Webdunia - Bharat's app for daily news and videos

Install App

ಆಸ್ಟ್ರೇಲಿಯಾ ಓಪನ್ ಗೆದ್ದ ಕಿದಂಬಿ ಶ್ರೀಕಾಂತ್ ಬಗ್ಗೆ ಸಚಿನ್ ಹೇಳಿದ್ದ ಭವಿಷ್ಯ ನಿಜವಾಯಿತು!

Webdunia
ಸೋಮವಾರ, 26 ಜೂನ್ 2017 (09:27 IST)
ಮುಂಬೈ: ನಿನ್ನೆಯಷ್ಟೇ ಮುಕ್ತಾಯಗೊಂಡ ಆಸ್ಟ್ರೇಲಿಯಾ ಓಪನ್ ಸೂಪರ್ ಸೀರೀಸ್ ಬ್ಯಾಡ್ಮಿಂಟನ್ ಟೂರ್ನಿಯಲ್ಲಿ ಪ್ರಶಸ್ತಿ ಗೆದ್ದ ಭಾರತದ ಕಿದಂಬಿ ಶ್ರೀಕಾಂತ್ ಗೆ ಸಚಿನ್ ತೆಂಡುಲ್ಕರ್ ಎಂದರೆ ಅಚ್ಚುಮೆಚ್ಚು.

 
ಹಿಂದೊಮ್ಮೆ ಸಚಿನ್ ರನ್ನು ಭೇಟಿಯಾಗಿದ್ದಾಗ ಅವರು ಶ್ರೀಕಾಂತ್ ಗೆ ಮುಂದೊಂದು ದಿನ ನೀನು ನಂ.1 ಆಗಿಯೇ ಆಗುತ್ತೀಯಾ ಎಂದು ಭವಿಷ್ಯ ನುಡಿದಿದ್ದರಂತೆ. ಅದರಂತೆ ಇದೀಗ ಸತತ ಎರಡು ಸೂಪರ್ ಸೀರೀಸ್ ಗೆದ್ದಿರುವ ಶ್ರೀಕಾಂತ್ ಗೆ ಸಚಿನ್ ಟ್ವಿಟರ್ ನಲ್ಲಿ ಶುಭಾಷಯ ಕೋರಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿರುವ ಸಚಿನ್ ನಿಮ್ಮ ಒಂದು ಸಂದೇಶ ನನಗೆ ಬಿಲಿಯನ್ ಸಂದೇಶಗಳ ಸಮಾನ ಎಂದು ಭಾವುಕರಾಗಿ ಹೇಳಿದ್ದಾರೆ. ಸತತ ಎರಡು ಪ್ರಶಸ್ತಿ ಗೆದ್ದಿರುವ ಶ್ರೀಕಾಂತ್ ಗೆ ಬಾಲಿವುಡ್ ಬಿಗ್ ಬಿ ಅಮಿತಾಭ್ ಬಚ್ಚನ್, ಪ್ರಧಾನಿ ಮೋದಿ ಸೇರಿದಂತೆ ವಿವಿಧ ಕ್ಷೇತ್ರಗಳ ಗಣ್ಯರು ಅಭಿನಂದನೆ ಸಲ್ಲಿಸಿದ್ದಾರೆ.

ಇವರ ಸಾಧನೆಗೆ ಮಹೀಂದ್ರಾ ಸಂಸ್ಥೆ ಒಂದು ಕಾರು ಉಡುಗೊರೆಯಾಗಿ ನೀಡುತ್ತಿರುವುದಾಗಿ ಘೋಷಿಸಿದೆ. ಇನ್ನು, ಭಾರತೀಯ ಬ್ಯಾಡ್ಮಿಂಟನ್ ಸಂಸ್ಥೆ 5 ಲಕ್ಷ ರೂ. ಬಹುಮಾನ ಘೋಷಿಸಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments