೆ ಮಾಡಲಾಗಿದ್ದು, ಭೂಪಿಂದರ್ ಸಿಂಗ್, ಸೈಯದ್ ಶಾಹಿದ್ ಹಕೀಂ ಮತ್ತು ಸುಮರಾಯ್ ಟೆಟೆ ಆಯ್ಕೆಯಾಗಿದ್ದಾರೆ. ವಿಶೇಷವೆಂದರೆ ಇಂಗ್ಲೆಂಡ್ ನಲ್ಲಿ ಅತ್ಯಾಚಾರ ಆರೋಪಕ್ಕೊಳಗಾಗಿದ್ದ ಹಾಕಿ ಆಟಗಾರ ಸರ್ದಾರ್ ಸಿಂಗ್ ಗೆ ಖೇಲ್ ರತ್ನ ಪ್ರಶಸ್ತಿ ಸಿಕ್ಕಿದೆ.

ಇದನ್ನೂ ಓದಿ.. ಉತ್ತರ ಪ್ರದೇಶದಲ್ಲಿ ಇಂದು ಮತ್ತೊಂದು ರೈಲು ದುರಂತ
 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ರೋಹಿತ್ ಶರ್ಮಾ, ವಿರಾಟ್ ಕೊಹ್ಲಿಗೇ ಟೀಂ ಇಂಡಿಯಾದಲ್ಲಿ ಸ್ಥಾನ ಗ್ಯಾರಂಟಿ ಇಲ್ಲ

ರೋಹಿತ್ ಶರ್ಮಾರನ್ನು ನಾಯಕತ್ವದಿಂದ ಕೆಳಗಿಳಿಸಿದ್ದು ಇದೇ ಕಾರಣಕ್ಕೆ

ಆಸ್ಟ್ರೇಲಿಯಾ ವಿರುದ್ಧ ಸರಣಿಗೆ ಟೀಂ ಇಂಡಿಯಾ ಪ್ರಕಟ: ರೋಹಿತ್ ಶರ್ಮಾ, ಕೊಹ್ಲಿ ಕಮ್ ಬ್ಯಾಕ್

ಕ್ಯಾಪ್ಟನ್ಸಿಯಿಂದ ರೋಹಿತ್ ಶರ್ಮಾಗೆ ಕೊಕ್: ಈಡೇರದೇ ಹೋಯ್ತಾ ಆ ಕನಸು

IND vs WI Test: ಜಡೇಜ ದಾಳಿಗೆ ಕುಸಿದ ವಿಂಡೀಸ್: ಶುಭಮನ್‌ ನಾಯಕತ್ವಕ್ಕೆ ತವರಿನಲ್ಲಿ ಮೊದಲ ಜಯ

ಮುಂದಿನ ಸುದ್ದಿ
Show comments