Webdunia - Bharat's app for daily news and videos

Install App

ಪ್ಯಾಟ್‌ ಕಮಿನ್ಸ್ ಹ್ಯಾಟ್ರಿಕ್ ಸಾಧನೆ: ಮಳೆಯ ನಡುವೆಯೂ ಬಾಂಗ್ಲಾ ವಿರುದ್ಧ ಗೆದ್ದ ಆಸ್ಟ್ರೇಲಿಯಾ

Sampriya
ಶುಕ್ರವಾರ, 21 ಜೂನ್ 2024 (14:34 IST)
Photo Courtesy X
ಆ್ಯಂಟಿಗುವಾ: ಪ್ಯಾಟ್ ಕಮಿನ್ಸ್ ಹ್ಯಾಟ್ರಿಕ್ ವಿಕೆಟ್ ಸಾಧನೆ ಮತ್ತು ಡೇವಿಡ್‌ ವಾರ್ನರ್‌ ಬ್ಯಾಟಿಂಗ್‌ ಬಲದಿಂದ ಆಸ್ಟ್ರೇಲಿಯಾ ತಂಡವು ಶುಕ್ರವಾರ ಬಾಂಗ್ಲಾದೇಶ ವಿರುದ್ಧ ನಡೆದ ಪಂದ್ಯದಲ್ಲಿ ಡಕ್‌ವರ್ತ್‌ ಲೂಯಿಸ್ ನಿಯಮದಡಿ 28 ರನ್ ಅಂತರದ ಗೆಲುವು ಸಾಧಿಸಿದೆ.

ಐಸಿಸಿ ಟ್ವೆಂಟಿ-20 ವಿಶ್ವಕಪ್ ಟೂರ್ನಿಯಲ್ಲಿ ಸೂಪರ್ ಎಂಟರ ಹಂತದ ಒಂದನೇ ಗುಂಪಿನ ಪಂದ್ಯಕ್ಕೆ ಮಳೆ ಅಡಚಣೆ ಉಂಟು ಮಾಡಿತು. ಅದರ ಹೊರತಾಗಿಯೂ ಆಸ್ಟ್ರೇಲಿಯಾ ತಂಡ ಗೆಲುವು ಪಡೆದಿದೆ.

ಮೊದಲು ಬ್ಯಾಟಿಂಗ್ ನಡೆಸಿದ ಬಾಂಗ್ಲಾದೇಶ ನಾಯಕ ನಜ್ಮುಲ್ ಹೊಸೈನ್ ಶಾಂಟೊ 41 ಹಾಗೂ ತೌಹಿದ್ ಹೃದೋಯ್ 40 ರನ್‌ಗಳ ಬಲದಿಂದ 20 ಓವರ್‌ಗಳಲ್ಲಿ ಎಂಟು ವಿಕೆಟ್ ನಷ್ಟಕ್ಕೆ 140 ರನ್ ಗಳಿಸಲಷ್ಟೇ ಸಾಧ್ಯವಾಯಿತು. ಪ್ಯಾಟ್ ಕಮಿನ್ಸ್, ಹ್ಯಾಟ್ರಿಕ್ ವಿಕೆಟ್ ಸಾಧನೆ ಮಾಡಿದರು. 29 ರನ್ ನೀಡಿದ ಕಮಿನ್ಸ್ ಮೂರು ವಿಕೆಟ್ ಗಳಿಸಿದರು. ಸ್ಪಿನ್ನರ್ ಆ್ಯಡಂ ಜಂಪಾ ಎರಡು ವಿಕೆಟ್ ಗಳಿಸಿದರು.

ಆಸ್ಟ್ರೇಲಿಯಾ ವಿಕೆಟ್ ನಷ್ಟವಿಲ್ಲದೆ 60 ರನ್ ಗಳಿಸಿದ್ದ ಸಂದರ್ಭದಲ್ಲಿ ಮಳೆ ಅಡಚಣೆ ಉಂಟು ಮಾಡಿತ್ತು. ನಂತರ ಎರಡನೇ ಬಾರಿ ಮಳೆಯಿಂದಾಗಿ ಪಂದ್ಯ ನಿಲುಗಡೆಗೊಂಡಾಗ ಆಸೀಸ್ 11.2 ಓವರ್‌ಗಳಲ್ಲಿ ಎರಡು ವಿಕೆಟ್ ನಷ್ಟಕ್ಕೆ 100 ರನ್ ಗಳಿಸಿತು. ಬಳಿಕ ಪಂದ್ಯ ಮುಂದುವರಿಸಲು ಸಾಧ್ಯವಾಗಲಿಲ್ಲ. ಹೀಗಾಗಿ, ಡಕ್‌ವರ್ತ್‌ ಲೂಯಿಸ್‌ ನಿಯಮದಂತೆ ಆಸ್ಟ್ರೇಲಿಯ ಗೆಲುವು ಪಡೆಯಿತು.

ವಾರ್ನರ್ 35 ಎಸೆತಗಳಲ್ಲಿ ಅಜೇಯ 53 ರನ್ ಗಳಿಸಿ ಗೆಲುವಿಗೆ ಮಹತ್ವದ ಕಾಣಿಕೆ ನೀಡಿದರು. ಟ್ರಾವಿಸ್ ಹೆಡ್ 31 ಹಾಗೂ ಗ್ಲೆನ್ ಮ್ಯಾಕ್ಸ್‌ವೆಲ್ ಅಜೇಯ 14 ರನ್ ಗಳಿಸಿದರು. ಬಾಂಗ್ಲಾ ಪರ ರಿಶಾದ್ ಹೊಸೈನ್ ಎರಡು ವಿಕೆಟ್ ಗಳಿಸಿದರು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಕ್ರಿಕೆಟಿಗ ರಿಂಕು ಸಿಂಗ್‌ ನಿಶ್ಚಿತಾರ್ಥ: ಕೈ ಹಿಡಿಯಲಿರುವ ಯುವತಿ ಹಿನ್ನೆಲೆ ಕೇಳಿದ್ರೆ ಶಾಕ್ ಆಗ್ತೀರಾ

French Open: ಯಾನಿಕ್‌ ಸಿನ್ನರ್‌- ಕಾರ್ಲೋಸ್‌ ಅಲ್ಕರಾಜ್‌ ಪೈಪೋಟಿಯಲ್ಲಿ ಯಾರಿಗೆ ಒಲಿಯಲಿದೆ ಫ್ರೆಂಚ್‌ ಓಪನ್‌ ಕಿರೀಟ

IPL 2025: ಆರ್‌ಸಿಬಿಗೆ ಐಪಿಎಲ್‌ ಕಿರೀಟ: ಇಡೀ ಗ್ರಾಮಕ್ಕೆ ಮಾಂಸದೂಟ ಹಾಕಿ ಸಂಭ್ರಮಿಸಿದ ಯುವಕರು

Norway Chess: ಮ್ಯಾಗ್ನಸ್ ಕಾರ್ಲ್‌ಸನ್ ಏಳನೇ ಬಾರಿ ಕಿರೀಟ: ಪ್ರಶಸ್ತಿ ರೇಸ್‌ನಲ್ಲಿದ್ದ ಗುಕೇಶ್‌ಗೆ ನಿರಾಸೆ

Chinnaswamy Stampede: ಕಾಲ್ತುಳಿತಕ್ಕೆ ಮತ್ತಷ್ಟು ವಿಕೆಟ್‌ ಪತನ: ಕೆಎಸ್‌ಸಿಎ ಪದಾಧಿಕಾರಿಗಳು ಗುಡ್‌ಬೈ

ಮುಂದಿನ ಸುದ್ದಿ
Show comments