Webdunia - Bharat's app for daily news and videos

Install App

ಟ್ವೆಂಟಿ20 ವಿಶ್ವಕಪ್: ಭಾರತ ತಂಡ ಸರ್ವಸನ್ನದ್ಧವಾಗಿದೆ ಎಂದ ಮಹೇಂದ್ರ ಸಿಂಗ್ ಧೋನಿ

Webdunia
ಮಂಗಳವಾರ, 8 ಮಾರ್ಚ್ 2016 (11:18 IST)
ಮೀರ್‌ಪುರ್: ಬಾಂಗ್ಲಾದಲ್ಲಿ ನಡೆದ ಏಷ್ಯಾ ಕಪ್ ಪಂದ್ಯಾವಳಿಯಲ್ಲಿ ಯಾವುದೇ ಪಂದ್ಯದಲ್ಲಿ ಸೋಲು ಕಾಣದೆ 6 ನೇ ಬಾರಿಗೆ ಏಷ್ಯಾ ಕಪ್ ಎತ್ತಿ ಹಿಡಿದು ಸಂಭ್ರಮಿಸಿದ ಭಾರತ ತಂಡದ ನಾಯಕ ಮಹೇಂದ್ರ ಸಿಂಗ್ ಧೋನಿ, ಮಾರ್ಚ್ 8 ರಿಂದ  ಪ್ರಾರಂಭವಾಗುವ ವಿಶ್ವ ಟಿ20 ಪಂದ್ಯಾವಳಿಗೆ ತಂಡ ಸಜ್ಜಾಗಿದೆ ಎಂದು ಹೇಳಿದ್ದಾರೆ.

ಬಾಂಗ್ಲಾ ತಂಡ ನೀಡಿದ್ದ 121 ರನ್‌ಗಳ ಗುರಿಯನ್ನು ಭಾರತ ಇನ್ನೂ ಏಳು ಎಸೆತಗಳು ಬಾಕಿ ಇರುವಾಗಲೇ ತಲುಪಿ 8 ವಿಕೆಟ್‌ಗಳ ಜಯ ಸಾಧಿಸಿತು.
 
ತಂಡದ ನಾಯಕ ಧೋನಿ, ಅಮೀನ್ ಹುಸೇನ್ ಎಸೆದ ಬೌಲ್‌ನಲ್ಲಿ ಸಿಕ್ಸ್ ಬಾರಿಸಿ ಪಂದ್ಯ ಮುಗಿಸಿದರು. ನಂತರ ಮಾತನಾಡಿದ ಧೋನಿ ಅಗ್ರ ಕ್ರಮಾಂಕದ ಬ್ಯಾಟ್ಸಮೆನ್‌ಗಳ ಭವ್ಯವಾದ ಪ್ರದರ್ಶನದಿಂದ ತಂಡ ಸುಲಭವಾಗಿ ಗುರಿ ತಲುಪಲು ನೆರವಾಯಿತು ಎಂದು ಹೇಳಿದರು.
 
ಬಾಂಗ್ಲಾದೇಶದ ವಿರುದ್ಧ ಗೆದ್ಧ ಭಾರತ, ಆರನೇಯ ಬಾರಿ ಏಷ್ಯಾ ಕಪ್ ತನ್ನದಾಗಿಸಿಕೊಂಡಿದೆ.
 
ಅಗ್ರ ಸ್ಥಾನದಲ್ಲಿರುವ ಬ್ಯಾಟ್ಸ್‌ಮನ್‌ಗಳು ಉತ್ತಮ ಪ್ರದರ್ಶನ ನೀಡಿದ್ದು, ಮತ್ತು ನಂತರ ಬಂದ ಬ್ಯಾಟ್ಸ್‌ಮನ್‌ಗಳು ಅದನ್ನು ಮುಂದುವರೆಸಿಕೊಂಡು ಹೋದರು. ಮುಂಬರುವ ವಿಶ್ವ ಟಿ20 ಕಪ್‌ನಲ್ಲಿ ಉತ್ತಮ ಪ್ರದರ್ಶನ ನೀಡಲು ಸಮರ್ಥರಾಗಿದ್ದೇವೆ ಎಂದು ತಿಳಿಸಿದ್ದಾರೆ.
 
ವೇಗದ ಬೌಲರ್ ಬುಮ್ರಾ ಮತ್ತು ಯುವ ಆಲ್ರೌಂಡರ್ ಹಾರ್ದಿಕ ಪಾಂಡ್ಯಾ ಉತ್ತಮ ಪ್ರದರ್ಶನ ನೀಡುತ್ತಿದ್ದಾರೆಂದು ಧೋನಿ ಹೇಳಿದ್ದಾರೆ.
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

Show comments