Webdunia - Bharat's app for daily news and videos

Install App

ಗಣೇಶನಿಗಾಗಿ ಸಿಹಿ ವಿಶೇಷವಾಗಿ ಕಡುಬು ಮಾಡುವ ವಿಧಾನ

Webdunia
ಸೋಮವಾರ, 18 ಸೆಪ್ಟಂಬರ್ 2023 (11:58 IST)
ಇಡೀ ಭಾರತ ದೇಶವೇ ವೈಭವದಿಂದ ಆಚರಿಸಲ್ಪಡುವ ಒಂದು ಹಬ್ಬ ಅಂದರೆ ಗಣೇಶ ಚತುರ್ಥಿ. ಹಬ್ಬಗಳು ಬಂದರೆ ಸಾಕು ಸಿಹಿ ತಿನಿಸುಗಳನ್ನು ಮಾಡಬೇಕು. ಅದರಲ್ಲೂ ಗಣೇಶ ಹಬ್ಬವೆಂದರೆ ಮುಂಚಿತವಾಗಿ ಗಣಪನಿಗೆ ಇಷ್ಟವಾಗುವ ತಿಂಡಿ-ತಿನಿಸುಗಳನ್ನು ಮಾಡಿ ಸಿದ್ಧ ಮಾಡಿಕೊಳ್ಳಬೇಕು.
 
ಬೇಕಾಗುವ ಸಾಮಾಗ್ರಿಗಳು

1. ಅಕ್ಕಿ ಹಿಟ್ಟು – ಅರ್ಧ ಕೆಜಿ
2. ಬೆಲ್ಲ – 1 ಅಚ್ಚು
3. ಹುರಿಗಡಲೆ – 1/4 ಕೆಜಿ
4. ಕೊಬ್ಬರಿ ತುರಿ – 1 ಬಟ್ಟಲು
5. ಏಲಕ್ಕಿ – 2-3
6. ತುಪ್ಪ – 2 ಚಮಚ
7. ಬಾಳೆ ಎಲೆ 

ಮಾಡುವ ವಿಧಾನ

* ಬೆಲ್ಲವನ್ನು ತುರಿದುಕೊಳ್ಳಿ. ಹಾಗೆಯೇ ಹುರಿಗಡಲೆಯನ್ನು ಸ್ವಲ್ಪ ಹುರಿದು ಪುಡಿ ಮಾಡಿಕೊಳ್ಳಿ.
* ಈಗ ಒಂದು ಮಿಕ್ಸಿಂಗ್ ಬೌಲ್ಗೆ ಪುಡಿ ಮಾಡಿದ ಹುರಿಗಡಲೆ, ತುರಿದ ಬೆಲ್ಲ, ಕೊಬ್ಬರಿ ತುರಿ, ಏಲಕ್ಕಿ ಪುಡಿ ಸೇರಿಸಿ ಊರ್ಣ ತಯಾರಿಸಿಕೊಳ್ಳಿ. (ಸಿಹಿ ಜಾಸ್ತಿ ಬೇಕಾದ್ರೆ ಬೆಲ್ಲ ಸೇರಿಸಿ, ಬೇಕಿದ್ದರೆ ಗೋಡಂಬಿ, ದ್ರಾಕ್ಷಿ. ಬಾದಾಮಿಯನ್ನು ಸಣ್ಣಗೆ ಕಟ್ ಮಾಡಿ ಸೇರಿಸಬಹುದು. ಗಸಗಸೆ ಕೂಡ ಸೇರಿಸಬಹುದು)
* ಒಂದು ಅಗಲವಾದ ತಳಹತ್ತದ ಅಥವಾ ನಾನ್ ಸ್ಟಿಕ್ ಪಾತ್ರೆಗೆ ಒಂದು ಲೋಟ ನೀರು ಹಾಕಿ ಕುದಿಸಿ.
* ನೀರು ಕುದಿಯುತ್ತಿರುವಾಗ ನಿಧಾನವಾಗಿ ಅಕ್ಕಿ ಹಿಟ್ಟು ಸೇರಿಸಿ ಮಿಕ್ಸ್ ಮಾಡಿ ಹಿಟ್ಟು ಗಂಟು ಕಟ್ಟದಂತೆ ನೋಡಿಕೊಳ್ಳಿ.
* ಕೈ ಬಿಡದೇ ಹಿಟ್ಟಿನ ಕೋಲನ್ನು ಬಳಸಿ ತಿರುಗಿಸುತ್ತೀರಿ. ಈಗ 2 ಚಮಚ ತುಪ್ಪ ಸೇರಿಸಿ.
* ಹಿಟ್ಟು ತೀರ ತೆಳ್ಳಗೂ ಅಲ್ಲದೆ, ತೀರ ಗಟ್ಟಿಯಾಗಿಯೂ ಇರಬಾರದು.

* ಈಗ ಲಾಡು ಸೈಜ್ನ ಅಕ್ಕಿ ಹಿಟ್ಟಿನ ಮುದ್ದೆ ತೆಗೆದುಕೊಂಡು ಕೈಯಲ್ಲೇ ಅಗಲ ಮಾಡಿ ಒಳಗೆ ಊರ್ಣ ಇಟ್ಟು ಕಡುಬು ಶೇಪ್ನಲ್ಲಿ ಮಡಿಚಿ.
* ಹಿಟ್ಟು ಬಿಸಿ ಇರುವಾಗಲೇ ಮಾಡಬೇಕು, ಆಮೇಲೆ ಮಾಡಿದರೆ ಹಿಟ್ಟು ಒಡೆಯುತ್ತದೆ. ಬಿಸಿ ಆರಿದ್ರೆ ಬೇಕಾದಲ್ಲಿ ಮತ್ತೆ ಒಲೆಯ ಮೇಲಿಟ್ಟು ಬಿಸಿ ಮಾಡಿಕೊಳ್ಳಬಹುದು.
* ಹೀಗೆ ಮಾಡಿಟ್ಟುಕೊಂಡ ಕಡುಬುಗಳನ್ನು ಬಾಳೆಎಲೆಯಲ್ಲಿ ಅಥವಾ ಅರಿಶಿನ ಎಲೆಯ ಒಳಗಿಟ್ಟು ಇಡ್ಲಿ ಕುಕ್ಕರ್ ನಲ್ಲಿಟ್ಟು 10-12 ನಿಮಿಷ ಬೇಯಿಸಿ.

ಸಂಬಂಧಿಸಿದ ಸುದ್ದಿ

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಜ್ವರ ಬಂದು ನಾಲಿಗೆ ರುಚಿ ಕೆಟ್ಟು ಹೋಗಿದ್ದರೆ ಹೀಗೆ ಮಾಡಿ

ಮೈಗ್ರೇನ್ ತಲೆನೋವಿದ್ದರೆ ಈ ಆಹಾರಗಳಿಂದ ದೂರವಿರಿ

ದಪ್ಪಗಿರುವ ಸೊಂಟ ತೆಳ್ಳಗಾಗಿಸಲು ಈ ಯೋಗಾಸನ ಮಾಡಿ

ಮಲೇರಿಯಾ ಜ್ವರ ತಡೆಗಟ್ಟಲು ಇಲ್ಲಿದೆ ಉಪಾಯ

ಸಿಹಿ ತಿಂದ ತಕ್ಷಣ ಹುಳಿ ಸೇವಿಸಬಾರದು ಯಾಕೆ

ಮುಂದಿನ ಸುದ್ದಿ
Show comments