Webdunia - Bharat's app for daily news and videos

Install App

ಕಾಮನ್ ವೆಲ್ತ್ ಗೇಮ್ಸ್ ಗೆ ಕಾಲಿಟ್ಟ ದಿನವೇ ಸೈನಾ ನೆಹ್ವಾಲ್ ಅತ್ತಿದ್ದರಂತೆ! ಕಾರಣವೇನು ಗೊತ್ತಾ?

Webdunia
ಗುರುವಾರ, 19 ಏಪ್ರಿಲ್ 2018 (08:30 IST)
ನವದೆಹಲಿ: ಇತ್ತೀಚೆಗೆ ಆಸ್ಟ್ರೇಲಿಯಾದಲ್ಲಿ ನಡೆದ ಕಾಮನ್ ವೆಲ್ತ್ ಗೇಮ್ಸ್ ನಲ್ಲಿ ಭಾರತದ ಖ್ಯಾತ ಬ್ಯಾಡ್ಮಿಂಟನ್ ತಾರೆ ಸೈನಾ ನೆಹ್ವಾಲ್ ಚಿನ್ನ ಗೆದ್ದರು. ಆದರೆ ಈ ಕೂಟಕ್ಕೆ ಕಾಲಿಡುವ ಮೊದಲು ಸೈನಾ ಅತ್ತಿದ್ದರಂತೆ. ಕಾರಣವೇನುಂಬುದನ್ನು ಅವರೇ ಹೇಳಿಕೊಂಡಿದ್ದಾರೆ.

ಕಾಮನ್ ವೆಲ್ತ್ ಗ್ರಾಮಕ್ಕೆ ಕಾಲಿಟ್ಟಾಗ ತಂದೆ ಹರ್ ವೀರ್ ಸಿಂಗ್ ಗೆ ಪ್ರವೇಶವಿಲ್ಲ ಎಂದರು. ಇದರ ಬಗ್ಗೆ ಸೈನಾ ಪ್ರತಿಭಟನೆ ನಡೆಸಿದ್ದು ಸುದ್ದಿಯಾಗಿತ್ತು. ಆದರೆ ಈ ಸಂದರ್ಭದಲ್ಲಿ ಸದಾ ತನ್ನ ಜತೆಗೇ ಬರುವ ತಂದೆಗೆ ಕಾಮನ್ ವೆಲ್ತ್ ಗೇಮ್ಸ್ ನಲ್ಲಿ ತನ್ನ ಆಟ ನೋಡಲು ಸಾಧ್ಯವಿಲ್ಲ ಎಂದು ತಿಳಿದು ಸೈನಾ ಅತ್ತಿದ್ದರಂತೆ.

‘ನಾನೇ ಶುಲ್ಕ ಭರಿಸಲೂ ಸಿದ್ಧಳಿದ್ದೆ. ಆದರೂ ನಾನು ಹೆಚ್ಚು ಇಷ್ಟಪಡುವ ತಂದೆಗೆ ಪಂದ್ಯ ನೋಡಲು ಸಾಧ್ಯವಿಲ್ಲ ಎಂದು ಹೇಳಿದ್ದು ನನಗೆ ತೀವ್ರ ಹತಾಶೇಯುಂಟು ಮಾಡಿತ್ತು. ಕೂಟದಿಂದಲೇ ನಿರ್ಗಮಿಸುವ ಬೆದರಿಕೆ ಹಾಕಿದ್ದೆ. ಒಂದು ದಿನ ಅಭ್ಯಾಸಕ್ಕೂ ತೆರಳಲಿಲ್ಲ. ಅದೃಷ್ಟವಶಾತ್ ಆವತ್ತು ಗೋಪಿಚಂದ್ ಸರ್ ಅಲ್ಲಿರಲಿಲ್ಲ. ಅವರಿದ್ದರೆ ನನಗೆ ಇದೆಲ್ಲಾ ಮನಸ್ಸಿಗೆ ಹಚ್ಚಿಕೊಳ್ಳದೆ ಪ್ರಾಕ್ಟೀಸ್ ಮಾಡು ಎನ್ನುತ್ತಿದ್ದರು. ಕೊನೆಗೆ ನನ್ನ ತಂದೆಗೆ ಪಂದ್ಯಕ್ಕೆ ಬರಲು ಅವಕಾಶ ಸಿಕ್ಕಿತು’ ಎಂದು ಸೈನಾ ಹೇಳಿಕೊಂಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಕ್ರಿಕೆಟಿಗ ರಿಂಕು ಸಿಂಗ್‌ ನಿಶ್ಚಿತಾರ್ಥ: ಕೈ ಹಿಡಿಯಲಿರುವ ಯುವತಿ ಹಿನ್ನೆಲೆ ಕೇಳಿದ್ರೆ ಶಾಕ್ ಆಗ್ತೀರಾ

French Open: ಯಾನಿಕ್‌ ಸಿನ್ನರ್‌- ಕಾರ್ಲೋಸ್‌ ಅಲ್ಕರಾಜ್‌ ಪೈಪೋಟಿಯಲ್ಲಿ ಯಾರಿಗೆ ಒಲಿಯಲಿದೆ ಫ್ರೆಂಚ್‌ ಓಪನ್‌ ಕಿರೀಟ

IPL 2025: ಆರ್‌ಸಿಬಿಗೆ ಐಪಿಎಲ್‌ ಕಿರೀಟ: ಇಡೀ ಗ್ರಾಮಕ್ಕೆ ಮಾಂಸದೂಟ ಹಾಕಿ ಸಂಭ್ರಮಿಸಿದ ಯುವಕರು

Norway Chess: ಮ್ಯಾಗ್ನಸ್ ಕಾರ್ಲ್‌ಸನ್ ಏಳನೇ ಬಾರಿ ಕಿರೀಟ: ಪ್ರಶಸ್ತಿ ರೇಸ್‌ನಲ್ಲಿದ್ದ ಗುಕೇಶ್‌ಗೆ ನಿರಾಸೆ

Chinnaswamy Stampede: ಕಾಲ್ತುಳಿತಕ್ಕೆ ಮತ್ತಷ್ಟು ವಿಕೆಟ್‌ ಪತನ: ಕೆಎಸ್‌ಸಿಎ ಪದಾಧಿಕಾರಿಗಳು ಗುಡ್‌ಬೈ

ಮುಂದಿನ ಸುದ್ದಿ
Show comments