ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಪ್ರತಿ ತಿಂಗಳು ರೇಡಿಯೋದಲ್ಲಿ ನಡೆಸಿಕೊಡುವ ಮನ್ ಕೀ ಬಾತ್ ಕಾರ್ಯಕ್ರಮದಲ್ಲಿ ವಿಶೇಷ ವ್ಯಕ್ತಿಗಳನ್ನು ಉಲ್ಲೇಖಿಸುತ್ತಾರೆ. ಹಾಗೆಯೇ ಈ ಬಾರಿ ಕೆಲವು ಕ್ರೀಡಾಳುಗಳ ಹೆಸರನ್ನು ಪ್ರಸ್ತಾಪಿಸಿದ್ದಾರೆ.
ಇತ್ತೀಚೆಗೆ ಕಿರಿಯರ ವಿಶ್ವಕಪ್ ಗೆದ್ದ ಭಾರತ ತಂಡದ ಸದಸ್ಯರು, ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಪಂದ್ಯದಲ್ಲಿ ಉತ್ತಮ ಸಾಧನೆ ತೋರಿದ ರವಿಚಂದ್ರನ್ ಅಶ್ವಿನ್, ತ್ರಿಶತಕ ಗಳಿಸಿದ್ದ ಕರುಣ್ ನಾಯರ್ ಹೆಸರುಗಳನ್ನು ಮೋದಿ ತಮ್ಮ ಭಾಷಣದಲ್ಲಿ ಪ್ರಸ್ತಾಪಿಸಿದ್ದಾರೆ.
“ಈ ವರ್ಷ ಭಾರತೀಯ ಕ್ರಿಕೆಟಿಗರ ಸಾಧನೆ ಅಮೋಘವಾದದ್ದು. ತ್ರಿಶತಕ ಗಳಿಸಿದ ಕರುಣ್ ನಾಯರ್ ಗೆ ಅಭಿನಂದನೆ. ಅವರ ಸಾಧನೆಯಿಂದ ನಮಗೆ ಹೆಮ್ಮೆಯಾಗಿದೆ. ಐಸಿಸಿ ವರ್ಷದ ಕ್ರಿಕೆಟಿಗನಾಗಿ ಆಯ್ಕೆಯಾದ ಅಶ್ವಿನ್ ರನ್ನೂ ನಾನು ಅಭಿನಂದಿಸುತ್ತೇನೆ” ಎಂದು ಕ್ರಿಕೆಟಿಗರನ್ನು ಹೊಗಳಿದ್ದಾರೆ.
ಇನ್ನೊಂದೆಡೆ15 ವರ್ಷಗಳ ನಂತರ ವಿಶ್ವಕಪ್ ಗೆದ್ದ ಕಿರಿಯರ ಹಾಕಿ ತಂಡಕ್ಕೂ ಪ್ರತ್ಯೇಕ ಅಭಿನಂದನೆ ಸಲ್ಲಿಸಿದ್ದಾರೆ. ಇದು ಈ ವರ್ಷದ ಅವರ ಕೊನೆಯ ಮನ್ ಕೀ ಬಾತ್ ಕಾರ್ಯಕ್ರಮವಾಗಿತ್ತು.
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ