ಕಬಡ್ಡಿ ಅಂಗಳದಲ್ಲೇ ಕುಸಿದು ರಾಜ್ಯ ಮಟ್ಟದ ಆಟಗಾರ ಪ್ರೀತಮ್ ಶೆಟ್ಟಿ ಬಲಿ

Sampriya
ಶನಿವಾರ, 14 ಡಿಸೆಂಬರ್ 2024 (14:16 IST)
Photo Courtesy X
ಉಡುಪಿ: ಹೃದಯಾಘಾತಕ್ಕೆ ಯುವ ಪೀಳಿಗೆ ಬಲಿಯಾಗುತ್ತಿರುವ ಘಟನೆಗಳು ಹೆಚ್ಚುತ್ತಿರುವ ಬೆನ್ನಲ್ಲೇ  ಮತ್ತೊಂದು ಘಟನೆ ಮಂಡ್ಯದಲ್ಲಿ ನಡೆದಿದೆ. ರಾಜ್ಯ ಮಟ್ಟದ ಪ್ರತಿಭಾನ್ವಿತ ಕಬಡ್ಡಿ ಆಟಗಾರ ಮೃತಪಟ್ಟಿದ್ದಾರೆ.

ರಾಜ್ಯಮಟ್ಟದ ಕಬಡ್ಡಿ ಆಟಗಾರ, ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಮುಟ್ಲುಪಾಡಿ ನಡುಮನೆ ನಿವಾಸಿ ಪ್ರೀತಮ್‌ ಶೆಟ್ಟಿ(26) ಹೃದಯಾಘಾತದಿಂದ ನಿಧನರಾಗಿದ್ದಾರೆ. ಶುಕ್ರವಾರ ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ನಡೆದ ಪಂದ್ಯಾವಳಿಯಲ್ಲಿ ಪ್ರೀತಮ್ ಭಾಗವಹಿಸಿದ್ದರು. ಈ ಪಂದ್ಯಾಟದ ನಡುವೆ ಅವರಿಗೆ ಎದೆ ನೋವು ಕಾಣಿಸಿಕೊಂಡಿದೆ.

ಎದೆ ನೋವಿನಿಂದ ಅಂಗಳದಲ್ಲೇ ಕುಸಿದು ಬಿದ್ದ ಅವರನ್ನು ಸಹ ಆಟಗಾರರು ತಕ್ಷಣವೇ ಆಸ್ಪತ್ರೆಗೆ ಕರೆದೊಯ್ದಿದ್ದರು. ಆದರೆ ಅಷ್ಟರಲ್ಲಾಗಲೇ ಪ್ರೀತಮ್ ಶೆಟ್ಟಿ ಅವರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಕೆಲವೇ ದಿನಗಳಲ್ಲಿ ವಿದೇಶಕ್ಕೆ ಉದ್ಯೋಗಕ್ಕಾಗಿ ತೆರಳು ಸಿದ್ಧತೆಗಳನ್ನು ಪ್ರೀತಮ್‌ ಮಾಡಿಕೊಂಡಿದ್ದರು. ಆದರೆ ವಿಧಿಯಾಟ ಕಬಡ್ಡಿ ಅಂಗಳದಲ್ಲೇ ಯುವ ಆಟಗಾರ ತನ್ನ ಪ್ರಾಣಬಿಟ್ಟಿದ್ದಾರೆ. ಮೃತ ಪ್ರೀತಮ್ ಶೆಟ್ಟಿ ತಾಯಿ ಹಾಗೂ ಓರ್ವ ಸಹೋದರನನ್ನು ಅಗಲಿದ್ದಾರೆ.

ಕೆಲ ತಿಂಗಳುಗಳ ಹಿಂದೆಯಷ್ಟೇ ಅಂತರರಾಷ್ಟ್ರೀಯ ಖ್ಯಾತಿ ಗಳಿಸಿದ್ದ ಕಬಡ್ಡಿ ಆಟಗಾರ ನಿರ್ಭಯ್ ಸಿಂಗ್ ಹಾತೂರ್ ಹೃದಯಾಘಾತದಿಂದ ನಿಧನರಾಗಿದ್ದರು. 35 ವರ್ಷದ ನಿರ್ಭಯ್ ಸಿಂಗ್ ಅತ್ಯುತ್ತಮ ಪ್ರದರ್ಶನಗಳೊಂದಿಗೆ ವಿದೇಶಗಳಲ್ಲೂ ತಮ್ಮ ಖ್ಯಾತಿ ವಿಸ್ತರಿಸಿದ್ದರು. ಅವರ ಬೆನ್ನಲ್ಲೇ ಪ್ರೀತಂ ನಿಧನ ಕ್ರೀಡಾವಲಯದಲ್ಲಿ ಭಾರೀ ಆಘಾತ ಉಂಟುಮಾಡಿದೆ.
 <>

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಮೆಸ್ಸಿ ಕಾರ್ಯಕ್ರಮದ ಮುಖ್ಯ ಆಯೋಜಕ ಶತಾದ್ರು ದತ್ತಗೆ ಬಿಗ್‌ ಶಾಕ್

ಮೆಸ್ಸಿ ಕಾರ್ಯಕ್ರಮಕ್ಕೆ ನಿರಾಕರಣೆ, ಮಮತಾ ಸರ್ಕಾರದ ವಿರುದ್ಧ ರಾಜ್ಯಪಾಲರ ಪ್ರಶ್ನೆ

ಟೀಂ ಇಂಡಿಯಾದ ಮತ್ತೊಬ್ಬ ಆಟಗಾರನನ್ನೂ ಇದ್ದೂ ಇಲ್ಲದಂತೆ ಸೈಡ್ ಲೈನ್ ಮಾಡುತ್ತಿದ್ದಾರಾ ಗಂಭೀರ್

Video: ಮೆಸ್ಸಿಯನ್ನು ನೋಡಲು ಬಿಡಲಿಲ್ಲ ಎಂದು ನಮ್ಮದೇ ಫುಟ್ಬಾಲ್ ಮೈದಾನವನ್ನು ಪುಡಿಗಟ್ಟಿದ ಯುವಕರು

ಭಾರತಕ್ಕೆ ಬಂದ ಲಿಯೋನೆಲ್ ಮೆಸ್ಸಿಗಾಗಿ ಹನಿಮೂನ್ ಕ್ಯಾನ್ಸಲ್ ಮಾಡಿದ ನವವಿವಾಹಿತರು

ಮುಂದಿನ ಸುದ್ದಿ
Show comments