Webdunia - Bharat's app for daily news and videos

Install App

ದೇಶಕ್ಕಾಗಿ ವಿಶ್ವಕಪ್ ಗೆಲ್ಲಿ: ಯೂನಿಸ್‌ಗೆ ಜರ್ದಾರಿ ಕರೆ

ಪಿಸಿಬಿಯಿಂದ ಆಫ್ರಿದಿಗೆ 50 ಲಕ್ಷ ರೂ. ನಗದು ಬಹುಮಾನ

Webdunia
ಶನಿವಾರ, 20 ಜೂನ್ 2009 (19:05 IST)
PTI
ಶ್ರೀಲಂಕಾ ವಿರುದ್ಧದ ಟ್ವೆಂಟಿ-20 ವಿಶ್ವಕಪ್ ಫೈನಲ್‌ನಲ್ಲಿ ದೇಶದ ಆಟಗಾರರು ಶ್ರೇಷ್ಠ ಪ್ರದರ್ಶನ ನೀಡುವ ಮೂಲಕ ರಾಷ್ಟ್ರಕ್ಕಾಗಿ ಪ್ರಶಸ್ತಿ ಗೆದ್ದುಕೊಡುವಂತೆ ಪಾಕಿಸ್ತಾನ ಅಧ್ಯಕ್ಷ ಆಸಿಫ್ ಆಲಿ ಜರ್ದಾರಿ ತನ್ನ ತಂಡಕ್ಕೆ ಕರೆ ನೀಡಿದ್ದಾರೆ.

ದೇಶವು ತೀವ್ರ ಸಂಕಷ್ಟದಲ್ಲಿದ್ದು ಇಲ್ಲಿ ಜಯಭೇರಿ ಬಾರಿಸುವ ಮೂಲಕ ಪಾಕಿಸ್ತಾನದ ಜನತೆಯನ್ನು ಹುರಿದುಂಬಿಸಿ ಎಂದು ಯೂನಿಸ್ ಖಾನ್‌ರನ್ನು ಲಂಡನ್‌ನಲ್ಲಿ ಭೇಟಿ ಮಾಡಿದ ಅಧ್ಯಕ್ಷರು ಹೇಳಿದ್ದಾರೆ ಎಂದು ಮಾಧ್ಯಮ ವರದಿಗಳು ತಿಳಿಸಿವೆ.

" ವಿಶ್ವಕಪ್ ಗೆಲ್ಲುವ ಮೂಲಕ ದೇಶಕ್ಕೆ ವಿಶೇಷ ಕೊಡುಗೆಯನ್ನು ನೀಡಿ" ಎಂದು ಅಧ್ಯಕ್ಷರು ಯೂನಿಸ್‌ಗೆ ತಿಳಿಸಿದ್ದಾರೆ.

ಕಷ್ಟಕಾಲವನ್ನು ಎದುರಿಸುತ್ತಿರುವ ದೇಶದ ಮಿಲಿಯನ್‌ಗಟ್ಟಲೆ ಜನತೆಯ ಮುಖದಲ್ಲಿ ಮುಗುಳ್ನಗುವನ್ನು ಮರಳಿಸುವ ಸಾಮರ್ಥ್ಯ ಈಗ ತಂಡಕ್ಕಿದೆ ಎಂದು ಅಧ್ಯಕ್ಷರು ಇದೇ ಸಂದರ್ಭದಲ್ಲಿ ಅಭಿಪ್ರಾಯಪಟ್ಟಿದ್ದಾರೆ.

ತಮ್ಮ ತಂಡವು ಅಂತಿಮ ಹಂತದವರೆಗೂ ಗೆಲುವಿಗಾಗಿ ಹೋರಾಟ ನಡೆಸುತ್ತದೆ ಮತ್ತು ದೇಶದ ಜನತೆ ತಲೆ ತಗ್ಗಿಸುವಂತೆ ಮಾಡಲಾರೆವು ಎಂದು ನಾಯಕ ಯೂನಿಸ್ ಅಧ್ಯಕ್ಷರಿಗೆ ಭರವಸೆ ನೀಡಿದ್ದಾರೆ ಎಂದು ತಿಳಿದು ಬಂದಿದೆ.
pti

ಅದೇ ಹೊತ್ತಿಗೆ ಪಾಕಿಸ್ತಾನ ಕ್ರಿಕೆಟ್ ತಂಡವು ಅದ್ಭುತ ಗೆಲುವಿನೊಂದಿಗೆ ಟ್ವೆಂಟಿ-20 ವಿಶ್ವಕಪ್ ಫೈನಲ್ ಪ್ರವೇಶಿಸಿರುವ ಹಿನ್ನಲೆಯಲ್ಲಿ ಪಾಕಿಸ್ತಾನ ಕ್ರಿಕೆಟ್ ಮಂಡಳಿಯ ಅಧ್ಯಕ್ಷ ಇಜಾಜ್ ಭಟ್ ಲಂಡನ್‌ನಲ್ಲಿ ಆಟಗಾರರ ಜತೆ ಉಪಹಾರ ಸೇವಿಸಿದ್ದಲ್ಲದೆ, ಸಮಾಲೋಚನೆ ನಡೆಸಿದರು ಎಂದು ವರದಿಯಾಗಿದೆ.

ದಕ್ಷಿಣ ಆಫ್ರಿಕಾ ವಿರುದ್ಧದ ಸೆಮಿಫೈನಲ್ ಪಂದ್ಯದಲ್ಲಿ ಪಂದ್ಯ ಪುರುಷೋತ್ತಮ ಪ್ರಶಸ್ತಿ ಪಡೆದ ಆಲ್-ರೌಂಡರ್ ಶಾಹಿದ್ ಆಫ್ರಿದಿಯವರಿಗೆ ಇದೇ ಸಂದರ್ಭದಲ್ಲಿ 50 ಲಕ್ಷ ರೂಪಾಯಿ ನಗದು ಬಹುಮಾನವನ್ನು ಭಟ್ ಘೋಷಿಸಿದ್ದಾರೆ.

ಎರಡು ವರ್ಷಗಳ ಹಿಂದಿನ ವಿಶ್ವಕಪ್‌ನಲ್ಲಿ ಭಾರತ ವಿರುದ್ಧ ಸೋಲುಂಡಿದ್ದ ಪಾಕಿಸ್ತಾನ ತಂಡವು ಈ ಬಾರಿ ವಿಶ್ವಕಪ್ ಗೆದ್ದಲ್ಲಿ ಪಾಕಿಸ್ತಾನ ತಂಡದ ಆಟಗಾರರಿಗೆ ವಿಶೇಷ ಬಹುಮಾನಗಳನ್ನು ನೀಡುವುದಾಗಿಯೂ ಭಟ್ ಆಶ್ವಾಸನೆ ನೀಡಿದರು ಎಂದು ಮೂಲಗಳು ತಿಳಿಸಿವೆ.

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

RCB vs PBKS:ಆರ್‌ಸಿಬಿ ಆಟಗಾರರ ಬ್ಯಾಟಿಂಗ್‌ ಬಗ್ಗೆ ವೀರೇಂದ್ರ ಸೆಹ್ವಾಗ್ ಟೀಕೆ

IPL 2025 RCB: ಮೊದಲು ಕಪ್ ಗೆಲ್ತಾ ಇರಲಿಲ್ಲ, ಈಗ ಚಿನ್ನಸ್ವಾಮಿಯಲ್ಲೇ ಗೆಲ್ತಾ ಇಲ್ಲ

IPL 2025: ಎಲ್ಲಾ ಚೆನ್ನಾಗಿತ್ತು, ಕೊಹ್ಲಿ ಒಂದು ಸಲಹೆ ಕೊಟ್ಟಿದ್ದೇ ಕೊಟ್ಟಿದ್ದು, ಎಡವಟ್ಟಾಯ್ತು: ವಿಡಿಯೋ

IPL 2025: ಚಿನ್ನಸ್ವಾಮಿಯಲ್ಲಿ ಕಿಂಗ್ಸ್‌ ದರ್ಬಾರ್‌: ತವರಿನಲ್ಲಿ ಆರ್‌ಸಿಬಿಗೆ ಹ್ಯಾಟ್ರಿಕ್‌ ಸೋಲಿನ ಮುಖಭಂಗ

ಬಿಡುವು ನೀಡಿದ ಮಳೆರಾಯ, RCB vs PBKS ಪಂದ್ಯಾಟ ಶುರು

Show comments